AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ: ಇಡಿಗೆ ಕರ್ನಾಟಕ ಸರ್ಕಾರ ಬರೆದಿದ್ದ ಪತ್ರ ಬಹಿರಂಗ

ಸಿಸಿಬಿ ತನಿಖೆ ವೇಳೆ ಶ್ರೀಕೃಷ್ಣ ಆರೋಪಿಯಾಗಿರುವ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಮಾರ್ಚ್ ತಿಂಗಳಲ್ಲಿ ಇಡಿಗೆ ಪತ್ರದ ಮೂಲಕ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ಬಿಟ್ ಕಾಯಿನ್ ಹಗರಣ: ಇಡಿಗೆ ಕರ್ನಾಟಕ ಸರ್ಕಾರ ಬರೆದಿದ್ದ ಪತ್ರ ಬಹಿರಂಗ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Edited By: |

Updated on: Nov 11, 2021 | 8:42 PM

Share

ಬೆಂಗಳೂರು: ಬಿಟ್ ಕಾಯಿನ್ ಹಗರಣ ದಿನದಿಂದ ದಿನಕ್ಕೆ ಹೊಸರೂಪ ಪಡೆದುಕೊಳ್ಳುತ್ತಿದೆ. ಜಾರಿ ನಿರ್ದೇಶನಾಲಯಕ್ಕೆ ರಾಜ್ಯ ಸರ್ಕಾರವು ಬರೆದಿದ್ದ ಪತ್ರದಲ್ಲಿದ್ದ ಮಾಹಿತಿ ಇದೀಗ ಬಹಿರಂಗಗೊಂಡಿದೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದು ಮಾಹಿತಿ ನೀಡಿತ್ತು. 2020ರ ಡಿಸೆಂಬರ್​ನಲ್ಲಿಯೇ ಕೇಂದ್ರ ಅಪರಾಧ ದಳದ (ಸಿಸಿಬಿ) ತನಿಖೆ ವೇಳೆ ಶ್ರೀಕೃಷ್ಣ ಆರೋಪಿಯಾಗಿರುವ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಮಾರ್ಚ್ ತಿಂಗಳಲ್ಲಿ ಇಡಿಗೆ ಪತ್ರದ ಮೂಲಕ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ಸಿಸಿಬಿಯಿಂದ ಮಾಹಿತಿ ಪಡೆದು ಇಡಿ ಅಧಿಕಾರಿಗಳು‌ ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶ್ರೀಕೃಷ್ಣ ಜೈಲಿನಲ್ಲಿದ್ದಾಗಲೇ ತನಿಖೆ ನಡೆಸಿರುವ ಬೆಂಗಳೂರು ಇಡಿ ಅಧಿಕಾರಿಗಳು, 3 ಬಾರಿ ಶ್ರೀಕಿಯನ್ನು ವಶಕ್ಕೆ ಪಡೆದು ಬಿಟ್ ಕಾಯಿನ್ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.‌ ವಿದೇಶಗಳಲ್ಲಿ ಹಾಗೂ ಅಂತರಾಷ್ಟ್ರೀಯ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡಿದ್ದ ವಿಚಾರದಲ್ಲಿ ವಿಚಾರಣೆ ನಡೆಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಚಾರಣೆಗೆ ಅಧಿಕಾರವಿಲ್ಲದ ಕಾರಣ ಇಡಿಗೆ ಸಿಸಿಬಿ ಮಾಹಿತಿ ನೀಡಿದ್ದು, ಸಿಸಿಬಿ ಅಧಿಕಾರಿಗಳು ನೀಡಿದ್ದ ಮಾಹಿತಿ ಅಧರಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.‌

ತನಿಖೆಯಲ್ಲಿ ಬಿಟ್ ಕಾಯಿನ್​ಗಳನ್ನು ಅಮಾನತುಪಡಿಸಿಕೊಳ್ಳಲು ಇಬ್ಬರು ತಜ್ಞ ಅಧಿಕಾರಿಗಳನ್ನು ಪಂಚನಾಮೆಗೆ ಕಳುಹಿಸಿಕೊಡುವಂತೆ ಸಿಸಿಬಿ ಪತ್ರ ಬರೆದಿತ್ತು. ಬಿಟ್ ಕಾಯಿನ್​ಗಳನ್ನು ಭಾರತೀಯ ರೂಪಾಯಿಗೆ ವರ್ಗಾವಣೆ ಮಾಡಲು ಬಿಟ್​ ಕಾಯಿನ್ ಖಾತೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿರುವ ಪತ್ರ ಕೂಡಾ ಈಗ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ ಇದನ್ನೂ ಓದಿ: Bitcoin: ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ 60 ಸಾವಿರ ಯುಎಸ್​ಡಿ ಸಮೀಪಕ್ಕೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್