AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪತ್ನಿಯನ್ನೇ ವಿಧವೆ ಎಂದು ಹೇಳಿ ಉದ್ಯಮಿಯೊಂದಿಗೆ ಬಿಟ್ಟು ಹನಿಟ್ರ್ಯಾಪ್ ನಡೆಸಿದ್ದನು. ಈ ಕೃತ್ಯವನ್ನು ತನ್ನ ಮೂವರು ಸಹಚರರು ಸೇರಿಕೊಂಡು ಮಾಡುತ್ತಿದ್ದನು. ಸದ್ಯ ದಂಪತಿ ಸಹಿತ ನಾಲ್ವರನ್ನು ಸಿಸಿಬಿ ಬಂಧಿಸಿದೆ.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ
ಉದ್ಯಮಿಯನ್ನು ಹನಿಟ್ರ್ಯಾಪ್​ ಮಾಡಲು ಹೋಗಿ ಸಿಸಿಬಿ ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Dec 16, 2023 | 9:57 AM

Share

ಬೆಂಗಳೂರು, ಡಿ.16: ನಗರದಲ್ಲಿ (Bengaluru) ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ (Honeytrap) ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಮಾಡಿತ್ತು.

ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ, ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ

ಅದರಂತೆ, ಆರ್​ಅರ್​ ನಗರಕ್ಕೆ ಬಂದಿದ್ದ ಅತೀವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸೀನ್ ಕ್ರಿಯೇಟ್ ಮಾಡಿದ್ದ ಆರೋಪಿಗಳು, ಆರು ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕುತ್ತಾರೆ.

ಅಷ್ಟರಲ್ಲೇ ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೇ ರೀತಿ ಹಲವರಿಗೆ ಸುಲಿಗೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Sat, 16 December 23

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!