AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ: ಜಿಗಣಿ ಪೊಲೀಸ್ ಠಾಣೆ ಮೆಟ್ಟಿಲೇರಿದ ವರ

ವಧುದಕ್ಷಿಣೆ ಪಡೆದು ನಂತರ ವಧು ನೀಡದೆ ವರನಿಗೆ ವಂಚಿಸಿದ ಆರೋಪ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ: ಜಿಗಣಿ ಪೊಲೀಸ್ ಠಾಣೆ ಮೆಟ್ಟಿಲೇರಿದ ವರ
ವಧುದಕ್ಷಿಣೆ ಪಡೆದು ವಧು ಕೊಡದೇ ವಂಚಿಸಿದ್ದಾಗಿ ಆರೋಪಿಸಿ ಯುವತಿ ಕುಟುಂಬಸ್ಥರ ವಿರುದ್ಧ ದೂರು ದಾಖಲು Image Credit source: istock
Rakesh Nayak Manchi
|

Updated on:May 30, 2023 | 6:01 PM

Share

ಆನೇಕಲ್: ವರದಕ್ಷಿಣೆ (Dowry) ಪಡೆಯುವುದೇ ಕಾನೂನು ಪ್ರಕಾರ ಅಪರಾಧ. ಹೀಗಿದ್ದಾಗಲೂ ವರದಕ್ಷಿಣೆ ನೀಡುವುದು ಸಾಮಾನ್ಯವಾಗಿದೆ. ಈ ನಡುವೆ ವಧುದಕ್ಷಿಣೆ ಪಡೆದು ನಂತರ ವಧು ನೀಡದೆ ವರನಿಗೆ ವಂಚಿಸಿದ ಆರೋಪ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನಲ್ಲಿ ಕೇಳಿಬಂದಿದ್ದು, ಯುವತಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2021‌‌ ಮಾರ್ಚ್ ತಿಂಗಳಲ್ಲಿ ಜಿಗಣಿಯ ನಾರಾಯಣ‌ ನಾಯಕ್ ಎಂಬುವರ ಜೊತೆ ರಾಯಚೂರು ಜಿಲ್ಲೆಯ ಸಿಂಧನೂರು‌‌ ತಾಲೂಕಿನ ಯುವತಿಯ ಮದುವೆ ಮಾತುಕತೆ ನಡೆದಿತ್ತು. ಅಂದು ನಮ್ಮ ಬಳಿ ಹಣ ಇಲ್ಲ ಹೀಗಾಗಿ 2 ವರ್ಷದ ನಂತರ ಮದುವೆ ಮಾಡುವುದಾಗಿ ಮದುವೆಗೆ ವಿಳಂಭ ಮಾಡಿದ್ದರು. ಇದೇ ವೇಳೆ ವಧುದಕ್ಷಿಣೆಯಾಗಿ 2 ಲಕ್ಷ ರೂ. ಕೂಡ ಕೇಳಲಾಗಿತ್ತು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Viral Video: ವರದಕ್ಷಿಣೆ ಕೇಳ್ತೀಯಾ… ಮಗಳು, ನೆಂಟರಿಷ್ಟರ ಎದುರೇ ಅಳಿಯನಿಗೆ ಬಿತ್ತು ಮಾವನಿಂದ ಚಪ್ಪಲಿ ಏಟು!

ಎರಡು ವರ್ಷ ಕಳೆದರೂ ಮದುವೆ ತೆಗೆಯುವ ಏರ್ಪಾಟಿನಲ್ಲಿ ಇಲ್ಲದ ಹಿನ್ನೆಲೆ ವಿಚಾರಿಸಿದಾಗ ಮದುವೆ ಬೇಡ ಎಂಬ ನಿಲುವಿಗೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ಬಂದಿದ್ದರು. ಸದ್ಯ ನಾವು ಕೊಟ್ಟ ವಧುದಕ್ಷಿಣೆ ವಾಪಸ್ ನೀಡುವಂತೆ ಜಿಗಣಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅದರಂತೆ ವಧುವಿನ ಸಂಬಂಧಿಕರಾದ ಲಕ್ಕಪತಿ ರವಿ ವಿರುದ್ಧ ದೂರು ದಾಖಲಾಗಿದೆ.

ಇತ್ತ ವಧುವಿನ ಕಡೆಯಿಂದಲೂ ಸ್ಪಷ್ಟನೆ ನೀಡಲಾಗಿದ್ದು, ನಾರಾಯಣ ನಾಯಕ್ ಸುಳ್ಳು ಹೇಳಿ ಮದುವೆ ಆಗಲು ಮುಂದಾಗಿದ್ದರು. ಊರಲ್ಲಿ ಬಹಳಷ್ಟು ಆಸ್ತಿಪಾಸ್ತಿ‌ ಇದೆ ಅಂತ ಹೇಳಿದ್ದರು. ಆದರೆ ನಾವು ಊರಿಗೆ ಭೇಟಿ ನೀಡಿದಾಗ ಅಂಥಾದ್ದೇನು ಇರಲಿಲ್ಲ. ತಂದೆ ತಾಯಿ‌ ಮಗಳ ಭವಿಷ್ಯ ನೋಡಿ ಬೇಡ ಅಂದಿದ್ದಾರೆ ಅಂತ ವಧುವಿನ ಅಕ್ಕ ಹಾಗೂ ಸಂಬಂಧಿಕರು ಹೇಳಿದ್ದಾರೆ. ಸದ್ಯ ಮದುವೆ ಬೇಡವೆಂದಿದ್ದರೆ ವಧುದಕ್ಷಿಣೆ ಯಾಕೆ ಪಡೆಯಬೇಕಿತ್ತು ಅಂತ ಪ್ರಶ್ನೆ ಎದಿದ್ದು, ಜಿಗಣಿ ಪೊಲೀಸರು ವರನ ಕಡೆಯಿಂದ ದೂರು ಸ್ವೀಕರಿಸಿದ್ದಾರೆ.

ಕ್ರೈಂ ನ್ಯೂಸ್​ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Tue, 30 May 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ