ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಬರ್ಬರ ಕೊಲೆ; ಕೇಸ್ ಬೆನ್ನತ್ತಿದ್ದ ಪೊಲೀಸ್ರಿಗೆ ಸಿಕ್ತು​ ಟ್ವಿಸ್ಟ್, ಆರೋಪಿಗಳು ಅಂದರ್

ಅವರಿಬ್ಬರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತರು, ಅಣ್ಣ-ತಮ್ಮಂದಿರಂತಿದ್ದ ಇಬ್ಬರ ನಡುವೆ ಹಲವು ತಿಂಗಳಿಂದ ಶುರುವಾಗಿದ್ದ ಕಲಹ ಇದೀಗ ಕೊಲೆಯಲ್ಲಿ ಅಂತ್ಯವಾಗಿದ್ದು, ಹೆದ್ದಾರಿ ಕೊಲೆ ಕೇಸ್ ಬೆನ್ನತ್ತಿದ್ದ ಪೊಲೀಸರು, ಸ್ನೇಹಿತರ ದುಷ್ಮನ್ ಕಹಾನಿಯನ್ನ ರಿವೀಲ್ ಮಾಡಿದ್ದಾರೆ. ಏನಿದು ಪ್ರಕರಣ? ಈ ಸ್ಟೋರಿ ಓದಿ.

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಬರ್ಬರ ಕೊಲೆ; ಕೇಸ್ ಬೆನ್ನತ್ತಿದ್ದ ಪೊಲೀಸ್ರಿಗೆ ಸಿಕ್ತು​ ಟ್ವಿಸ್ಟ್, ಆರೋಪಿಗಳು ಅಂದರ್
ಕಾರು ಅಡ್ಡಗಟ್ಟಿ ಚಾಲಕನ ಬರ್ಬರ ಕೊಲೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 24, 2024 | 3:36 PM

ಬೆಂಗಳೂರು ಗ್ರಾಮಾಂತರ, ಜು.24: ಜೂನ್ 13 ರ ಬೆಳಗಿನ ಜಾವ ಬೆಳ್ಳಂ ಬೆಳಗ್ಗೆ ಹೆದ್ದಾರಿಗೆ ಬಂದಿದ್ದ ಜನರಿಗೆ ಅಪಘಾತದ ರೀತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸ್ಥಳೀಯರನ್ನ ಬೆಚ್ಚಿ ಬೀಳುವಂತೆ ಮಾಡಿತ್ತು. ಪೊಲೀಸರಿಗೂ ಹೊಸ ತಲೆ ನೋವು ತಂದೊಡ್ಡಿತ್ತು. ಇನ್ನು ಈ ಕೇಸ್ ಬೆನ್ನತ್ತಿದ್ದ ಪೊಲೀಸರು ಇದೀಗ ಪ್ರವಿಣ್, ಪ್ರಭು, ಪ್ರಜ್ವಲ್ ಮತ್ತು ಅಶೋಕ್ ಎಂಬ ನಾಲ್ವರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದು, ಕೊಲೆಗೆ ಕಾರಣವೇನು ಎಂಬುದನ್ನ ರಿವೀಲ್ ಮಾಡಿದ್ದಾರೆ.

ಹೌದು, ಕೋಲಾರದ ಭಾರ್ಗವ್ ಎಂಬ ಯುವಕ ಕಳೆದ ಜೂ. 12 ರಂದು ಕೋಲಾರದಿಂದ ಹೊಸಕೋಟೆಗೆ ಮಧ್ಯರಾತ್ರಿ ತನ್ನ ಕಾರಿನಲ್ಲಿ ಬರುತ್ತಿದ್ದ. ಈ ವೇಳೆ ಅದೇ ಹೆದ್ದಾರಿಯಲ್ಲೆ ಕಾರನ್ನ ಹಿಂಬಾಲಿಸಿಕೊಂಡು ಬಂದಿದ್ದ ನಾಲ್ಕು ಜನ, ಹೈವೆಯಲ್ಲೆ ಭಾರ್ಗವ್​ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಹೀಗಾಗಿ ಅಂದು ಸ್ಥಳ ಪರಿಶೀಲನೆ ನಡೆಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ನಂದಗುಡಿ ಪೊಲೀಸರು, ಮೃತ ಭಾರ್ಗವ್ ಸ್ನೇಹಿತರಾದ ಕೋಲಾರ ಮೂಲದ ಪ್ರವೀಣ್, ಪ್ರಭು, ಪ್ರಜ್ವಲ್ ಮತ್ತು ಅಶೋಕ್ ಎಂಬ ನಾಲ್ಕು ಜನ ಆರೋಪಿಗಳನ್ನ ಬಂಧಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ! ಆರೋಪಿ ಬಂಧನ

ಬಂಧಿತ ಆರೋಫಿ ಪ್ರವೀಣ್ ಮತ್ತು ಭಾರ್ಗವ್ ಒಂದೇ ಪೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಒಂದಷ್ಟು ಜನ ಯುವಕರನ್ನ ಜೊತೆಯಲ್ಲಿಟ್ಟುಕೊಂಡು ವಾಹನಗಳ ಸೀಜಿಂಗ್ ಕೆಲಸ ಮಾಡುತ್ತಿದ್ದರಂತೆ. ಹೀಗಾಗಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಕಲಹ ಶುರುವಾಗಿದ್ದು, ಹಲವು ಭಾರಿ ಗಲಾಟೆ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದ್ದರಂತೆ. ಜೊತೆಗೆ ಕೊಲೆಯಾದ ಭಾರ್ಗವ್, ಪ್ರವೀಣ್​ನ ಮನೆಗೆ ಹೋಗಿ ಪತ್ನಿ ಮತ್ತು ತಾಯಿ ಮುಂದೆ ಅವಾಜ್ ಹಾಕಿ ಬಂದಿದ್ದು, ಪ್ರವೀಣ್​ನನ್ನ ಕೆರಳಿಸಿದೆ.

ಕಳೆದ 12 ರಂದು ಒಬ್ಬನೆ ಕಾರಿನಲ್ಲಿ ಹೋಗ್ತಿದ್ದನ್ನ ಕಂಡು ಹಿಂಬಾಲಿಸಿಕೊಂಡು ಹೋಗಿ ನಾಲ್ಕು ಜನ ಸೇರಿಕೊಂಡು ಹೆದ್ದಾರಿಯಲ್ಲಿ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಒಟ್ಟಾರೆ ಒಂದೇ ಕಡೆ ತಿಂದು ತೇಗಿ ಅಣ್ಣ ತಮ್ಮಂದಿರಂತಿದ್ದ ಸ್ನೇಹಿತರೆ ದುಷ್ಮನ್​ಗಳಾಗಿ ಕೊಲೆ ಮಾಡುವ ಹಂತಕ್ಕೆ ತಲುಪಿದ್ದು ನಿಜಕ್ಕೂ ದುರಂತ. ಇನ್ನು ದುಡುಕಿ ಮನೆಗೆ ಹೋಗಿ ಅವಾಜ್ ಹಾಕಿದಕ್ಕೆ ಭಾರ್ಗವ್ ಇಹಲೋಕ ಸೇರಿದ್ರೆ, ಕುಟುಂಬವಿದೆ ಎನ್ನುವುದನ್ನ ಮರೆತು ರೌಡಿಸಂ ತೋರಿಸಲು ಹೋಗಿ ಕೊಲೆ ಮಾಡಿದವನು ಪರಪ್ಪನ ಅಗ್ರಹಾರ ಸೇರಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us