AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಮಗಳ ಅಶ್ಲೀಲ ವಿಡಿಯೊ ಪ್ರಸಾರ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬಿಎಸ್ಎಫ್ ಯೋಧನನ್ನು ಹೊಡೆದು ಕೊಂದರು

ಹುಡುಗ ಬಾಲಕಿಯ ಅಶ್ಲೀಲ ವಿಡಿಯೊವನ್ನು ಆನ್​​ಲೈನ್​​ನಲ್ಲಿ ಪೋಸ್ಟ್ ಮಾಡಿದ ನಂತರ ಇದನ್ನು ಪ್ರಶ್ನಿಸುವುದಕ್ಕಾಗಿ ಯೋಧ ಆ ಹುಡುಗನ ಮನೆಗೆ ಹೋಗಿದ್ದರು ಎಂದ ಬಿಎಸ್ಎಫ್ ಮೂಲಗಳು ಹೇಳಿವೆ.

ಗುಜರಾತ್: ಮಗಳ ಅಶ್ಲೀಲ ವಿಡಿಯೊ ಪ್ರಸಾರ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬಿಎಸ್ಎಫ್ ಯೋಧನನ್ನು ಹೊಡೆದು ಕೊಂದರು
ಯೋಧ ಮೆಲ್ಜಿಭಾಯಿ ವಘೇಲಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 26, 2022 | 7:57 PM

Share

ದೆಹಲಿ: ತನ್ನ ಮಗಳ ಅಶ್ಲೀಲ ವಿಡಿಯೊ ಪ್ರಸಾರ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಗಡಿ ಭದ್ರತಾ ಪಡೆ (Border Security Force)ಸಿಬ್ಬಂದಿಯನ್ನು ಗುಜರಾತ್‌ನ (Gujarat) ನಾಡಿಯಾಡ್‌ನಲ್ಲಿ ಹೊಡೆದು ಕೊಂದ (Lynched) ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಚಕ್ಲಾಸಿ ಗ್ರಾಮದಲ್ಲಿ ವಿಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ 15 ವರ್ಷದ ಯುವಕನ ಮನೆಗೆ ಯೋಧ ಹೋಗಿದ್ದ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಮನೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹದಿಹರೆಯದ ಹುಡುಗ ಮತ್ತು ಯೋಧನ ಮಗಳು ಒಂದೇ ಶಾಲೆಯಲ್ಲಿ ಓದುತ್ತಿದ್ದು, ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಹುಡುಗ ಬಾಲಕಿಯ ಅಶ್ಲೀಲ ವಿಡಿಯೊವನ್ನು ಆನ್​​ಲೈನ್​​ನಲ್ಲಿ ಪೋಸ್ಟ್ ಮಾಡಿದ ನಂತರ ಇದನ್ನು ಪ್ರಶ್ನಿಸುವುದಕ್ಕಾಗಿ ಯೋಧ ಆ ಹುಡುಗನ ಮನೆಗೆ ಹೋಗಿದ್ದರು ಎಂದ ಬಿಎಸ್ಎಫ್ ಮೂಲಗಳು ಹೇಳಿವೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಪೊಲೀಸರು ದಾಖಲಿಸಿದ ಎಫ್ಐಆರ್ ಪ್ರಕಾರ, ಶನಿವಾರ ರಾತ್ರಿ ಹುಡುಗನ ಮನೆಗೆ ಯೋಧ, ಆತನ ಪತ್ನಿ, ಇಬ್ಬರು ಪುತ್ರರು, ಅಳಿಯ ಹೋಗಿದ್ದರು. ಅಲ್ಲಿಗೆ ಹೋದಾಗ ಹುಡುಗನ ಕುಟುಂಬ ಇವರನ್ನು ನಿಂದಿಸಿದೆ. ಇದನ್ನು ತಡೆದಾಗ ಈ ಕುಟುಂಬ ಯೋಧನ ಕುಟುಂಬದ ಮೇಲೆ ದಾಳಿ ಮಾಡಿದೆ ಎಂದು ಎಫ್ಐಆರ್ ನಲ್ಲಿ ಹೇಳಿದೆ.

ಬಿಎಸ್‌ಎಫ್ ಯೋಧ ಮೆಲ್ಜಿಭಾಯಿ ವಘೇಲಾ ಅವರು 15 ವರ್ಷದ ಬಾಲಕನ ಮನೆಗೆ ಹೋಗಿ, ತನ್ನ ಮಗಳ ಆಕ್ಷೇಪಾರ್ಹ ವಿಡಿಯೊ ಬಗ್ಗೆ  ಪ್ರಶ್ನಿಸಿದ್ದಾರೆ ವಘೇಲಾ ತನ್ನ ಮಗ ನವದೀಪ್ ಮತ್ತು ಹೆಂಡತಿಯೊಂದಿಗೆ ಅಲ್ಲಿಗೆ ಹೋಗಿದ್ದರು ಎಂದು ಇಂಡಿಯಾ  ಟುಡೇ ವರದಿ ಮಾಡಿದೆ.ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪುತ್ರನ ತಲೆಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​

ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 302, 307, 3223, 504, 143, 147 ಮತ್ತು 149 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Mon, 26 December 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ