Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದೆಂಬ ಭಯದಿಂದ ಅಪ್ಪನನ್ನು ಕೊಂದ ಬಾಲಕ; ಪಾರಾಗಲು ಮಾಡಿದ್ದು ಕ್ರಿಮಿನಲ್​ ಐಡಿಯಾ

ಆದರೆ ವೀರೇಂದ್ರನನ್ನು ವಿಚಾರಣೆಗೆ ಒಳಪಡಿಸಿದಾಗ ಆತನ ಕೈವಾಡ ಈ ಕೊಲೆಯಲ್ಲಿ ಇಲ್ಲ ಎಂಬುದು ಗೊತ್ತಾಯಿತು. ಬಳಿಕ 10ನೇ ತರಗತಿ ಹುಡುಗನನ್ನೇ ವಿಚಾರಣೆ ನಡೆಸಲಾಯಿತು. ನಂತರ ಆತ ಒಪ್ಪಿಕೊಂಡ..ದೊಡ್ಡದಾಗಿ ಅತ್ತುಬಿಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.

Shocking News: ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದೆಂಬ ಭಯದಿಂದ ಅಪ್ಪನನ್ನು ಕೊಂದ ಬಾಲಕ; ಪಾರಾಗಲು ಮಾಡಿದ್ದು ಕ್ರಿಮಿನಲ್​ ಐಡಿಯಾ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 07, 2022 | 8:09 AM

ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣವೂ ಹೆಚ್ಚುತ್ತದೆ. ಪರೀಕ್ಷೆಯಲ್ಲಿ ಅನುತ್ತೀರ್ಣನಾಗಬಹುದು ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಳ್ಳುವವರು ಇದ್ದಾರೆ. ಫಲಿತಾಂಶ ಬಂದ ಮೇಲೆ ಕಡಿಮೆ ಅಂಕ ಬಂತು, ಫೇಲ್ ಆದೆ ಎಂದು ಸಾಯುವವರೂ ಇದ್ದಾರೆ. ಇದೆಲ್ಲವೂ ತಪ್ಪು. ಆದರೆ ಮಕ್ಕಳಲ್ಲಿರುವ ಭಯ, ಅಂಕ ಕಡಿಮೆ ಬಂದಾಗ ಅವರಷ್ಟಕ್ಕೇ ಅವರು ಅವಮಾನ ಆಯಿತು, ಮನೆಯಲ್ಲಿ ಬಯ್ಯುತ್ತಾರೆ, ಪಾಲಕರು ಹೊಡೆಯುತ್ತಾರೆ ಎಂದು ಭಾವಿಸಿ ತಮ್ಮ ಜೀವ ಕಳೆದುಕೊಳ್ಳುತ್ತಾರೆ. ಆದರೆ ಮಧ್ಯಪ್ರದೇಶದಲ್ಲೊಂದು ಶಾಕಿಂಗ್​ ಘಟನೆ ನಡೆದಿದೆ. ಇಲ್ಲಿ 15ವರ್ಷದ ಬಾಲಕನೊಬ್ಬ ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದು ಎಂದು ಹೆದರಿ ಅಪ್ಪನನ್ನೇ ಕೊಂದಿದ್ದಾನೆ. ಅಷ್ಟೇ ಅಲ್ಲ, ಈ ಕೊಲೆಯನ್ನು ಪಕ್ಕದ ಮನೆಯವನ ತಲೆಗೆ ಕಟ್ಟಲೂ ಪ್ರಯತ್ನ ಪಟ್ಟಿದ್ದಾನೆ.

ಮೃತ ವ್ಯಕ್ತಿಯ ಹೆಸರು ದುಳಿಚಾಂದ್​ ಅಹಿರ್ವಾರ್. ಏಪ್ರಿಲ್​ 3ರಂದು ರಾತ್ರಿ ಮಲಗಿದ್ದಾಗ ಕೊಡಲಿಯಿಂದ ಕೊಲ್ಲಲ್ಪಟ್ಟಿದ್ದಾರೆ. ಪುತ್ರನೇ ಹೋಗಿ ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ನಾನು ಗಲಾಟೆ ಕೇಳಿ ಹೊರಗೆ ಬಂದೆ, ಪಕ್ಕದ ಮನೆಯವನಾದ ವೀರೇಂದ್ರ ಅಹಿರ್ವಾರ್​ ಮತ್ತು ಇನ್ನೊಬ್ಬಾತ ಓಡಿಹೋಗಿದ್ದನ್ನು ನಾನು ನೋಡಿದೆ ಎಂದೂ ದೂರಿನಲ್ಲಿ ತಿಳಿಸಿದ್ದ.  ಈ ವೀರೇಂದ್ರ ಮತ್ತು ಬಾಲಕನ ಮನೆಯ ನಡುವೆ ಭಿನ್ನಾಭಿಪ್ರಾಯವಿತ್ತು. ಆಗಾಗ ಜಗಳವಾಗುತ್ತಿತ್ತು. ಅದನ್ನು ಸದ್ಬಳಕೆ ಮಾಡಿಕೊಂಡು, ತಾನು ಪಾರಾಗುವ ಪ್ರಯತ್ನ ಇವನದಾಗಿತ್ತು. ಆದರೆ ವೀರೇಂದ್ರನನ್ನು ವಿಚಾರಣೆಗೆ ಒಳಪಡಿಸಿದಾಗ ಆತನ ಕೈವಾಡ ಈ ಕೊಲೆಯಲ್ಲಿ ಇಲ್ಲ ಎಂಬುದು ಗೊತ್ತಾಯಿತು. ಬಳಿಕ 10ನೇ ತರಗತಿ ಹುಡುಗನನ್ನೇ ವಿಚಾರಣೆ ನಡೆಸಲಾಯಿತು. ನಂತರ ಆತ ಒಪ್ಪಿಕೊಂಡ..ದೊಡ್ಡದಾಗಿ ಅತ್ತುಬಿಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.

ನಾನು ಸರಿಯಾಗಿ ವಿದ್ಯಾಭ್ಯಾಸ ಮಾಡುವುದಿಲ್ಲ, ಓದುವುದಿಲ್ಲ ಎಂದು ನನ್ನ ಅಪ್ಪ ಸದಾ ನಿಂದಿಸುತ್ತಿದ್ದರು. ಪರೀಕ್ಷೆಯಲ್ಲಿ ಫೇಲ್​ ಆದರೆ ಮನೆಯಿಂದ ಹೊರಹಾಕುವ ಬೆದರಿಕೆಯನ್ನೂ ಹಾಕಿದ್ದರು. ಹೀಗಾಗಿ ಕಡಿಮೆ ಅಂಕ ಬಂದು, ಅನುತ್ತೀರ್ಣನಾದರೆ ಅವರು ಹೊಡೆಯುತ್ತಾರೆ, ಬೈಯ್ಯುತ್ತಾರೆ ಎಂದು ಹೆದರಿ ಕೊಂದು ಹಾಕಿದೆ ಎಂದು ಬಾಲಕ  ಒಪ್ಪಿಕೊಂಡಿದ್ದಾಗಿಯೂ ಮಾಹಿತಿ ನೀಡಿದ್ದಾರೆ. ಸದ್ಯ ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ. ನಂತರ ಬಾಲಾಪರಾಧಿ ಕೇಂದ್ರಕ್ಕೆ ಕಳಿಸಲಾಗುವುದು ಎಂದೂ  ಹೇಳಿದ್ದಾರೆ.

ಇದನ್ನೂ ಓದಿ: Pat Cummins: ಮೊದಲ ಪಂದ್ಯದಲ್ಲೇ ಕಮಿನ್ಸ್​ ಸ್ಫೋಟಕ ಆಟ: ಕೇವಲ 14 ಎಸೆತಗಳಲ್ಲಿ ಅರ್ಧಶತಕದ ದಾಖಲೆ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್