AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​ ಸಿಕ್ಕಿದ್ದು, ಪೊಲೀಸ್ ತನಿಖೆ ವೇಳೆ ಪ್ರಿಯಕರನ ಅಸಲಿ ಕಹಾನಿ ಬೆಳಕಿಗೆ ಬಂದಿದೆ.

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​
ಗಗನಸಖಿ ಅರ್ಚನಾ
ರಮೇಶ್ ಬಿ. ಜವಳಗೇರಾ
|

Updated on: Mar 14, 2023 | 8:26 AM

Share

ಬೆಂಗಳೂರು: ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ವೊಂದರ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಅಲ್ಲ ಕೊಲೆ ಎನ್ನುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅರ್ಚನಾಳನ್ನ ಆಕೆಯ ಬಾಯ್​ ಫ್ರೆಂಡ್ ಆದೇಶ್​ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಕೋರಮಂಗಲ ಪೊಲೀಸರು. ಅರ್ಚನಾಳ ಪ್ರಿಯಕರ ಆದೇಶ್​ ವಿರುದ್ಧ ಐಪಿಸಿ 302 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಭೇಟಿಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ ಮೇಲಿಂದ ಬಿದ್ದು ಸಾವು

ಹಿಮಾಚಲದ ಮೂಲದ ಅರ್ಚನಾ ಹಾಗೂ ಕೇರದ ಮೂಲದ ಆದೇಶ್​ ಡೇಟಿಂಗ್​ ಅ್ಯಪ್​ನಲ್ಲಿ ಪರಿಚಿತರಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಲೇರ್​ಲೈನ್ಸ್​​ನಲ್ಲಿ ಗಗನಸಖೆಯಾಗಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದ್ರೆ, ಮಾರ್ಚ್​ 11ರಂದು ಅರ್ಚನಾ ಆದೇಶ ತಂಗಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು. ಬಳಿಕ ಆದೇಶ್​, ನಶೆಯಲ್ಲಿ ಬಿಲ್ದಿಂಗ್​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆಗೆ ಕರೆ ಮಾಡಿ ಹೇಳಿದ್ದ. ಅಲ್ಲದೇ ಪೊಲೀಸರಿಗೂ ಇದೇ ಹೇಳಿದ್ದ. ಆದ್ರೆ, ಈ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇದು ಆಕಸ್ಮಿಕವಾಗಿ ಬಿದ್ದಿರುವುದಲ್ಲ. ಆದೇಶ್​ ಆಕೆಯನ್ನು ಮೇಲೆಂದ ತಳ್ಳಿದ್ದಾನೆ ಎಂದು ದೂರು ನೀಡಿದ್ದರು.

ಅರ್ಚನಾಳನ್ನ ಕೊಲೆ ಮಾಡುವ ಉದ್ದೇಶದಿಂದ ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾರೆ ಎಂದು ಅರ್ಚನಾಳ ತಂದೆ ದೇವರಾಜ್ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ದಾಖಲಿಸಿಕೊಂಡು ತನಿಖೆ ನಡೆದ ಪೊಲೀಸರಿಗೆ ಮೇಲ್ನೋಟಕ್ಕೆ ಆದೇಶ್​ ಆಕೆಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಗಲಾಟೆಯ ಅಸಲಿ ಕಹಾನಿ ಬೆಳಕಿಗೆ

ಆದೇಶ್​ನನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ಮಾಡಿದಗ ಇಬ್ಬರ ನಡುವಿನ ಗಲಾಟೆಯ ಅಸಲಿ ಕಹಾನಿ ಬಯಲಿಗೆ ಬಂದಿದೆ. ಐಲ್ ಎಂಬ ಡೇಟಿಂಗ್ ಆ್ಯಪ್​ ಮೂಲಕ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಮದುವೆಯಾಗುವಂತೆ ಅರ್ಚನಾ ಪೀಡಿಸುತ್ತಿದ್ದಳು. ತನ್ನ ಮನೆಯಲ್ಲಿ ಮದುವೆ ತಯಾರಿ ನಡೆದಿದೆ‌. ಈ ಹಿನ್ನೆಲೆಯಲ್ಲಿ ಇಬ್ಬರ ಮದುವೆ ಬಗ್ಗೆ ಮಾತಾಡುವಂತೆ ಒತ್ತಾಯಿಸುತ್ತಿದ್ದಳು. ಆದ್ರೆ, ಆದೇಶ್​ ಮೂರು ತಿಂಗಳಿಂದ ಹಲವು ಸಬೂಬು ನೀಡಿ ಕಾಲಹರಣ ಮಾಡಿದ್ದ. ಇನ್ನು ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅರ್ಚನಾ, ಮದುವೆಯಾಗಲು ತೀವ್ರ ಒತ್ತಡ ಹೇರಿದ್ದಳು. ಈ ವಿಚಾರವಾಗಿ ಮಾರ್ಚ್ 11 ರ ರಾತ್ರಿ ಇಬ್ಬರ ನಡುವೆ ಜೋರು ಗಲಾಟೆ ಆಗಿದ್ದು, ಈ ವೇಳೆ ಅರ್ಚನಾ ಮದುವೆಯಾಗದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಳು. ಇದರಿಂದ ಕೋಪಗೊಂಡ ಆದೇಶ್​, ಆಕೆಯನ್ನು ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾನೆ ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!