AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪತ್ನಿಯನ್ನೇ ವಿಧವೆ ಎಂದು ಹೇಳಿ ಉದ್ಯಮಿಯೊಂದಿಗೆ ಬಿಟ್ಟು ಹನಿಟ್ರ್ಯಾಪ್ ನಡೆಸಿದ್ದನು. ಈ ಕೃತ್ಯವನ್ನು ತನ್ನ ಮೂವರು ಸಹಚರರು ಸೇರಿಕೊಂಡು ಮಾಡುತ್ತಿದ್ದನು. ಸದ್ಯ ದಂಪತಿ ಸಹಿತ ನಾಲ್ವರನ್ನು ಸಿಸಿಬಿ ಬಂಧಿಸಿದೆ.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ
ಉದ್ಯಮಿಯನ್ನು ಹನಿಟ್ರ್ಯಾಪ್​ ಮಾಡಲು ಹೋಗಿ ಸಿಸಿಬಿ ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi|

Updated on:Dec 16, 2023 | 9:57 AM

Share

ಬೆಂಗಳೂರು, ಡಿ.16: ನಗರದಲ್ಲಿ (Bengaluru) ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ (Honeytrap) ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಮಾಡಿತ್ತು.

ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ, ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ

ಅದರಂತೆ, ಆರ್​ಅರ್​ ನಗರಕ್ಕೆ ಬಂದಿದ್ದ ಅತೀವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸೀನ್ ಕ್ರಿಯೇಟ್ ಮಾಡಿದ್ದ ಆರೋಪಿಗಳು, ಆರು ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕುತ್ತಾರೆ.

ಅಷ್ಟರಲ್ಲೇ ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೇ ರೀತಿ ಹಲವರಿಗೆ ಸುಲಿಗೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Sat, 16 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ