AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಕಿರುತೆರೆ ಸಹನಟ ಸೇರಿ ಮೂವರು ಮಾದಕ ದಂಧೆಕೋರರ ಬಂಧನ

Bangalore News: ನಗರದಲ್ಲಿ ಮಾದಕ ದಂಧೆ ನಡೆಸುತ್ತಿದ್ದ ಕಿರುತೆರೆ ಸಹನಟ ಸೇರಿದಂತೆ ಒಟ್ಟು ಮೂವರು ಅಂತಾರಾಜ್ಯ ಮೂಲದ ಮಾದಕ ದಂಧೆಕೋರರನ್ನು ಎಚ್ಎಸ್ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Breaking News: ಕಿರುತೆರೆ ಸಹನಟ ಸೇರಿ ಮೂವರು ಮಾದಕ ದಂಧೆಕೋರರ ಬಂಧನ
ಕಿರುತೆರೆ ಸಹನಟ ಸೇರಿ ಮೂವರು ಮಾದಕ ದಂಧೆಕೋರರ ಬಂಧನ
TV9 Web
| Edited By: |

Updated on:Sep 23, 2022 | 2:24 PM

Share

ಬೆಂಗಳೂರು: ನಗರದಲ್ಲಿ ಮಾದಕ ದಂಧೆ ನಡೆಸುತ್ತಿದ್ದ ಕಿರುತೆರೆ ಸಹನಟ ಸೇರಿದಂತೆ ಒಟ್ಟು ಮೂವರು ಅಂತಾರಾಜ್ಯ ಮೂಲದ ಮಾದಕ ದಂಧೆಕೋರರನ್ನು ಎಚ್ಎಸ್ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಯಾಜ್, ಮಹಮ್ಮದ್ ಶಾಹಿದ್, ಮಂಗಲ್ ತೋಡಿ ಜಿತೀನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಇವೆರೆಲ್ಲರೂ ಕೇರಳ ಮೂಲದವರಾಗಿದ್ದಾರೆ. ಸದ್ಯ ಆರೋಪಿಗಳಿಂದ ಪೊಲೀಸರು ಬರೋಬ್ಬರಿ 13 ಲಕ್ಷ ಮೌಲ್ಯದ 191 ಗ್ರಾಂ ಎಂಡಿಎಂಎ ಹಾಗೂ 2.80ಕೆಜಿ‌ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತರ ಪೈಕಿ ಶಿಯಾಜ್ ಮಲಯಾಳಂ ಕಿರುತೆರೆಯಲ್ಲಿ ಸಹನಟನಾಗಿ ಕೆಲಸ ಮಾಡಿಕೊಂಡಿದ್ದನು. ಮಹಮ್ಮದ್ ಶಾಹಿದ್ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದನು. ಸದ್ಯ ಬಂಧಿತರ ವಿರುದ್ಧ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ತಹಶೀಲ್ದಾರ್​ ಕಚೇರಿ ಮೇಲೆ ನಕಲಿ ಅಧಿಕಾರಿ ದಾಳಿ

ಚಿಕ್ಕಬಳ್ಳಾಪುರ: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ನಕಲಿ ಅಧಿಕಾರಿಯೊಬ್ಬ ಚಿಕ್ಕಬಳ್ಳಾಪುರ ತಹಶೀಲ್ದಾರ್​ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಂತೆ ಕೈಯಲ್ಲಿ ಒಂದು ಫೈಲ್ ಹಿಡಿದುಕೊಂಡು ಟಿಪ್ ಟಾಪ್ ಆಗಿ ಕಚೇರಿಗೆ ಬಂದ ನಕಲಿ ಅಧಿಕಾರಿ ಕಾಲಮೇಲೆ ಕಾಲು ಹಾಕಿಕೊಂಡು ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ವಿಚಾರಣೆ ನಡೆಸಿದ್ದಾನೆ. ಆದರೆ ಈತನ ನಡೆ ತಹಶೀಲ್ದಾರರಿಗೆ ಅನುಮಾನ ಉಂಟು ಮಾಡಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿ ಎನ್ನುವುದಕ್ಕೆ ದಾಖಲೆ ನೀಡುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ. ಈ ವೇಳೆ ನಕಲಿ ಅಧಿಕಾರಿಯ ಮುಖವಾಡ ಕಳಚಿದ್ದಲ್ಲದೆ ಕಚೇರಿಯಿಂದ ಓಡಿ ಹೋಗಿದ್ದಾನೆ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್​ ಠಾಣೆಗೆ ತಹಶೀಲ್ದಾರ್ ದೂರು ನೀಡಿದ್ದಾರೆ.

ವಿದ್ಯುತ್​​​​ ಕಡಿತಗೊಳಿಸಿದ್ದಕ್ಕೆ ಹಲ್ಲೆ

ಮಂಗಳೂರು: ಬಿಲ್ ಪಾವತಿಸದ ಹಿನ್ನೆಲೆ ವಿದ್ಯುತ್​​​​ ಕಡಿತಗೊಳಿಸಿದ್ದಕ್ಕೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದೆ. ಮೆಸ್ಕಾಂ ಸಿಬ್ಬಂದಿಗಳಾದ ದುಂಡಪ್ಪ, ಉಮೇಶ್ ಎಂಬವರ​ ಮೇಲೆ 3,530 ರೂ. ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿದ್ದ ಹತ್ಯಡ್ಕ ಗ್ರಾಮದ ರಿಜೀಶ್(38) ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಸೋಡಾ ಬಾಟಲಿಯಿಂದ ರಿಜೀಶ್ ದುಂಡಪ್ಪ ಅವರ ತಲೆಗೆ ಬಲವಾಗಿ ಹೊಡೆದಿರುವ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೋರ್ವ ಪವರ್ ಮ್ಯಾನ್ ಉಮೇಶ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 23 September 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?