AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಬ್ಬರ ಸೆರೆ

ಟೋಯಿಂಗ್ ಸಿಬ್ಬಂದಿ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವರು ಆ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಬ್ಬರ ಸೆರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 31, 2021 | 10:14 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಯಲಹಂಕ ನ್ಯೂಟೌನ್​ ಪೊಲೀಸರು ಆರೋಪಿಗಳಿಬ್ಬರನ್ನು ಸೆರೆಹಿಡಿದಿದ್ದಾರೆ. ಬೈಕ್ ಸವಾರರಾದ ವಿಜಯ್, ರಾಜಶೇಖರ್​ ಎಂಬವರನ್ನು ಬಂಧಿಸಿದ್ದಾರೆ. ಜುಲೈ 28ರಂದು ಯಲಹಂಕ ಬಸ್​ ನಿಲ್ದಾಣದ ಬಳಿ ಟೋಯಿಂಗ್ ಸಿಬ್ಬಂದಿ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ಮಾಡಿದ್ದರು. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬೈಕ್​ನ್ನು ಟೋಯಿಂಗ್ ಸಿಬ್ಬಂದಿಗಳು ಕೊಂಡೊಯ್ಯಲು ಹೊರಟಿದ್ದರು. ಆಗ ಟೋಯಿಂಗ್​ ವಾಹನದ ಮೇಲೇರಿ ಬೈಕ್ ಸವಾರರು ಹೆಲ್ಮೆಟ್​ನಿಂದ ಹಲ್ಲೆ ಮಾಡಿದ್ದರು.

ಟೋಯಿಂಗ್ ಸಿಬ್ಬಂದಿ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವರು ಆ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ವಾಹನ ಚೆಕ್ಕಿಂಗ್ ವೇಳೆ ಅಪಘಾತ ವಾಹನ ಚೆಕ್ಕಿಂಗ್​ ವೇಳೆ ಅಪಘಾತ ಸಂಭವಿಸಿ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾಲಿನ‌‌ ಮೂಳೆ ಕಟ್​ ಆಗಿದ್ದ ಘಟನೆಯೂ ಕೆಲವು ದಿನಗಳ ಹಿಂದೆ ಘಟಿಸಿತ್ತು. ಚಾಮರಾಜಪೇಟೆ ಮುಖ್ಯರಸ್ತೆ ಬಳಿ ಚೆಕ್ಕಿಂಗ್​ ಮಾಡುವಾಗ ಈ ಘಟನೆ ನಡೆದಿತ್ತು. ಬಸವನಗುಡಿ ಟ್ರಾಫಿಕ್ ಠಾಣೆಯ ಕಾನ್ಸ್‌ಟೇಬಲ್ ಯಲ್ಲಾಲಿಂಗ್ ಬಿಸ್ನಾಳ್ ಅವರ ಕಾಲಿನ ಮೂಳೆ ತುಂಡಾಗಿತ್ತು.​ ಬೈಕ್ ಸವಾರರು ತ್ರಿಬಲ್ ರೈಡ್ ಬರುತ್ತಿದ್ದ ವೇಳೆ, ವಾಹನದ ಫೋಟೊ ಕ್ಲಿಕ್ ಮಾಡಲು ಮುಂದಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಳಿ ಬೈಕ್​ ಬಂದಿದ್ದು, ಇದರಿಂದಾಗಿ ಸ್ವಲ್ಪ ಹಿಂದಕ್ಕೆ ಸರಿದಿದ್ದರು.

ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಟೂ ವೀಲರ್ ರಭಸವಾಗಿ ಬಿಸ್ನಾಳ್ ಅವರಿಗೆ ಗುದ್ದಿದೆ. ಈ ಪರಿಣಾಮ ಬಿಸ್ನಾಳ್ ಅವರ ಬಲಗಾಲಿನ ಮೂಳೆ ಕಟ್ ಆಗಿತ್ತು. ಬಳಿಕ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಿಸ್ನಾಳ್ ಅವರನ್ನು ಹಾಸ್ಮಟ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಡಿಸಿ ಆದೇಶ ಉಲ್ಲಂಘಿಸಿ ಲಾರಿಗಳ ಓಡಾಟ; ಚಾರ್ಮಾಡಿ ಘಾಟ್ ಬಳಿ ಬೆಳಗ್ಗೆಯಿಂದಲೇ ಟ್ರಾಫಿಕ್ ಜಾಮ್

Viral Story: ಟ್ರಾಫಿಕ್​ ಪೊಲೀಸ್​ ಮನೆಯಲ್ಲಿ ಚಿನ್ನದ ಟಾಯ್ಲೆಟ್​​

(Bike Riders who Assaulted Toying Employees in Bengaluru got Arrested)

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು