AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಮೊಬೈಲ್ ಕೊಡುವುದಾಗಿ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋದ ಪ್ರಿಯಕರ ತನ್ನ ಸ್ನೇಹಿತನೊಂದಿಗೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 3:04 PM

Share

ಬೆಂಗಳೂರು: ಯುವತಿ ಮೇಲೆ ಸ್ನೇಹಿತರಿಂದ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಯುವತಿ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಜೂನ್ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಿರಿನಗರ ಪೊಲೀಸರು ಸದ್ಯ ಪುರುಷೋತ್ತಮ್ ಹಾಗು ಚೇತನ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಮೊಬೈಲ್ ಕೊಡುತ್ತೇನೆಂದು ಪುರುಷೋತ್ತಮ್ , ತನ್ನ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಪುರುಷೋತ್ತಮ್ ಹಾಗೂ ಯುವತಿ ಮೂಲತಃ ಇಬ್ಬರೂ ತುಮಕೂರು ಜಿಲ್ಲೆ ಕೊರಟಗೆರೆ ಮೂಲದವರಾಗಿದ್ದು, ಕಳೆದ 1 ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವಾರ ಅಷ್ಟೇ ಪುರುಷೋತ್ತಮ್ ಪ್ರೇಯಸಿಯನ್ನು ಭೇಟಿಯಾಗಿ ಮೊಬೈಲ್​ ಪಡೆದುಕೊಂಡಿದ್ದ. ಬಳಿಕ 2 ದಿನಗಳ ಹಿಂದೆ ಯುವತಿ ಪುರುಷೋತ್ತಮ್ ಗೆ ಕರೆ ಮಾಡಿ ಮೊಬೈಲ್​ ಕೇಳಿದ್ದಳು. ಸರಿ ಮೆಜೆಸ್ಟಿಕ್​ಗೆ ಬಾ ಮೊಬೈಲ್ ಕೊಡುತ್ತೇನೆ ಎಂದಿದ್ದ. ಅದರಂತೆ ಯುವತಿ ಜೂನ್ 6ರಂದು ಬೆಂಗಳೂರಿನ ಮೆಜೆಸ್ಟಿಕ್​ಗೆ ಬಂದಿದ್ದಳು. ನಂತರ ಗಿರಿನಗರದ ಈರಣ್ಣಗುಡ್ಡೆಯ ಸ್ನೇಹಿತನ ರೂಮ್​ಗೆ ಕರೆದೊಯ್ದಿದ್ದ. ಈ ವೇಳೆ ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕೆಂದು ಯುವತಿ ಹೇಳಿದ್ದಾಳೆ. ಆದ್ರೆ, ಪುರುಷೋತ್ತಮ್ ಮೊಬೈಲ್ ನೀಡದೆ ಸತಾಯಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನಂತರ ರೂಮ್​ಗೆ ಬಂದಿದ್ದ ಸ್ನೇಹಿತ ಚೇತನ್​ ಸಹ ಯುವತಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಯುವತಿ ಚೀರಾಟ ಕೇಳಿ ಅಕಪಕ್ಕದ ಮನೆಯುವರು ಜಮಾವಣೆಗೊಂಡು ಗಿರಿನಗರ ಠಾಣೆ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಯುವತಿಯನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರು ತನಿಖೆ ನಡೆಸಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’