AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಆಸ್ಪತ್ರೆಯ ಕೊಠಡಿಯೊಂದರಲ್ಲಿ ತಾಯಿ-ಮಗಳ ಮೃತದೇಹ ಪತ್ತೆ, ಕೊಲೆ ಶಂಕೆ

ಅಹಮದಾಬಾದ್​ನ ಭೂಭಾಯ್ ಪಾರ್ಕ್​ ಬಳಿಯಿರುವ ಆಸ್ಪತ್ರೆಯ ಕೊಠಡಿಯೊಂದರಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದೆ. ಆಪರೇಷನ್ ಥಿಯೇಟರ್​ನ ಕಬೋರ್ಡ್​ನಲ್ಲಿ ಮಗಳ ಶವ ಪತ್ತೆಯಾಗಿದ್ದು, ನಂತರ ಹಾಸಿಗೆಯ ಕೆಳಗೆ ತಾಯಿಯ ಶವ ಪತ್ತೆಯಾಗಿದೆ.

ಗುಜರಾತ್​ನ ಆಸ್ಪತ್ರೆಯ ಕೊಠಡಿಯೊಂದರಲ್ಲಿ ತಾಯಿ-ಮಗಳ ಮೃತದೇಹ ಪತ್ತೆ, ಕೊಲೆ ಶಂಕೆ
ಸಾಂದರ್ಭಿಕ ಚಿತ್ರImage Credit source: NDTV
TV9 Web
| Edited By: |

Updated on: Dec 22, 2022 | 6:28 AM

Share

ಅಹಮದಾಬಾದ್​ನ ಭೂಭಾಯ್ ಪಾರ್ಕ್​ ಬಳಿಯಿರುವ ಆಸ್ಪತ್ರೆಯ ಕೊಠಡಿಯೊಂದರಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದೆ. ಆಪರೇಷನ್ ಥಿಯೇಟರ್​ನ ಕಬೋರ್ಡ್​ನಲ್ಲಿ ಮಗಳ ಶವ ಪತ್ತೆಯಾಗಿದ್ದು, ನಂತರ ಹಾಸಿಗೆಯ ಕೆಳಗೆ ತಾಯಿಯ ಶವ ಪತ್ತೆಯಾಗಿದೆ. ಚಿಕಿತ್ಸೆಗಾಗಿ ತಾಯಿ ಮತ್ತು ಮಗಳು ಆಸ್ಪತ್ರೆಗೆ ಬಂದಿದ್ದರು ಎಂದು ಎಸಿಪಿ ಮಿಲಾಪ್ ಪಟೇಲ್ ತಿಳಿಸಿದರು. ಮಗಳ ಶವ ಪತ್ತೆಯಾದ ಬಳಿಕ ತಾಯಿಯ ಪತ್ತೆಗೆ ಪೊಲೀಸರು ತನಿಖೆ ನಡೆಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ತಾಯಿಯ ಶವವೂ ಪತ್ತೆಯಾಗಿದೆ.

ಈ ಸಂಬಂಧ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮನ್ಸುಖ್ ಎಂಬಾತನನ್ನು ಬಂಧಿಸಲಾಗಿದೆ. ಅಹಮದಾಬಾದ್‌ನ ಕಗ್ಡಾಪಿತ್ ಪೊಲೀಸ್ ಠಾಣೆ ವ್ಯಾಪ್ತಿಯ ಭೂಲಾಭಾಯಿ ಪಾರ್ಕ್ ಬಳಿ ಇರುವ ಆಸ್ಪತ್ರೆಯೊಳಗೆ ಬಂದಿರುವ ಮಾಹಿತಿಯ ಪ್ರಕಾರ ಕೊಠಡಿಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯ ಆಪರೇಷನ್ ಥಿಯೇಟರ್ ಒಳಗಿದ್ದ ಬೀರುವಿನಿಂದ ವಾಸನೆ ಬರುತ್ತಿತ್ತು ಅದನ್ನು ತೆರೆದು ನೋಡಿದಾಗ ಶವ ಸಿಕ್ಕಿದೆ. ಆಕೆಗೆ 6 ವರ್ಷಗಳ ಹಿಂದೆ ವಿವಾಹವಾಗಿತ್ತು. ಯುವತಿ ತನ್ನ ತಂದೆಯ ಮನೆಯಲ್ಲಿದ್ದಳು, ಅರ್ಪಿತ್ ಶಾ ಅವರ ಕ್ಲಿನಿಕ್‌ಗೆ ಬಾಲಕಿ ಕಿವಿ ಚಿಕಿತ್ಸೆಗಾಗಿ ಬರುತ್ತಿದ್ದಳು. ಮನ್ಸುಖ್ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ.

ಮನ್ಸುಖ್ ಈ ಕ್ಲಿನಿಕ್ ನಲ್ಲಿ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದು, ಬಾಲಕಿಗೆ ಪರಿಚಯದವನಾಗಿದ್ದಾನೆ. ವೈದ್ಯರ ಚಿಕಿತ್ಸಾಲಯದಲ್ಲಿ ಮತ್ತೊಂದು ಮೃತದೇಹವೂ ಪತ್ತೆಯಾಗಿದೆ. ಇದು ಬಾಲಕಿಯ ತಾಯಿಯದ್ದಾಗಿತ್ತು. ಈ ಬಾಲಕಿಯ ಶವ ಇಲ್ಲಿಗೆ ಹೇಗೆ ಬಂತು ಎಂಬುದನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ.

ಮತ್ತೊಂದೆಡೆ, ಪ್ರಾಥಮಿಕವಾಗಿ ಬಾಲಕಿಯನ್ನು ಹತ್ಯೆಗೈದಿರುವ ಶಂಕೆಯ ಆಧಾರದ ಮೇಲೆ ಪೊಲೀಸರು ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಆಸ್ಪತ್ರೆಯೊಳಗೆ ಪತ್ತೆಯಾಗಿರುವ ಶವ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ಆದರೆ, ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತ ಬಾಲಕಿಯ ಹೆಸರು ಭಾರತಿ ವಾಲಾ ಎಂದು ತಿಳಿದು ಬಂದಿದೆ.

ಮೃತ ಭಾರತಿ ಮಿತಿಮೀರಿದ ಔಷಧ ಸೇವನೆ ಅಥವಾ ಇಂಜೆಕ್ಷನ್ ನಿಂದಾಗಿ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಚಾರದಲ್ಲಿ ಭಾರತಿ ಆಸ್ಪತ್ರೆಯ ಯುವಕನೊಂದಿಗೆ ಸಂಪರ್ಕದಲ್ಲಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ