AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯೊರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ನಡೆದಿದೆ.

Bengaluru News: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 29, 2023 | 8:51 AM

Share

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಕೊಲೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಂತೆ ಇದೀಗ ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯೊರ್ವನನ್ನ ಬರ್ಬರವಾಗಿ ಕೊಲೆ(Murder) ಮಾಡಿದ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ನಡೆದಿದೆ. ಈ ಕುರಿತು ಸ್ಥಳೀಯರು ಬೆಳಗ್ಗೆ ತಲಘಟ್ಟಪುರ(Talaghattapura)ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಚಿಕ್ಕಮಗಳೂರು: ಆಟೋದಲ್ಲಿ‌ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿ, ಇಬ್ಬರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೂಡಿಗೆರೆ ತಾಲೂಕಿನ ಬೀಜುವಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಮೂಲದ ಜಾಫರ್ ಉಮರ್, ಮೊಹಮ್ಮದ್ ‌ಮೊಹಲ್ಲಾ ಬಂಧಿತ ಆರೋಪಿಗಳು. ಬಕ್ರೀದ್ ಹಬ್ಬ ಹಿನ್ನೆಲೆ ಇವರು ಹಾಸನದಿಂದ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದರು. ಈ ವೇಳೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು 140ಕೆ.ಜಿ ಗೋಮಾಂಸ ಸೇರಿದಂತೆ ಆಟೋವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್

ಮನೆಯಲ್ಲಿ ಬಂದಿದ್ದ ನಾಗರಹಾವಿನ ರಕ್ಷಣೆ

ಕೋಲಾರ: ಇತ್ತೀಚೆಗೆ ನಗರ ಪ್ರದೇಶದ ಮನೆಗಳಲ್ಲಿ ಹೆಚ್ಚಾಗಿ ಹಾವುಗಳು ಪ್ರತ್ಯಕ್ಷವಾಗುತ್ತಿದೆ. ಅದರಂತೆ ಇದೀಗ ಕೋಲಾರ ತಾಲ್ಲೂಕಿನ ವೀರಾಪುರ ಗ್ರಾಮದ ಪ್ರಕಾಶ್ ಎಂಬುವರ ಮನೆಗೆ ಬಂದಿದ್ದ ದೊಡ್ಡ ನಾಗರಹಾವನ್ನ ಉರಗ ರಕ್ಷಕ ಆನಂದ್ ಎಂಬುವವರು ರಕ್ಷಣೆ ಮಾಡಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ