AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ: ಇಡಿಗೆ ಕರ್ನಾಟಕ ಸರ್ಕಾರ ಬರೆದಿದ್ದ ಪತ್ರ ಬಹಿರಂಗ

ಸಿಸಿಬಿ ತನಿಖೆ ವೇಳೆ ಶ್ರೀಕೃಷ್ಣ ಆರೋಪಿಯಾಗಿರುವ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಮಾರ್ಚ್ ತಿಂಗಳಲ್ಲಿ ಇಡಿಗೆ ಪತ್ರದ ಮೂಲಕ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ಬಿಟ್ ಕಾಯಿನ್ ಹಗರಣ: ಇಡಿಗೆ ಕರ್ನಾಟಕ ಸರ್ಕಾರ ಬರೆದಿದ್ದ ಪತ್ರ ಬಹಿರಂಗ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 11, 2021 | 8:42 PM

Share

ಬೆಂಗಳೂರು: ಬಿಟ್ ಕಾಯಿನ್ ಹಗರಣ ದಿನದಿಂದ ದಿನಕ್ಕೆ ಹೊಸರೂಪ ಪಡೆದುಕೊಳ್ಳುತ್ತಿದೆ. ಜಾರಿ ನಿರ್ದೇಶನಾಲಯಕ್ಕೆ ರಾಜ್ಯ ಸರ್ಕಾರವು ಬರೆದಿದ್ದ ಪತ್ರದಲ್ಲಿದ್ದ ಮಾಹಿತಿ ಇದೀಗ ಬಹಿರಂಗಗೊಂಡಿದೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದು ಮಾಹಿತಿ ನೀಡಿತ್ತು. 2020ರ ಡಿಸೆಂಬರ್​ನಲ್ಲಿಯೇ ಕೇಂದ್ರ ಅಪರಾಧ ದಳದ (ಸಿಸಿಬಿ) ತನಿಖೆ ವೇಳೆ ಶ್ರೀಕೃಷ್ಣ ಆರೋಪಿಯಾಗಿರುವ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಮಾರ್ಚ್ ತಿಂಗಳಲ್ಲಿ ಇಡಿಗೆ ಪತ್ರದ ಮೂಲಕ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ಸಿಸಿಬಿಯಿಂದ ಮಾಹಿತಿ ಪಡೆದು ಇಡಿ ಅಧಿಕಾರಿಗಳು‌ ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶ್ರೀಕೃಷ್ಣ ಜೈಲಿನಲ್ಲಿದ್ದಾಗಲೇ ತನಿಖೆ ನಡೆಸಿರುವ ಬೆಂಗಳೂರು ಇಡಿ ಅಧಿಕಾರಿಗಳು, 3 ಬಾರಿ ಶ್ರೀಕಿಯನ್ನು ವಶಕ್ಕೆ ಪಡೆದು ಬಿಟ್ ಕಾಯಿನ್ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.‌ ವಿದೇಶಗಳಲ್ಲಿ ಹಾಗೂ ಅಂತರಾಷ್ಟ್ರೀಯ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡಿದ್ದ ವಿಚಾರದಲ್ಲಿ ವಿಚಾರಣೆ ನಡೆಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಚಾರಣೆಗೆ ಅಧಿಕಾರವಿಲ್ಲದ ಕಾರಣ ಇಡಿಗೆ ಸಿಸಿಬಿ ಮಾಹಿತಿ ನೀಡಿದ್ದು, ಸಿಸಿಬಿ ಅಧಿಕಾರಿಗಳು ನೀಡಿದ್ದ ಮಾಹಿತಿ ಅಧರಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.‌

ತನಿಖೆಯಲ್ಲಿ ಬಿಟ್ ಕಾಯಿನ್​ಗಳನ್ನು ಅಮಾನತುಪಡಿಸಿಕೊಳ್ಳಲು ಇಬ್ಬರು ತಜ್ಞ ಅಧಿಕಾರಿಗಳನ್ನು ಪಂಚನಾಮೆಗೆ ಕಳುಹಿಸಿಕೊಡುವಂತೆ ಸಿಸಿಬಿ ಪತ್ರ ಬರೆದಿತ್ತು. ಬಿಟ್ ಕಾಯಿನ್​ಗಳನ್ನು ಭಾರತೀಯ ರೂಪಾಯಿಗೆ ವರ್ಗಾವಣೆ ಮಾಡಲು ಬಿಟ್​ ಕಾಯಿನ್ ಖಾತೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿರುವ ಪತ್ರ ಕೂಡಾ ಈಗ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ ಇದನ್ನೂ ಓದಿ: Bitcoin: ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ 60 ಸಾವಿರ ಯುಎಸ್​ಡಿ ಸಮೀಪಕ್ಕೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?