AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

ಮಹಿಳೆಯ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಇನ್ನೋರ್ವನ ಜೊತೆ ಸೇರಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿರುವುದಾಗಿ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!
ಖೋಟಾ ನೋಟು ಪ್ರಿಂಟ್ ​ಮಾಡ್ತಿದ್ದ ಆರೋಪಿಗಳ ಬಂಧನ
shruti hegde
| Edited By: |

Updated on: Dec 27, 2020 | 1:28 PM

Share

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಮಾಲೀಕಳನ್ನು ಕೊಲೆಗೈದಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನ್ಸಾರಿ ಅಲಿಯಾಸ್ ಶಾಹುಲ್ ಹಮೀದ್ ಬಂಧಿತ ಆರೋಪಿ.ಬಾಡಿಗೆ ಮನೆ ಕೇಳೋ ನೆಪದಲ್ಲಿ ಬಂದಿದ್ದ ಅನ್ಸಾರಿ ನಿರ್ಮಲ ಮೇರಿ ಎಂಬುವವರನ್ನು ಹತ್ಯೆಗೈದು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಇದೀಗ, ಅಚ್ಚರಿಯ ಸಂಗತಿಯೆಂದರೆ ವಿಚಾರಣೆ ವೇಳೆ ಪೊಲೀಸರಿಗೆ ಆರೋಪಿಯ ಮತ್ತೊಂದು ಕರಾಮತ್ತು ಪತ್ತೆಯಾಗಿದೆ. ಹೌದು, ತನಿಖೆ ವೇಳೆ ಪೊಲೀಸರಿಗೆ ಆರೋಪಿ ಅನ್ಸಾರಿ ನಕಲಿ ನೋಟ್ ಪ್ರಿಂಟ್​ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಅಂದ ಹಾಗೆ, ಅನ್ಸಾರಿ ಹೆಸರಿನಲ್ಲಿ ನೆರೆಯ ಕೇರಳದಲ್ಲಿ 30 ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಈ ಐನಾತಿ ಕಿಲಾಡಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಸಿಲಿಕಾನ್​ ಸಿಟಿಯಲ್ಲಿ ಬಂದು ನೆಲೆಸಿದ್ದ. ಆದರೆ, ಕಿರಾತಕ ತನ್ನ ಹಳೇ ಚಾಳಿಗಳನ್ನು ಮಾತ್ರ ಬಿಡಲಿಲ್ಲ.

ನಗರದಲ್ಲಿ ಪ್ರದೀಪ್​ ಎಂಬಾತನ ಜೊತೆ ಸೇರಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡೋ ಕೆಲಸಕ್ಕೆ ಕೈ ಹಾಕಿದ್ದಾನೆ. ಸದ್ಯ, ವಿಚಾರಣೆ ವೇಳೆ ಅನ್ಸಾರಿ ಈ ಬಗ್ಗೆ ತಪ್ಪೊಪ್ಪಿಕೊಂಡಿದ್ದು ಆತ ನೀಡಿದ ಸುಳಿವಿನ ಬೆನ್ನತ್ತಿದ ಖಾಕಿ ಪಡೆ ಈ ನಕಲಿ ನೋಟ್​ ಜಾಲದ ಮತ್ತೊಬ್ಬ ಆರೋಪಿಯಾದ ಪ್ರದೀಪ್​ನನ್ನು ಸಹ ಅರೆಸ್ಟ್ ಮಾಡಿದ್ದಾರೆ.

ಸದ್ಯ, ಇಬ್ಬರು ಆರೋಪಿಗಳಿಂದ 10 ಸಾವಿರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದ ಹಾಗೆ, ಕೊಲೆ ಮಾತ್ರವಲ್ಲದೇ ಈ ಕಿರಾತಕರು 8 ಸರಗಳ್ಳತನದ ಪ್ರಕರಗಳಲ್ಲಿ ಸಹ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ