AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಬ್ಬರ ಸೆರೆ

ಟೋಯಿಂಗ್ ಸಿಬ್ಬಂದಿ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವರು ಆ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಬ್ಬರ ಸೆರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 31, 2021 | 10:14 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಯಲಹಂಕ ನ್ಯೂಟೌನ್​ ಪೊಲೀಸರು ಆರೋಪಿಗಳಿಬ್ಬರನ್ನು ಸೆರೆಹಿಡಿದಿದ್ದಾರೆ. ಬೈಕ್ ಸವಾರರಾದ ವಿಜಯ್, ರಾಜಶೇಖರ್​ ಎಂಬವರನ್ನು ಬಂಧಿಸಿದ್ದಾರೆ. ಜುಲೈ 28ರಂದು ಯಲಹಂಕ ಬಸ್​ ನಿಲ್ದಾಣದ ಬಳಿ ಟೋಯಿಂಗ್ ಸಿಬ್ಬಂದಿ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ಮಾಡಿದ್ದರು. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬೈಕ್​ನ್ನು ಟೋಯಿಂಗ್ ಸಿಬ್ಬಂದಿಗಳು ಕೊಂಡೊಯ್ಯಲು ಹೊರಟಿದ್ದರು. ಆಗ ಟೋಯಿಂಗ್​ ವಾಹನದ ಮೇಲೇರಿ ಬೈಕ್ ಸವಾರರು ಹೆಲ್ಮೆಟ್​ನಿಂದ ಹಲ್ಲೆ ಮಾಡಿದ್ದರು.

ಟೋಯಿಂಗ್ ಸಿಬ್ಬಂದಿ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವರು ಆ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ವಾಹನ ಚೆಕ್ಕಿಂಗ್ ವೇಳೆ ಅಪಘಾತ ವಾಹನ ಚೆಕ್ಕಿಂಗ್​ ವೇಳೆ ಅಪಘಾತ ಸಂಭವಿಸಿ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾಲಿನ‌‌ ಮೂಳೆ ಕಟ್​ ಆಗಿದ್ದ ಘಟನೆಯೂ ಕೆಲವು ದಿನಗಳ ಹಿಂದೆ ಘಟಿಸಿತ್ತು. ಚಾಮರಾಜಪೇಟೆ ಮುಖ್ಯರಸ್ತೆ ಬಳಿ ಚೆಕ್ಕಿಂಗ್​ ಮಾಡುವಾಗ ಈ ಘಟನೆ ನಡೆದಿತ್ತು. ಬಸವನಗುಡಿ ಟ್ರಾಫಿಕ್ ಠಾಣೆಯ ಕಾನ್ಸ್‌ಟೇಬಲ್ ಯಲ್ಲಾಲಿಂಗ್ ಬಿಸ್ನಾಳ್ ಅವರ ಕಾಲಿನ ಮೂಳೆ ತುಂಡಾಗಿತ್ತು.​ ಬೈಕ್ ಸವಾರರು ತ್ರಿಬಲ್ ರೈಡ್ ಬರುತ್ತಿದ್ದ ವೇಳೆ, ವಾಹನದ ಫೋಟೊ ಕ್ಲಿಕ್ ಮಾಡಲು ಮುಂದಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಳಿ ಬೈಕ್​ ಬಂದಿದ್ದು, ಇದರಿಂದಾಗಿ ಸ್ವಲ್ಪ ಹಿಂದಕ್ಕೆ ಸರಿದಿದ್ದರು.

ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಟೂ ವೀಲರ್ ರಭಸವಾಗಿ ಬಿಸ್ನಾಳ್ ಅವರಿಗೆ ಗುದ್ದಿದೆ. ಈ ಪರಿಣಾಮ ಬಿಸ್ನಾಳ್ ಅವರ ಬಲಗಾಲಿನ ಮೂಳೆ ಕಟ್ ಆಗಿತ್ತು. ಬಳಿಕ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಿಸ್ನಾಳ್ ಅವರನ್ನು ಹಾಸ್ಮಟ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಡಿಸಿ ಆದೇಶ ಉಲ್ಲಂಘಿಸಿ ಲಾರಿಗಳ ಓಡಾಟ; ಚಾರ್ಮಾಡಿ ಘಾಟ್ ಬಳಿ ಬೆಳಗ್ಗೆಯಿಂದಲೇ ಟ್ರಾಫಿಕ್ ಜಾಮ್

Viral Story: ಟ್ರಾಫಿಕ್​ ಪೊಲೀಸ್​ ಮನೆಯಲ್ಲಿ ಚಿನ್ನದ ಟಾಯ್ಲೆಟ್​​

(Bike Riders who Assaulted Toying Employees in Bengaluru got Arrested)

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ