AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಮೊಬೈಲ್ ಕೊಡುವುದಾಗಿ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋದ ಪ್ರಿಯಕರ ತನ್ನ ಸ್ನೇಹಿತನೊಂದಿಗೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 3:04 PM

Share

ಬೆಂಗಳೂರು: ಯುವತಿ ಮೇಲೆ ಸ್ನೇಹಿತರಿಂದ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಯುವತಿ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಜೂನ್ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಿರಿನಗರ ಪೊಲೀಸರು ಸದ್ಯ ಪುರುಷೋತ್ತಮ್ ಹಾಗು ಚೇತನ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಮೊಬೈಲ್ ಕೊಡುತ್ತೇನೆಂದು ಪುರುಷೋತ್ತಮ್ , ತನ್ನ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಪುರುಷೋತ್ತಮ್ ಹಾಗೂ ಯುವತಿ ಮೂಲತಃ ಇಬ್ಬರೂ ತುಮಕೂರು ಜಿಲ್ಲೆ ಕೊರಟಗೆರೆ ಮೂಲದವರಾಗಿದ್ದು, ಕಳೆದ 1 ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವಾರ ಅಷ್ಟೇ ಪುರುಷೋತ್ತಮ್ ಪ್ರೇಯಸಿಯನ್ನು ಭೇಟಿಯಾಗಿ ಮೊಬೈಲ್​ ಪಡೆದುಕೊಂಡಿದ್ದ. ಬಳಿಕ 2 ದಿನಗಳ ಹಿಂದೆ ಯುವತಿ ಪುರುಷೋತ್ತಮ್ ಗೆ ಕರೆ ಮಾಡಿ ಮೊಬೈಲ್​ ಕೇಳಿದ್ದಳು. ಸರಿ ಮೆಜೆಸ್ಟಿಕ್​ಗೆ ಬಾ ಮೊಬೈಲ್ ಕೊಡುತ್ತೇನೆ ಎಂದಿದ್ದ. ಅದರಂತೆ ಯುವತಿ ಜೂನ್ 6ರಂದು ಬೆಂಗಳೂರಿನ ಮೆಜೆಸ್ಟಿಕ್​ಗೆ ಬಂದಿದ್ದಳು. ನಂತರ ಗಿರಿನಗರದ ಈರಣ್ಣಗುಡ್ಡೆಯ ಸ್ನೇಹಿತನ ರೂಮ್​ಗೆ ಕರೆದೊಯ್ದಿದ್ದ. ಈ ವೇಳೆ ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕೆಂದು ಯುವತಿ ಹೇಳಿದ್ದಾಳೆ. ಆದ್ರೆ, ಪುರುಷೋತ್ತಮ್ ಮೊಬೈಲ್ ನೀಡದೆ ಸತಾಯಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನಂತರ ರೂಮ್​ಗೆ ಬಂದಿದ್ದ ಸ್ನೇಹಿತ ಚೇತನ್​ ಸಹ ಯುವತಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಯುವತಿ ಚೀರಾಟ ಕೇಳಿ ಅಕಪಕ್ಕದ ಮನೆಯುವರು ಜಮಾವಣೆಗೊಂಡು ಗಿರಿನಗರ ಠಾಣೆ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಯುವತಿಯನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರು ತನಿಖೆ ನಡೆಸಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ