AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

ಮಹಿಳೆಯ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಇನ್ನೋರ್ವನ ಜೊತೆ ಸೇರಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿರುವುದಾಗಿ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!
ಖೋಟಾ ನೋಟು ಪ್ರಿಂಟ್ ​ಮಾಡ್ತಿದ್ದ ಆರೋಪಿಗಳ ಬಂಧನ
shruti hegde
| Edited By: |

Updated on: Dec 27, 2020 | 1:28 PM

Share

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಮಾಲೀಕಳನ್ನು ಕೊಲೆಗೈದಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನ್ಸಾರಿ ಅಲಿಯಾಸ್ ಶಾಹುಲ್ ಹಮೀದ್ ಬಂಧಿತ ಆರೋಪಿ.ಬಾಡಿಗೆ ಮನೆ ಕೇಳೋ ನೆಪದಲ್ಲಿ ಬಂದಿದ್ದ ಅನ್ಸಾರಿ ನಿರ್ಮಲ ಮೇರಿ ಎಂಬುವವರನ್ನು ಹತ್ಯೆಗೈದು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಇದೀಗ, ಅಚ್ಚರಿಯ ಸಂಗತಿಯೆಂದರೆ ವಿಚಾರಣೆ ವೇಳೆ ಪೊಲೀಸರಿಗೆ ಆರೋಪಿಯ ಮತ್ತೊಂದು ಕರಾಮತ್ತು ಪತ್ತೆಯಾಗಿದೆ. ಹೌದು, ತನಿಖೆ ವೇಳೆ ಪೊಲೀಸರಿಗೆ ಆರೋಪಿ ಅನ್ಸಾರಿ ನಕಲಿ ನೋಟ್ ಪ್ರಿಂಟ್​ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಅಂದ ಹಾಗೆ, ಅನ್ಸಾರಿ ಹೆಸರಿನಲ್ಲಿ ನೆರೆಯ ಕೇರಳದಲ್ಲಿ 30 ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಈ ಐನಾತಿ ಕಿಲಾಡಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಸಿಲಿಕಾನ್​ ಸಿಟಿಯಲ್ಲಿ ಬಂದು ನೆಲೆಸಿದ್ದ. ಆದರೆ, ಕಿರಾತಕ ತನ್ನ ಹಳೇ ಚಾಳಿಗಳನ್ನು ಮಾತ್ರ ಬಿಡಲಿಲ್ಲ.

ನಗರದಲ್ಲಿ ಪ್ರದೀಪ್​ ಎಂಬಾತನ ಜೊತೆ ಸೇರಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡೋ ಕೆಲಸಕ್ಕೆ ಕೈ ಹಾಕಿದ್ದಾನೆ. ಸದ್ಯ, ವಿಚಾರಣೆ ವೇಳೆ ಅನ್ಸಾರಿ ಈ ಬಗ್ಗೆ ತಪ್ಪೊಪ್ಪಿಕೊಂಡಿದ್ದು ಆತ ನೀಡಿದ ಸುಳಿವಿನ ಬೆನ್ನತ್ತಿದ ಖಾಕಿ ಪಡೆ ಈ ನಕಲಿ ನೋಟ್​ ಜಾಲದ ಮತ್ತೊಬ್ಬ ಆರೋಪಿಯಾದ ಪ್ರದೀಪ್​ನನ್ನು ಸಹ ಅರೆಸ್ಟ್ ಮಾಡಿದ್ದಾರೆ.

ಸದ್ಯ, ಇಬ್ಬರು ಆರೋಪಿಗಳಿಂದ 10 ಸಾವಿರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದ ಹಾಗೆ, ಕೊಲೆ ಮಾತ್ರವಲ್ಲದೇ ಈ ಕಿರಾತಕರು 8 ಸರಗಳ್ಳತನದ ಪ್ರಕರಗಳಲ್ಲಿ ಸಹ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ