AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?

ಜಾಗದ ವಿಚಾರಕ್ಕೆ ಬೆಂಗಳೂರಿನ ರಾಜಾಜಿನಗರದಲ್ಲಿ ಸೀತಾರನ್ನು ಹತ್ಯೆಗೈದಿದ್ದರು. ಹತ್ಯೆ ಬಳಿಕ ಅಕ್ಕ ಕಾಣೆಯಾಗಿದ್ದಾಳೆಂದು ದೂರು ನೀಡಿದ್ದರು. ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?
ಮೃತ ಸೀತಾ
TV9 Web
| Edited By: |

Updated on: Nov 27, 2021 | 12:18 PM

Share

ಬೆಂಗಳೂರು: ಜಾಗದ ವಿಚಾರಕ್ಕೆ ಸ್ವಂತ ಅಕ್ಕನಿಗೆ ಸೈನೆಡ್ ನೀಡಿ ಹತ್ಯೆಗೈದಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಸೈನೆಡ್ ನೀಡಿ 47 ವರ್ಷದ ಸೀತಾರನ್ನು ಹತ್ಯೆ ಮಾಡಿದ್ದರು. ನೂರ್ ಅಹ್ಮದ್ ಹಾಗೂ ಸತ್ಯ ಎಂಬುವವರು ಬಂಧನಕ್ಕೊಳಗಾದ ಆರೋಪಿಗಳು. ಮೃತ ಸೀತಾ ಸಹೋದರ ವೆಂಕಟೇಶ್ ಆಚಾರ್ ಪರಾರಿಯಾಗಿದ್ದಾನೆ.

ಮಿಸ್ಸಿಂಗ್ ದೂರು ನೀಡಿದ್ದ ತಮ್ಮ ಜಾಗದ ವಿಚಾರಕ್ಕೆ ಬೆಂಗಳೂರಿನ ರಾಜಾಜಿನಗರದಲ್ಲಿ ಸೀತಾರನ್ನು ಹತ್ಯೆಗೈದಿದ್ದರು. ಹತ್ಯೆ ಬಳಿಕ ಅಕ್ಕ ಕಾಣೆಯಾಗಿದ್ದಾಳೆಂದು ದೂರು ನೀಡಿದ್ದರು. ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ವರು ಆರೋಪಿಗಳ ಪೈಕಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. 7 ತಿಂಗಳ ಹಿಂದೆ ನಡೆದ ಭಯಾನಕ ಕೊಲೆಯ ರಹಸ್ಯವನ್ನು ಸದ್ಯ ಖಾಕಿ ಭೇದಿಸಿದೆ. ನೂರ್ ಅಹ್ಮದ್ ಹಾಗೂ ಸತ್ಯ ಬಂಧಿತರಾಗಿದ್ದು, ಇನ್ನುಳಿದ ಇಬ್ಬರು ಮೆಂಟಲ್ ರಘು, ಕುಮಾರ ಸಾವನ್ನಪ್ಪಿದ್ದಾರೆ.

ಮೂಲತಃ ಮಂತ್ರಾಲಯದವರಾದ ಸೀತಾ ಬೆಂಗಳೂರಿನ ರಾಜಾಜಿನಗರದಲ್ಲಿ ನೆಲೆಸಿದ್ದರು. 2021 ಮಾರ್ಚ್ 26ಕ್ಕೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಅಕ್ಕ ಕಾಣೆಯಾಗಿದ್ದಾಳೆ ಅಂತ ಸಹೋದರ ವೆಂಕಟೇಶ್ ಆಚಾರ್ ದೂರು ನೀಡಿದ್ದ. ಮಿಸ್ಸಿಂಗ್ ಕೇಸ್ ಹಿಂದೆ ಬಿದ್ದಿದ್ದ ಸುಬ್ರಹ್ಮಣ್ಯನಗರ ಪೊಲೀಸರಿಗೆ ಸೀತಾಳ ಸುಳಿವೇ ಸಿಕ್ಕಿರಲಿಲ್ಲ. ಇತ್ತೀಚೆಗೆ ಕಾಲ್ ಡಿಟೈಲ್ಸ್ ಆಧರಿಸಿ ಸತ್ಯ ಅನ್ನೊ ವ್ಯಕ್ತಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸೀತಾ ತಮ್ಮ ವೆಂಕಟೇಶ್ ಕೊಲೆ ಸುಪಾರಿ ನೀಡಿದ್ದಾಗಿ ಸತ್ಯ ಬಾಯಿಬಿಟ್ಟಿದ್ದಾನೆ.

ಮಂತ್ರಾಲಯದ ಬಳಿಯಿದ್ದ ಜಾಗವನ್ನು ಮಾರಲು ವೆಂಕಟೇಶ್ ಹೊರಟಿದ್ದ. ಮಾರಟ ಮಾಡಲು ಅಕ್ಕನ ಸಹಿ ಬೇಕಾಗಿತ್ತು. ಆದರೆ ಅಕ್ಕ ಸೀತಾ ಸಹಿ ಹಾಕಲು ಒಪ್ಪಿರಲಿಲ್ಲ. ಈ ಹಿನ್ನೆಲೆ ವೆಂಕಟೇಶ್ ನಾಲ್ವರಿಗೆ 2.5 ಲಕ್ಷಕ್ಕೆ ಸುಪಾರಿ ನೀಡಿದ್ದ ಎಂದು ತಿಳಿದುಬಂದಿದೆ.

ಆರೋಪಿಗಳು ಬಂಗಾರ ಖರೀದಿ ನೆಪದಲ್ಲಿ ಸೀತಾಳನ್ನು ಕರೆದೊಯ್ದಿದ್ದರು. ಹಾಸನ ಮಾರ್ಗವಾಗಿ ಕರೆದೊಯ್ದಿದ್ದರು. ನಂತರ ಟ್ಯಾಬ್ಲೆಟ್ ತಿಂದ ಸ್ವಲ್ಪ ಹೊತ್ತಿಗೆ ಸೀತಾ ಸಾವನ್ನಪ್ಪಿದ್ದರು. ಮೃತದೇಹವನ್ನು ಹೊಸಪೇಟೆ ಹತ್ತಿರದ ನೀರಿನ ಕ್ಯಾನಲ್ ಬಿಸಾಡಿದ್ದಾರೆ ಸದ್ಯ ಎಷ್ಟೆ ಹುಡುಕಾಟ ನಡೆಸಿದರೂ ಮೃತದೇಹ ಸಿಕ್ಕಿಲ್ಲ. ಹೀಗಾಗಿ ಮೃತದೇಹ ಪತ್ತೆಗೆ ಖಾಕಿ ಮುಂದಾಗಿದೆ. ಇಬ್ಬರು ಆರೋಪಿಗಳು ಮೃತಪಟ್ಟಿದ್ದು ಹೇಗೆ ಎನ್ನುವ ಬಗ್ಗೆ ಮಾಹಿತಿ ಇನ್ನು ತಿಳಿದುಬಂದಿಲ್ಲ.

ಇದನ್ನೂ ಓದಿ

ವೇಗವಾಗಿ ಹರಡುತ್ತಿದೆ ರೂಪಾಂತರಿ ಕೊರೊನಾ ವೈರಸ್! ಕಡ್ಡಾಯವಾಗಿ ಮಾಸ್ಕ್ ಧರಿಸಲು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮನವಿ

ಇಂದು ಉನ್ನತಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ; ಕೊವಿಡ್​ 19, ಲಸಿಕೆ ನೀಡಿಕೆ ಸ್ಥಿತಿ ಪರಿಶೀಲನೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್