AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​ ಸಿಕ್ಕಿದ್ದು, ಪೊಲೀಸ್ ತನಿಖೆ ವೇಳೆ ಪ್ರಿಯಕರನ ಅಸಲಿ ಕಹಾನಿ ಬೆಳಕಿಗೆ ಬಂದಿದೆ.

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​
ಗಗನಸಖಿ ಅರ್ಚನಾ
ರಮೇಶ್ ಬಿ. ಜವಳಗೇರಾ
|

Updated on: Mar 14, 2023 | 8:26 AM

Share

ಬೆಂಗಳೂರು: ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ವೊಂದರ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಅಲ್ಲ ಕೊಲೆ ಎನ್ನುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅರ್ಚನಾಳನ್ನ ಆಕೆಯ ಬಾಯ್​ ಫ್ರೆಂಡ್ ಆದೇಶ್​ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಕೋರಮಂಗಲ ಪೊಲೀಸರು. ಅರ್ಚನಾಳ ಪ್ರಿಯಕರ ಆದೇಶ್​ ವಿರುದ್ಧ ಐಪಿಸಿ 302 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಭೇಟಿಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ ಮೇಲಿಂದ ಬಿದ್ದು ಸಾವು

ಹಿಮಾಚಲದ ಮೂಲದ ಅರ್ಚನಾ ಹಾಗೂ ಕೇರದ ಮೂಲದ ಆದೇಶ್​ ಡೇಟಿಂಗ್​ ಅ್ಯಪ್​ನಲ್ಲಿ ಪರಿಚಿತರಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಲೇರ್​ಲೈನ್ಸ್​​ನಲ್ಲಿ ಗಗನಸಖೆಯಾಗಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದ್ರೆ, ಮಾರ್ಚ್​ 11ರಂದು ಅರ್ಚನಾ ಆದೇಶ ತಂಗಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು. ಬಳಿಕ ಆದೇಶ್​, ನಶೆಯಲ್ಲಿ ಬಿಲ್ದಿಂಗ್​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆಗೆ ಕರೆ ಮಾಡಿ ಹೇಳಿದ್ದ. ಅಲ್ಲದೇ ಪೊಲೀಸರಿಗೂ ಇದೇ ಹೇಳಿದ್ದ. ಆದ್ರೆ, ಈ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇದು ಆಕಸ್ಮಿಕವಾಗಿ ಬಿದ್ದಿರುವುದಲ್ಲ. ಆದೇಶ್​ ಆಕೆಯನ್ನು ಮೇಲೆಂದ ತಳ್ಳಿದ್ದಾನೆ ಎಂದು ದೂರು ನೀಡಿದ್ದರು.

ಅರ್ಚನಾಳನ್ನ ಕೊಲೆ ಮಾಡುವ ಉದ್ದೇಶದಿಂದ ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾರೆ ಎಂದು ಅರ್ಚನಾಳ ತಂದೆ ದೇವರಾಜ್ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ದಾಖಲಿಸಿಕೊಂಡು ತನಿಖೆ ನಡೆದ ಪೊಲೀಸರಿಗೆ ಮೇಲ್ನೋಟಕ್ಕೆ ಆದೇಶ್​ ಆಕೆಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಗಲಾಟೆಯ ಅಸಲಿ ಕಹಾನಿ ಬೆಳಕಿಗೆ

ಆದೇಶ್​ನನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ಮಾಡಿದಗ ಇಬ್ಬರ ನಡುವಿನ ಗಲಾಟೆಯ ಅಸಲಿ ಕಹಾನಿ ಬಯಲಿಗೆ ಬಂದಿದೆ. ಐಲ್ ಎಂಬ ಡೇಟಿಂಗ್ ಆ್ಯಪ್​ ಮೂಲಕ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಮದುವೆಯಾಗುವಂತೆ ಅರ್ಚನಾ ಪೀಡಿಸುತ್ತಿದ್ದಳು. ತನ್ನ ಮನೆಯಲ್ಲಿ ಮದುವೆ ತಯಾರಿ ನಡೆದಿದೆ‌. ಈ ಹಿನ್ನೆಲೆಯಲ್ಲಿ ಇಬ್ಬರ ಮದುವೆ ಬಗ್ಗೆ ಮಾತಾಡುವಂತೆ ಒತ್ತಾಯಿಸುತ್ತಿದ್ದಳು. ಆದ್ರೆ, ಆದೇಶ್​ ಮೂರು ತಿಂಗಳಿಂದ ಹಲವು ಸಬೂಬು ನೀಡಿ ಕಾಲಹರಣ ಮಾಡಿದ್ದ. ಇನ್ನು ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅರ್ಚನಾ, ಮದುವೆಯಾಗಲು ತೀವ್ರ ಒತ್ತಡ ಹೇರಿದ್ದಳು. ಈ ವಿಚಾರವಾಗಿ ಮಾರ್ಚ್ 11 ರ ರಾತ್ರಿ ಇಬ್ಬರ ನಡುವೆ ಜೋರು ಗಲಾಟೆ ಆಗಿದ್ದು, ಈ ವೇಳೆ ಅರ್ಚನಾ ಮದುವೆಯಾಗದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಳು. ಇದರಿಂದ ಕೋಪಗೊಂಡ ಆದೇಶ್​, ಆಕೆಯನ್ನು ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾನೆ ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ