AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಟೈನರ್ ಟ್ರಕ್​ಗೆ ಡಿಕ್ಕಿ ಹೊಡೆದ BMW ಕಾರು, ನಾಲ್ವರು ಸ್ಥಳದಲ್ಲೇ ಸಾವು

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಟೈನರ್ ಟ್ರಕ್ ಬಿಎಂಡಬ್ಲ್ಯು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಟೈನರ್ ಟ್ರಕ್​ಗೆ ಡಿಕ್ಕಿ ಹೊಡೆದ BMW ಕಾರು, ನಾಲ್ವರು ಸ್ಥಳದಲ್ಲೇ ಸಾವು
BMW car collides with container truck on Purvanchal Expressway, four die on the spo
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 17, 2022 | 11:26 AM

Share

ಹಲಿಯಾಪುರ: ಉತ್ತರ ಪ್ರದೇಶದ (Uttar Pradesh )ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ (purvanchal Expressway) ಕಂಟೈನರ್ ಟ್ರಕ್ ಬಿಎಂಡಬ್ಲ್ಯು (BMW)ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಲ್ತಾನ್‌ಪುರದಿಂದ ಹೊರಟಿದ್ದ ಬಿಎಂಡಬ್ಲ್ಯು ಕಾರು ಶುಕ್ರವಾರ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಸ್‌ಪ್ರೆಸ್‌ವೇಯಲ್ಲಿ ಎದುರಿನಿಂದ ಬಂದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ.

ವರದಿಗಳ ಪ್ರಕಾರ, ಕಂಟೈನರ್ ಟ್ರಕ್ ಹೊಡೆದ ರಭಸಕ್ಕೆ ಕಾರಿನ ಎಂಜಿನ್ ಮತ್ತು ಎಲ್ಲಾ ನಾಲ್ವರು ಪ್ರಯಾಣಿಕರು ಹಾರಿಹೋಗಿ ಸ್ವಲ್ಪ ದೂರದಲ್ಲಿ ಬಿದ್ದಿದ್ದಾರೆ. ಪೊಲೀಸರು ಮತ್ತು ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ (ಯುಪಿಇಐಡಿಎ) ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದರು.

ಇದನ್ನು ಓದಿ: ದೇವಾಲಯದಲ್ಲಿ ಬಾಲ್ಯ ವಿವಾಹ ನಡೆಸಿದ ಮೂವರು ಅರ್ಚಕರ ಬಂಧನ

ಈ ಘಟನೆ ನಡೆಯುವ ಮುನ್ನ ಕಾರು ಚಲಾಯಿಸುತ್ತಿದ್ದ ವ್ಯಕ್ತಿಗೆ ತನ್ನ ಪಕ್ಕದಲ್ಲೇ ಕೂತಿದ್ದ ಮತ್ತೊಬ್ಬ ಸ್ನೇಹಿತ ನಿಧಾನವಾಗಿ ಹೋಗುವಂತೆ ಎಚ್ಚರಿಸುತ್ತಿದ್ದ ಎಂದು ವರದಿಯಲ್ಲಿ ಹೇಳಾಗಿದೆ. ಅಪಘಾತಕ್ಕೆ ಕಾರು ವೇಗವಾಗಿ ಬಂದಿರುವುದೇ ಕಾರಣ ಎಂದು ಹೇಳಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಮಾಡುತ್ತಿದ್ದ ಇನ್ನೊಂದು ಕಾರಿನವರು ಈ ಆ ಕಾರ ಅಪಘಾತವಾಗುತ್ತದೆ ಎಂದು ಹೇಳುತ್ತಿರವುದನ್ನು ಕೇಳಬಹುದು . 1.2 ಕೋಟಿ ರೂ. ಬೆಲೆಯ BMW ಕಾರು ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಶ್ ಕುಮಾರ್ ಮತ್ತು ಅಧೀಕ್ಷಕ ಪಿ ಸೋಮೆನ್ ಬರ್ಮಾ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎಸ್‌ಡಿಎಂಗೆ ಸೂಚಿಸಿದರು. ಮೃತರನ್ನು ಬಿಹಾರದ ಡೆಹ್ರಿ ನಿವಾಸಿ ಆನಂದ್ ಪ್ರಕಾಶ್ (35), ಬಿಹಾರದ ಔರಂಗಾಬಾದ್ ಮೂಲದ ಅಖಿಲೇಶ್ ಸಿಂಗ್ (35) ಮತ್ತು ದೀಪಕ್ ಕುಮಾರ್ (37) ಎಂದು ಗುರುತಿಸಲಾಗಿದ್ದು, ನಾಲ್ಕನೇ ಮೃತರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಿಎಂ ತಿಳಿಸಿದ್ದಾರೆ.

Published On - 11:26 am, Mon, 17 October 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್