AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

ಮಹಿಳೆಯ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಇನ್ನೋರ್ವನ ಜೊತೆ ಸೇರಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿರುವುದಾಗಿ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!
ಖೋಟಾ ನೋಟು ಪ್ರಿಂಟ್ ​ಮಾಡ್ತಿದ್ದ ಆರೋಪಿಗಳ ಬಂಧನ
shruti hegde
| Edited By: |

Updated on: Dec 27, 2020 | 1:28 PM

Share

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಮಾಲೀಕಳನ್ನು ಕೊಲೆಗೈದಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನ್ಸಾರಿ ಅಲಿಯಾಸ್ ಶಾಹುಲ್ ಹಮೀದ್ ಬಂಧಿತ ಆರೋಪಿ.ಬಾಡಿಗೆ ಮನೆ ಕೇಳೋ ನೆಪದಲ್ಲಿ ಬಂದಿದ್ದ ಅನ್ಸಾರಿ ನಿರ್ಮಲ ಮೇರಿ ಎಂಬುವವರನ್ನು ಹತ್ಯೆಗೈದು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಇದೀಗ, ಅಚ್ಚರಿಯ ಸಂಗತಿಯೆಂದರೆ ವಿಚಾರಣೆ ವೇಳೆ ಪೊಲೀಸರಿಗೆ ಆರೋಪಿಯ ಮತ್ತೊಂದು ಕರಾಮತ್ತು ಪತ್ತೆಯಾಗಿದೆ. ಹೌದು, ತನಿಖೆ ವೇಳೆ ಪೊಲೀಸರಿಗೆ ಆರೋಪಿ ಅನ್ಸಾರಿ ನಕಲಿ ನೋಟ್ ಪ್ರಿಂಟ್​ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಅಂದ ಹಾಗೆ, ಅನ್ಸಾರಿ ಹೆಸರಿನಲ್ಲಿ ನೆರೆಯ ಕೇರಳದಲ್ಲಿ 30 ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಈ ಐನಾತಿ ಕಿಲಾಡಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಸಿಲಿಕಾನ್​ ಸಿಟಿಯಲ್ಲಿ ಬಂದು ನೆಲೆಸಿದ್ದ. ಆದರೆ, ಕಿರಾತಕ ತನ್ನ ಹಳೇ ಚಾಳಿಗಳನ್ನು ಮಾತ್ರ ಬಿಡಲಿಲ್ಲ.

ನಗರದಲ್ಲಿ ಪ್ರದೀಪ್​ ಎಂಬಾತನ ಜೊತೆ ಸೇರಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡೋ ಕೆಲಸಕ್ಕೆ ಕೈ ಹಾಕಿದ್ದಾನೆ. ಸದ್ಯ, ವಿಚಾರಣೆ ವೇಳೆ ಅನ್ಸಾರಿ ಈ ಬಗ್ಗೆ ತಪ್ಪೊಪ್ಪಿಕೊಂಡಿದ್ದು ಆತ ನೀಡಿದ ಸುಳಿವಿನ ಬೆನ್ನತ್ತಿದ ಖಾಕಿ ಪಡೆ ಈ ನಕಲಿ ನೋಟ್​ ಜಾಲದ ಮತ್ತೊಬ್ಬ ಆರೋಪಿಯಾದ ಪ್ರದೀಪ್​ನನ್ನು ಸಹ ಅರೆಸ್ಟ್ ಮಾಡಿದ್ದಾರೆ.

ಸದ್ಯ, ಇಬ್ಬರು ಆರೋಪಿಗಳಿಂದ 10 ಸಾವಿರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದ ಹಾಗೆ, ಕೊಲೆ ಮಾತ್ರವಲ್ಲದೇ ಈ ಕಿರಾತಕರು 8 ಸರಗಳ್ಳತನದ ಪ್ರಕರಗಳಲ್ಲಿ ಸಹ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್