AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಬ್ಬರ ಸೆರೆ

ಟೋಯಿಂಗ್ ಸಿಬ್ಬಂದಿ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವರು ಆ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಬ್ಬರ ಸೆರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 31, 2021 | 10:14 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಯಲಹಂಕ ನ್ಯೂಟೌನ್​ ಪೊಲೀಸರು ಆರೋಪಿಗಳಿಬ್ಬರನ್ನು ಸೆರೆಹಿಡಿದಿದ್ದಾರೆ. ಬೈಕ್ ಸವಾರರಾದ ವಿಜಯ್, ರಾಜಶೇಖರ್​ ಎಂಬವರನ್ನು ಬಂಧಿಸಿದ್ದಾರೆ. ಜುಲೈ 28ರಂದು ಯಲಹಂಕ ಬಸ್​ ನಿಲ್ದಾಣದ ಬಳಿ ಟೋಯಿಂಗ್ ಸಿಬ್ಬಂದಿ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ಮಾಡಿದ್ದರು. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬೈಕ್​ನ್ನು ಟೋಯಿಂಗ್ ಸಿಬ್ಬಂದಿಗಳು ಕೊಂಡೊಯ್ಯಲು ಹೊರಟಿದ್ದರು. ಆಗ ಟೋಯಿಂಗ್​ ವಾಹನದ ಮೇಲೇರಿ ಬೈಕ್ ಸವಾರರು ಹೆಲ್ಮೆಟ್​ನಿಂದ ಹಲ್ಲೆ ಮಾಡಿದ್ದರು.

ಟೋಯಿಂಗ್ ಸಿಬ್ಬಂದಿ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವರು ಆ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ವಾಹನ ಚೆಕ್ಕಿಂಗ್ ವೇಳೆ ಅಪಘಾತ ವಾಹನ ಚೆಕ್ಕಿಂಗ್​ ವೇಳೆ ಅಪಘಾತ ಸಂಭವಿಸಿ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾಲಿನ‌‌ ಮೂಳೆ ಕಟ್​ ಆಗಿದ್ದ ಘಟನೆಯೂ ಕೆಲವು ದಿನಗಳ ಹಿಂದೆ ಘಟಿಸಿತ್ತು. ಚಾಮರಾಜಪೇಟೆ ಮುಖ್ಯರಸ್ತೆ ಬಳಿ ಚೆಕ್ಕಿಂಗ್​ ಮಾಡುವಾಗ ಈ ಘಟನೆ ನಡೆದಿತ್ತು. ಬಸವನಗುಡಿ ಟ್ರಾಫಿಕ್ ಠಾಣೆಯ ಕಾನ್ಸ್‌ಟೇಬಲ್ ಯಲ್ಲಾಲಿಂಗ್ ಬಿಸ್ನಾಳ್ ಅವರ ಕಾಲಿನ ಮೂಳೆ ತುಂಡಾಗಿತ್ತು.​ ಬೈಕ್ ಸವಾರರು ತ್ರಿಬಲ್ ರೈಡ್ ಬರುತ್ತಿದ್ದ ವೇಳೆ, ವಾಹನದ ಫೋಟೊ ಕ್ಲಿಕ್ ಮಾಡಲು ಮುಂದಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಳಿ ಬೈಕ್​ ಬಂದಿದ್ದು, ಇದರಿಂದಾಗಿ ಸ್ವಲ್ಪ ಹಿಂದಕ್ಕೆ ಸರಿದಿದ್ದರು.

ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಟೂ ವೀಲರ್ ರಭಸವಾಗಿ ಬಿಸ್ನಾಳ್ ಅವರಿಗೆ ಗುದ್ದಿದೆ. ಈ ಪರಿಣಾಮ ಬಿಸ್ನಾಳ್ ಅವರ ಬಲಗಾಲಿನ ಮೂಳೆ ಕಟ್ ಆಗಿತ್ತು. ಬಳಿಕ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಿಸ್ನಾಳ್ ಅವರನ್ನು ಹಾಸ್ಮಟ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಡಿಸಿ ಆದೇಶ ಉಲ್ಲಂಘಿಸಿ ಲಾರಿಗಳ ಓಡಾಟ; ಚಾರ್ಮಾಡಿ ಘಾಟ್ ಬಳಿ ಬೆಳಗ್ಗೆಯಿಂದಲೇ ಟ್ರಾಫಿಕ್ ಜಾಮ್

Viral Story: ಟ್ರಾಫಿಕ್​ ಪೊಲೀಸ್​ ಮನೆಯಲ್ಲಿ ಚಿನ್ನದ ಟಾಯ್ಲೆಟ್​​

(Bike Riders who Assaulted Toying Employees in Bengaluru got Arrested)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!