AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

ಮಹಿಳೆಯ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಇನ್ನೋರ್ವನ ಜೊತೆ ಸೇರಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿರುವುದಾಗಿ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!
ಖೋಟಾ ನೋಟು ಪ್ರಿಂಟ್ ​ಮಾಡ್ತಿದ್ದ ಆರೋಪಿಗಳ ಬಂಧನ
shruti hegde
| Edited By: |

Updated on: Dec 27, 2020 | 1:28 PM

Share

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಮಾಲೀಕಳನ್ನು ಕೊಲೆಗೈದಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನ್ಸಾರಿ ಅಲಿಯಾಸ್ ಶಾಹುಲ್ ಹಮೀದ್ ಬಂಧಿತ ಆರೋಪಿ.ಬಾಡಿಗೆ ಮನೆ ಕೇಳೋ ನೆಪದಲ್ಲಿ ಬಂದಿದ್ದ ಅನ್ಸಾರಿ ನಿರ್ಮಲ ಮೇರಿ ಎಂಬುವವರನ್ನು ಹತ್ಯೆಗೈದು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಇದೀಗ, ಅಚ್ಚರಿಯ ಸಂಗತಿಯೆಂದರೆ ವಿಚಾರಣೆ ವೇಳೆ ಪೊಲೀಸರಿಗೆ ಆರೋಪಿಯ ಮತ್ತೊಂದು ಕರಾಮತ್ತು ಪತ್ತೆಯಾಗಿದೆ. ಹೌದು, ತನಿಖೆ ವೇಳೆ ಪೊಲೀಸರಿಗೆ ಆರೋಪಿ ಅನ್ಸಾರಿ ನಕಲಿ ನೋಟ್ ಪ್ರಿಂಟ್​ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಅಂದ ಹಾಗೆ, ಅನ್ಸಾರಿ ಹೆಸರಿನಲ್ಲಿ ನೆರೆಯ ಕೇರಳದಲ್ಲಿ 30 ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಈ ಐನಾತಿ ಕಿಲಾಡಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಸಿಲಿಕಾನ್​ ಸಿಟಿಯಲ್ಲಿ ಬಂದು ನೆಲೆಸಿದ್ದ. ಆದರೆ, ಕಿರಾತಕ ತನ್ನ ಹಳೇ ಚಾಳಿಗಳನ್ನು ಮಾತ್ರ ಬಿಡಲಿಲ್ಲ.

ನಗರದಲ್ಲಿ ಪ್ರದೀಪ್​ ಎಂಬಾತನ ಜೊತೆ ಸೇರಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡೋ ಕೆಲಸಕ್ಕೆ ಕೈ ಹಾಕಿದ್ದಾನೆ. ಸದ್ಯ, ವಿಚಾರಣೆ ವೇಳೆ ಅನ್ಸಾರಿ ಈ ಬಗ್ಗೆ ತಪ್ಪೊಪ್ಪಿಕೊಂಡಿದ್ದು ಆತ ನೀಡಿದ ಸುಳಿವಿನ ಬೆನ್ನತ್ತಿದ ಖಾಕಿ ಪಡೆ ಈ ನಕಲಿ ನೋಟ್​ ಜಾಲದ ಮತ್ತೊಬ್ಬ ಆರೋಪಿಯಾದ ಪ್ರದೀಪ್​ನನ್ನು ಸಹ ಅರೆಸ್ಟ್ ಮಾಡಿದ್ದಾರೆ.

ಸದ್ಯ, ಇಬ್ಬರು ಆರೋಪಿಗಳಿಂದ 10 ಸಾವಿರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದ ಹಾಗೆ, ಕೊಲೆ ಮಾತ್ರವಲ್ಲದೇ ಈ ಕಿರಾತಕರು 8 ಸರಗಳ್ಳತನದ ಪ್ರಕರಗಳಲ್ಲಿ ಸಹ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ