AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಆಸ್ತಿಗಾಗಿ ಚಾಕು, ಕಟ್ಟಿಗೆಯಿಂದ ಅಣ್ಣನನ್ನೇ ಕೊಂದ ತಮ್ಮ

ಆಸ್ತಿಗಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಾಟಲಚಿಂತಿ ಗ್ರಾಮದಲ್ಲಿ ನಡೆದಿದೆ.

ಕೊಪ್ಪಳ:  ಆಸ್ತಿಗಾಗಿ ಚಾಕು, ಕಟ್ಟಿಗೆಯಿಂದ ಅಣ್ಣನನ್ನೇ ಕೊಂದ ತಮ್ಮ
ಸಾಂದರ್ಭಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Feb 03, 2023 | 8:37 AM

Share

ಕೊಪ್ಪಳ: ಆಸ್ತಿಗಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಾಟಲಚಿಂತಿ ಗ್ರಾಮದಲ್ಲಿ ನಡೆದಿದೆ. ಯಮನೂರಪ್ಪ (39) ಕೊಲೆಯಾದ ವ್ಯಕ್ತಿ. ಯಮನೂರಪ್ಪನ ತಮ್ಮ ಮಲ್ಲಪ್ಪನಿಂದ ಕೃತ್ಯ ನಡೆದಿದೆ. ಆಸ್ತಿ ಹಂಚಿಕೆ ವಿಚಾರವಾಗಿ ನಿನ್ನೆ ರಾತ್ರಿ (ಫೆ.2) ರಂದು ಮನೆಯ ಸ್ನಾನದ ಕೋಣೆಯಲ್ಲಿ ಚಾಕು, ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಪೊಲೀಸರು ಬರುವವರೆಗೂ ಕೊಲೆಯಾದ ಸ್ಥಳದಲ್ಲಿ ಕುಳಿತಿದ್ದನು. ಸ್ಥಳಕ್ಕೆ ಹನುಮಸಾಗರ ಪೊಲೀಸರ ಭೇಟಿ ನೀಡಿ, ಆರೋಪಿಯನ್ನು ಬಂಧಸಿದ್ದಾರೆ.

ರಾಜರಾಜೇಶ್ವರಿ ನಗರ ದ್ವಾರಬಾಗಿಲಿಗೆ ಬೈಕ್ ಡಿಕ್ಕಿ

ಬೆಂಗಳೂರು: ದ್ವಾರಬಾಗಿಲಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ನೈತಿಕ್​​ಗೆ ಗಾಯಗೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಅಪಘಾತಕ್ಕೆ ಅತಿ ವೇಗವೇ ಕಾರಣ ಎನ್ನಲಾಗುತ್ತಿದೆ. ಗಾಯಾಳುವನ್ನು ಹತ್ತಿರದ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಒಂದೇ ಕುಟುಂಬದ ‌7 ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ರಾಮನಗರ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮಂಗಳಮ್ಮ (28) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಲಭಾದೆ ತಾಳಲಾರದೆ ನಿನ್ನೆ (ಫೆ.2) ಮಧ್ಯಾಹ್ನ ಜಮೀನಿನಲ್ಲಿ ಇಲಿ ಪಾಷಾಣ ಸೇವಿಸಿದ್ದಾರೆ. ವಿಷಯ ತಿಳಿದ ಸ್ಥಳಿಯರು ಸಂಜೆ ವೇಳೆ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಂಗಳಮ್ಮ (28), ಮಂಗಳಮ್ಮನ ಪತಿ ರಾಜು(31), ಮಂಗಳಮ್ಮನ ತಾಯಿ ಸೊಮ್ಮಪುರದಮ್ಮ(48), ಮಕ್ಕಳಾದ ಆಕಾಶ್(9), ಕೃಷ್ಣ(13), ಮಂಗಳಮ್ಮ ತಂಗಿ ಸವಿತಾ(24) ಮತ್ತು ಸವಿತಾ ಮಗಳು ದರ್ಶಿನಿ (4) ವಿಷಸೇವಿಸಿದ್ದಾರೆ. ಮಂಗಳಮ್ಮನ ಪತಿ ರಾಜು ಸುಮಾರು 10 ಲಕ್ಷ ಸಾಲ ಮಾಡಿದ್ದನು.

ರಾಜು‌ ಮೂಲತಃ ಬೆಂಗಳೂರು ದಕ್ಷಿಣ ತಾಲೂಕಿನ ಸುಬ್ಬರಾಯನಪಾಳ್ಯ ಗ್ರಾಮದವನು. ಸಾಲಗಾರರ‌ ಕಾಟದಿಂದಾಗಿ ಪತ್ನಿ ಊರು‌ ದೊಡ್ಡಮಣ್ಣುಗುಡ್ಡೆ ಗ್ರಾಮಕ್ಕೆ ಬಂದು ನೆಲೆಸಿದ್ದನು. ಇಲ್ಲಿಯೂ ಸಾಲಗಾರರ ಕಾಟ ಮುಂದುವರಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ಮುಳುಗಿ ಸಾವು

ಬಳ್ಳಾರಿ: ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದಲ್ಲಿ ನಡೆದಿದೆ. ಮಣಿಕಂಠ (14), ಹರ್ಷವರ್ಧನ (9) ಸಾವನ್ನಪ್ಪಿದ ಬಾಲಕರು. ಅಂಬಾದೇವಿ ಜಾತ್ರೆಗೆ ಬಂದಿದ್ದ ಚೌಡಿಕಿ ಕುಟುಂಬದ ಮೂವರು ಮಕ್ಕಳು ಬಹಿರ್ದೆಸೆಗೆ ತೆರಳಿದ್ದರು. ಈ ವೇಳೆ ಇಬ್ಬರು ಮಣಿಕಂಠ ಮತ್ತು ಹರ್ಷವರ್ಧನ ಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದರೆ ಮತ್ತೋರ್ವ ಬಾಲ ಅಪಾಯದಿಂದ ಪಾರಾಗಿದ್ದಾನೆ. ಸಾವನ್ನಪ್ಪಿದವರಲ್ಲಿ ಓರ್ವ ಬಾಲಕ ಹಿರಿಯನಾಗಿದ್ದು, ಮತ್ತೋರ್ವ ಕಿರಿಯವನಾಗಿದ್ದಾನೆ. ಪ್ರಾಣಾಪಾಯದಿಂದ ಪಾರಾದ ಬಾಲಕ ಮಧ್ಯದವನಾಗಿದ್ದಾನೆ.

ಮತ್ತಷ್ಟು ಅಪಾರಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 am, Fri, 3 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ