ಆನೇಕಲ್​: ಒಂದೂವರೆ ಗುಂಟೆ ಜಾಗಕ್ಕಾಗಿ ಅಣ್ಣನ ಹತ್ಯೆಗೆ ಸುಪಾರಿ ನೀಡಿದ ಸಹೋದರು

ಕೇವಲ ಒಂದೂವರೆ ಗುಂಟೆ ಜಾಗಕ್ಕಾಗಿ ಸಹೋದರರು ಅಣ್ಣ ಚಂಪ್ಪನ ಹತ್ಯೆಗೆ ಸುಪಾರಿ ನೀಡಿದ್ದರು. ಆದರೆ ಸಮಯ ಪ್ರಜ್ಞೆಯಿಂದ ಚಂದ್ರಪ್ಪ ಅವರು ಹಂತರಕ ಕೈಯಿಂದ ಬಚಾವ್​ ಆಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಪ್ಪ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈ ಪ್ರಕರಣ ಮುಂದೇನಾಯ್ತು? ಹತ್ಯೆಗೆ ಸುಪಾರಿ ನೀಡಿದ್ದ ಸಹೋದರರನ್ನು ಮತ್ತು ಹಂತಕರನ್ನು ಪೊಲೀಸರು ಬಂಧಿಸಿದ್ರಾ? ಈ ಸ್ಟೋರಿ ಓದಿ

ಆನೇಕಲ್​: ಒಂದೂವರೆ ಗುಂಟೆ ಜಾಗಕ್ಕಾಗಿ ಅಣ್ಣನ ಹತ್ಯೆಗೆ ಸುಪಾರಿ ನೀಡಿದ ಸಹೋದರು
ಬಂಧಿತ ಆರೋಪಿಗಳು
Follow us
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on: Nov 27, 2023 | 8:35 PM

ಆನೇಕಲ್ ನ.27: ಒಂದೂವರೆ ಗುಂಟೆ ಜಾಗಕ್ಕಾಗಿ ಅಣ್ಣನ ಹತ್ಯೆಗೆ ಸಹೋದರೇ ಸುಪಾರಿ ನೀಡಿದ್ದಾರೆ. ಕ್ಯಾಲಸನಹಳ್ಳಿ ನಿವಾಸಿ ಚಂದ್ರಪ್ಪನ ಹತ್ಯೆಗೆ ಚಿಕ್ಕಪ್ಪನ ಮಕ್ಕಳಾದ ಸಂಪಂತ್ ಕುಮಾರ್ ಅಲಿಯಾಸ್ ಸಂತೋಷ್, ಅರುಣ್ ಕುಮಾರ್ 1.5 ಲಕ್ಷ ರೂ. ಸುಪಾರಿ ನೀಡಿದ್ದರು. ಸುಪಾರಿ ಪಡೆದಿದ್ದ ಆನಂದ್, ಹರ್ಷವರ್ಧನ್ ಹಾಗೂ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿನಗರದ ಬಳಿಯ ಸಾಯಿಬಾಬಾ ದೇಗುಲದ ರಸ್ತೆಯಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ಚಂದ್ರಪ್ಪ ಮೇಲೆ ಲಾಂಗ್​​ನಿಂದ ಹಲ್ಲೆ ಮಾಡಲು ಯತ್ನಿಸಿದರು.

ಆರೋಪಿಗಳು ಲಾಂಗ್​ ಬೀಸುತ್ತಿದ್ದಂತೆ ಎಚ್ಚೆತ್ತ ಚಂದ್ರಪ್ಪ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಚಂದ್ರಪ್ಪ ಅವರ ಕೈಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೆಚ್ ಫೆಲ್ಯೂರ್ ಆಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕೋಲಾರ: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ ಹತ್ಯೆ

ಆಸ್ಪತ್ರೆಯಿಂದ ಮನೆಗೆ ಬಂದ ಚಂದ್ರಪ್ಪ ಅವರನ್ನು ನೋಡಲು ಸಂಪತ್ ಅಲಿಯಾಸ್ ಸಂತೋಷ್ ಬಂದಿದ್ದನು. ತನಗೇನು ತಿಳಿಯದಂತೆ ಚಂದ್ರಪ್ಪ ಅವರ ಎದರು ನಾಟಕವಾಡಿದ್ದನು. ಆದರೆ ಹೆಬ್ಬಗೋಡಿ ಪೊಲೀಸರ ಚಾಣಾಕ್ಷತನದ ತನಿಖೆಯಿಂದ ಪ್ರಕರಣ ಹೊರಬಂದಿದ್ದು, ಚಂದ್ರಪ್ಪನ ಹತ್ಯೆ ಮಾಡಲು ಯತ್ನಿಸಿದ್ದ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿರೇಮಠ ಅವರಿಗೆ ಡಾ ಮಂಜುನಾಥ್ ಒಬ್ಬ ಸಂಸದರೆಂದು ಗೊತ್ತಿಲ್ಲವೇ?
ಹಿರೇಮಠ ಅವರಿಗೆ ಡಾ ಮಂಜುನಾಥ್ ಒಬ್ಬ ಸಂಸದರೆಂದು ಗೊತ್ತಿಲ್ಲವೇ?
ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ
ನಗರದ ಸೌಂದರ್ಯೀಕರಣಕ್ಕೆ ಬಿಎಂಆರ್​ಸಿಲ್ ಕೈ ಜೋಡಿಸಲಿದೆ: ಶಿವಕುಮಾರ್
ನಗರದ ಸೌಂದರ್ಯೀಕರಣಕ್ಕೆ ಬಿಎಂಆರ್​ಸಿಲ್ ಕೈ ಜೋಡಿಸಲಿದೆ: ಶಿವಕುಮಾರ್