AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿ ಮೇಲೆ ವಿದ್ಯಾರ್ಥಿ ಮೃತದೇಹ ಪತ್ತೆ, ಆತ್ಮಹತ್ಯೆಯಲ್ಲ ಕೊಲೆ ಎಂದ ಪೋಷಕರು

ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಿಟೆಕ್ ವಿದ್ಯಾರ್ಥಿ ನಿಶಾಂಕ್ ರಾಥೋಡ್ ಮೃತದೇಹ ರೈಲ್ವೆ ಹಳಿಯೊಂದರ ಮೇಲೆ ಪತ್ತೆಯಾಗಿದೆ. ಪೊಲೀಸರು ಸಲ್ಲಿಸಿದ ವರದಿಯ ಪ್ರಕಾರ, ಚಲಿಸುತ್ತಿರುವ ರೈಲಿಗೆ ಅಡ್ಡಬಂದ ಪರಿಣಾಮ ದೇಹವು ತುಂಡು ತುಂಡಾಗಿದೆ ಎಂದು ಹೇಳಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿತ್ತು. ಆದರೆ ವಿದ್ಯಾರ್ಥಿಯ ತಂದೆಗೆ ಬಂದಿರುವ ಸಂದೇಶವು ಪ್ರಕರಣವನ್ನು ತಲೆಕೆಳಕು ಮಾಡಿದೆ.

ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿ ಮೇಲೆ ವಿದ್ಯಾರ್ಥಿ ಮೃತದೇಹ ಪತ್ತೆ, ಆತ್ಮಹತ್ಯೆಯಲ್ಲ ಕೊಲೆ ಎಂದ ಪೋಷಕರು
NishankImage Credit source: News 18
TV9 Web
| Updated By: ನಯನಾ ರಾಜೀವ್|

Updated on: Jul 26, 2022 | 1:07 PM

Share

ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಿಟೆಕ್ ವಿದ್ಯಾರ್ಥಿ ನಿಶಾಂಕ್ ರಾಥೋಡ್ ಮೃತದೇಹ ರೈಲ್ವೆ ಹಳಿಯೊಂದರ ಮೇಲೆ ಪತ್ತೆಯಾಗಿದೆ. ಪೊಲೀಸರು ಸಲ್ಲಿಸಿದ ವರದಿಯ ಪ್ರಕಾರ, ಚಲಿಸುತ್ತಿರುವ ರೈಲಿಗೆ ಅಡ್ಡಬಂದ ಪರಿಣಾಮ ದೇಹವು ತುಂಡು ತುಂಡಾಗಿದೆ ಎಂದು ಹೇಳಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿತ್ತು. ಆದರೆ ವಿದ್ಯಾರ್ಥಿಯ ತಂದೆಗೆ ಬಂದಿರುವ ಸಂದೇಶವು ಪ್ರಕರಣವನ್ನು ತಲೆಕೆಳಕು ಮಾಡಿದೆ.

ಮೃತನ ತಂದೆಗೆ ‘ಗುಸ್ತಾಖ್-ಎ-ನಬಿ ಕಿ ಏಕ್ ಹಿ ಸಜಾ, ಸರ್ ತನ್ ಸೆ ಜುದಾ’ ಎಂಬ ಸಂದೇಶ ಬಂದಿದೆ. ಉದಯಪುರದಲ್ಲಿ ಟೈಲರ್​ ಅನ್ನು ಹತ್ಯೆ ಮಾಡುವಾಗ ಕೂಡ ಹಂತಕರು ಇದೇ ವಾಖ್ಯವನ್ನು ಉಲ್ಲೇಖಿಸಿದ್ದರು. ಹಾಡಹಗಲೇ ಟೈಲರ್ ಹತ್ಯೆ ಮಾಡಿ ವಿಡಿಯೋ ಚಿತ್ರೀಕರಿಸಿದ್ದರು.

ಇದೀಗ ತಂದೆಗೆ ಸಂದೇಶ ಕಳುಹಿಸಿದ್ದು ಯಾರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಫೋನ್‌ನಿಂದ ಸಂದೇಶ ಕಳುಹಿಸಲಾಗಿದೆ ಈ ಕುರಿತು ನ್ಯೂಸ್ 18 ವರದಿ ಮಾಡಿದೆ.

ಪೊಲೀಸರು ಫೋನ್‌ನಲ್ಲಿ ಫೊರೆನ್ಸಿಕ್ ವಿಶ್ಲೇಷಣೆ ನಡೆಸುತ್ತಿದ್ದಾರೆ. ತನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಯ ತಂದೆ ಸಮರ್ಥಿಸಿಕೊಂಡಿದ್ದಾರೆ.

ತಂದೆ ಮತ್ತು ಅಪರಿಚಿತ ವ್ಯಕ್ತಿಯ ನಡುವಿನ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಪಠ್ಯಗಳು “ರಾಥೋಡ್ ಸಾಹಬ್ ಬಹುತ್ ಬಹದ್ದೂರ್ ಥಾ ಆಪ್ಕಾ ಬೇಟಾ” ಎಂದು ಬರೆದಿದ್ದಾರೆ ಅಂದರೆ ರಾಥೋಡ್ ಸಾಹೇಬರೇ ನಿಮ್ಮ ಮಗ ತುಂಬಾ ಧೈರ್ಯಶಾಲಿಯಾಗಿದ್ದ ಎಂದರ್ಥ.

ಪೊಲೀಸ್ ವರದಿಯ ಪ್ರಕಾರ, ಅವನು ತನ್ನ ಸಹೋದರಿಯನ್ನು ಭೇಟಿಯಾಗಲು ಮಧ್ಯಾಹ್ನ 3:45 ರ ಸುಮಾರಿಗೆ ತೆರಳಿದ್ದ, ಸಂಜೆಯಾದರೂ ಬರದಿದ್ದಾಗ ಸ್ನೇಹಿತರಿಗೆ ಕರೆ ಮಾಡಿ ವಿಚಾರಿಸಲಾಯಿತು ಬಳಿಕ ಪೊಲೀಸರಿಗೆ ದೂರು ನೀಡಲಾಯಿತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ