AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಒಟ್ಟಿಗೇ ಕಾಡಿಗೆ ಹೋಗಿ, ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟ ಮೂವರು ಯುವತಿಯರು !

ಶನಿವಾರ ಸಂಜೆಯ ಹೊತ್ತಿಗೆ ಇವರು ಮೂರು ಜನ ಒಟ್ಟಿಗೇ ಸಮೀಪದ ಅರಣ್ಯ ಪ್ರದೇಶಕ್ಕೆ ಹೋಗುವುದನ್ನು ನೋಡಿದವರು ಇದ್ದಾರೆ. ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ರಾತ್ರಿ 9.30 ಆದರೂ ಹುಡುಗಿಯರು ಬಾರದೆ ಇದ್ದಾಗ ತಕ್ಷಣ ಅವರನ್ನು ಹುಡುಕುತ್ತ ಹೋಗಿದ್ದಾರೆ. 

Shocking News: ಒಟ್ಟಿಗೇ ಕಾಡಿಗೆ ಹೋಗಿ, ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟ ಮೂವರು ಯುವತಿಯರು !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 10, 2022 | 5:26 PM

Share

ಒಡಿಶಾದ ನವರಂಗಪುರದಲ್ಲೊಂದು ದುರಂತ ನಡೆದಿದೆ. ನಿನ್ನೆ ಸಂಜೆ ಸುಮಾರು 4.30ಕ್ಕೆ ಒಟ್ಟಿಗೇ ಕಾಡಿಗೆ ಹೋದ ಮೂವರು ಹುಡುಗಿಯರು ರಾತ್ರಿ ಹೊತ್ತಿಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅದರಲ್ಲೂ ಒಂದೇ ಮರಕ್ಕೆ ಮೂವರೂ ನೇಣು ಬಿಗಿದುಕೊಂಡಿದ್ದಾರೆ. ಅದ್ಯಾಕೆ ಒಟ್ಟಿಗೇ ಕಾಡಿಗೆ ಹೋಗಿ, ಹೀಗೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಬಹುದೊಡ್ಡ ಪ್ರಶ್ನೆ. ಕುಟುಂಬದವರ, ಹೆತ್ತವರು ಆಕ್ರಂದಿಸುತ್ತಿದ್ದಾರೆ. ಊರಲ್ಲಿ ಪ್ರತಿಯೊಬ್ಬರೂ ಶಾಕ್​​ನಲ್ಲಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಶುರುವಿಟ್ಟುಕೊಂಡಿದ್ದಾರೆ. ಮೃತ ಯುವತಿಯರನ್ನು ತೊಹಾರಾ ಎಂಬ ಹಳ್ಳಿಯ ನಿವಾಸಿಗಳಾದ ಹೇಮಲತಾ ಗೌಡಾ (21), ಕೌಸಲ್ಯಾ ಮಜ್ಹಿ (17) ಮತ್ತು ಫುಲಮತಿ ಮಜ್ಹಿ (16) ಎಂದು ಗುರುತಿಸಲಾಗಿದೆ. ಇವರಲ್ಲಿ ಕೌಸಲ್ಯಾ ಮತ್ತು ಫುಲಮತಿ ಇನ್ನೂ ಅಪ್ರಾಪ್ತರೆಂದು ಹೇಳಲಾಗುತ್ತಿದ್ದರೂ, ಉಮೇರಕೋಟೆ ಜಗತ್​ ತಹಸೀಲ್ದಾರ್​ ಜಿಬನ್​ ಚೌಧರಿ ಅದನ್ನು ನಿರಾಕರಿಸಿದ್ದಾರೆ. ಮೃತರೆಲ್ಲರೂ 18 ವರ್ಷ ಮೇಲ್ಪಟ್ಟವರು ಎಂದೇ ಹೇಳುತ್ತಿದ್ದಾರೆ. 

ಶನಿವಾರ ಸಂಜೆಯ ಹೊತ್ತಿಗೆ ಇವರು ಮೂರು ಜನ ಒಟ್ಟಿಗೇ ಸಮೀಪದ ಅರಣ್ಯ ಪ್ರದೇಶಕ್ಕೆ ಹೋಗುವುದನ್ನು ನೋಡಿದವರು ಇದ್ದಾರೆ. ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ರಾತ್ರಿ 9.30 ಆದರೂ ಹುಡುಗಿಯರು ಬಾರದೆ ಇದ್ದಾಗ ತಕ್ಷಣ ಅವರನ್ನು ಹುಡುಕುತ್ತ ಹೋಗಿದ್ದಾರೆ.  ಕಾಡಿನಲ್ಲಿ ಸ್ವಲ್ಪ ಹೊತ್ತು ಹುಡುಕಿದ ಸ್ಥಳೀಯರಿಗೆ ಒಂದೇ ಮರಕ್ಕೆ ಮೂವರ ಶವವನೂ ನೇತಾಡುತ್ತಿರುವ ದೃಶ್ಯ ಕಂಡಿದೆ. ಅದನ್ನು ನೋಡಿ ಹೌಹಾರಿದ ಸ್ಥಳೀಯರು, ಕೂಡಲೇ ಪೊಲೀಸರಿಗೆ ಫೋನ್ ಮಾಡಿದ್ದಾರೆ.

ಕುಟುಂಬದ ಸದಸ್ಯರನ್ನು ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಇವರಿಗೆ ಯಾವುದಾದರೂ ಬೇಸರವಾಗಿತ್ತಾ? ಎಂಬಿತ್ಯಾದಿ ಪ್ರಶ್ನೆಗಳನ್ನೂ ಕೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್​​ಪಿ ಸ್ಮಿತ್​ ಪರಶೋತ್ತಮದಾಸ್​ ಪಾರ್ಮರ್​, ನಾವು ಮೃತ ಯುವತಿಯರ ಸಂಬಂಧಿಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಶವಗಳನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಇದೊಂದು ಆತ್ಮಹತ್ಯೆ ಎಂಬುದನ್ನು ಪ್ರಾಥಮಿಕ ತನಿಖೆಗಳು ಹೇಳುತ್ತವೆ. ಹಾಗಿದ್ದಾಗ್ಯೂ ಇನ್ನಷ್ಟು ಆಳವಾಗಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮೃತ ಯುವತಿಯರ ಸಂಬಂಧಿಯಾದ ಬಿಸ್ವಾಂಬರ್​ ಮಜ್ಹಿ ಪ್ರತಿಕ್ರಿಯೆ ನೀಡಿ, ಹುಡುಗಿಯರು ಕಾಣೆಯಾಗಿದ್ದಾರೆ ಎಂಬ ಬಗ್ಗೆ ನಿನ್ನೆ ಸಂಜೆ ಹೊತ್ತಿಗೆ ಗೊತ್ತಾಯಿತು. ನಾವು ಅವರಿಗಾಗಿ ಹುಡುಕಲು ಶುರು ಮಾಡಿದೆವು. ಗ್ರಾಮದ ಮೂಲೆಮೂಲೆಯಲ್ಲಿ ಹುಡುಕಿದರೂ ಅವರ ಸುಳಿವು ಸಿಗಲಿಲ್ಲ. ಬಳಿಕ ಅವರು ಕಾಡಿಗೆ ಹೋಗಿದ್ದನ್ನು ನೋಡಿದವರು ಯಾರೋ ಹೇಳಿದರು. ಕೂಡಲೇ ಅಲ್ಲಿಗೆ ಹೋಗಿ ಹುಡುಕಲು ಶುರು ಮಾಡಿದೆವು. ಆಗ ಅವರ ಶವ ಮರದ ಮೇಲೆ ನೇತಾಡುತ್ತಿದ್ದುದು ಕಂಡುಬಂತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿಮದುವೆ ದಿನ ಹತ್ತಿರ ಬಂದಂತೆ ಮನೆಬಿಟ್ಟು ಹೊರಬರುತ್ತಿಲ್ಲ ಆಲಿಯಾ ಭಟ್​; ನಟಿಗೆ ಕಾಡುತ್ತಿದೆ ಭಯ

Published On - 5:23 pm, Sun, 10 April 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್