Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ: ಇಡಿಗೆ ಕರ್ನಾಟಕ ಸರ್ಕಾರ ಬರೆದಿದ್ದ ಪತ್ರ ಬಹಿರಂಗ

ಸಿಸಿಬಿ ತನಿಖೆ ವೇಳೆ ಶ್ರೀಕೃಷ್ಣ ಆರೋಪಿಯಾಗಿರುವ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಮಾರ್ಚ್ ತಿಂಗಳಲ್ಲಿ ಇಡಿಗೆ ಪತ್ರದ ಮೂಲಕ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ಬಿಟ್ ಕಾಯಿನ್ ಹಗರಣ: ಇಡಿಗೆ ಕರ್ನಾಟಕ ಸರ್ಕಾರ ಬರೆದಿದ್ದ ಪತ್ರ ಬಹಿರಂಗ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 11, 2021 | 8:42 PM

ಬೆಂಗಳೂರು: ಬಿಟ್ ಕಾಯಿನ್ ಹಗರಣ ದಿನದಿಂದ ದಿನಕ್ಕೆ ಹೊಸರೂಪ ಪಡೆದುಕೊಳ್ಳುತ್ತಿದೆ. ಜಾರಿ ನಿರ್ದೇಶನಾಲಯಕ್ಕೆ ರಾಜ್ಯ ಸರ್ಕಾರವು ಬರೆದಿದ್ದ ಪತ್ರದಲ್ಲಿದ್ದ ಮಾಹಿತಿ ಇದೀಗ ಬಹಿರಂಗಗೊಂಡಿದೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದು ಮಾಹಿತಿ ನೀಡಿತ್ತು. 2020ರ ಡಿಸೆಂಬರ್​ನಲ್ಲಿಯೇ ಕೇಂದ್ರ ಅಪರಾಧ ದಳದ (ಸಿಸಿಬಿ) ತನಿಖೆ ವೇಳೆ ಶ್ರೀಕೃಷ್ಣ ಆರೋಪಿಯಾಗಿರುವ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಮಾರ್ಚ್ ತಿಂಗಳಲ್ಲಿ ಇಡಿಗೆ ಪತ್ರದ ಮೂಲಕ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ಸಿಸಿಬಿಯಿಂದ ಮಾಹಿತಿ ಪಡೆದು ಇಡಿ ಅಧಿಕಾರಿಗಳು‌ ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶ್ರೀಕೃಷ್ಣ ಜೈಲಿನಲ್ಲಿದ್ದಾಗಲೇ ತನಿಖೆ ನಡೆಸಿರುವ ಬೆಂಗಳೂರು ಇಡಿ ಅಧಿಕಾರಿಗಳು, 3 ಬಾರಿ ಶ್ರೀಕಿಯನ್ನು ವಶಕ್ಕೆ ಪಡೆದು ಬಿಟ್ ಕಾಯಿನ್ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.‌ ವಿದೇಶಗಳಲ್ಲಿ ಹಾಗೂ ಅಂತರಾಷ್ಟ್ರೀಯ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡಿದ್ದ ವಿಚಾರದಲ್ಲಿ ವಿಚಾರಣೆ ನಡೆಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಚಾರಣೆಗೆ ಅಧಿಕಾರವಿಲ್ಲದ ಕಾರಣ ಇಡಿಗೆ ಸಿಸಿಬಿ ಮಾಹಿತಿ ನೀಡಿದ್ದು, ಸಿಸಿಬಿ ಅಧಿಕಾರಿಗಳು ನೀಡಿದ್ದ ಮಾಹಿತಿ ಅಧರಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.‌

ತನಿಖೆಯಲ್ಲಿ ಬಿಟ್ ಕಾಯಿನ್​ಗಳನ್ನು ಅಮಾನತುಪಡಿಸಿಕೊಳ್ಳಲು ಇಬ್ಬರು ತಜ್ಞ ಅಧಿಕಾರಿಗಳನ್ನು ಪಂಚನಾಮೆಗೆ ಕಳುಹಿಸಿಕೊಡುವಂತೆ ಸಿಸಿಬಿ ಪತ್ರ ಬರೆದಿತ್ತು. ಬಿಟ್ ಕಾಯಿನ್​ಗಳನ್ನು ಭಾರತೀಯ ರೂಪಾಯಿಗೆ ವರ್ಗಾವಣೆ ಮಾಡಲು ಬಿಟ್​ ಕಾಯಿನ್ ಖಾತೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿರುವ ಪತ್ರ ಕೂಡಾ ಈಗ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ ಇದನ್ನೂ ಓದಿ: Bitcoin: ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ 60 ಸಾವಿರ ಯುಎಸ್​ಡಿ ಸಮೀಪಕ್ಕೆ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ