Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪತ್ನಿಯನ್ನೇ ವಿಧವೆ ಎಂದು ಹೇಳಿ ಉದ್ಯಮಿಯೊಂದಿಗೆ ಬಿಟ್ಟು ಹನಿಟ್ರ್ಯಾಪ್ ನಡೆಸಿದ್ದನು. ಈ ಕೃತ್ಯವನ್ನು ತನ್ನ ಮೂವರು ಸಹಚರರು ಸೇರಿಕೊಂಡು ಮಾಡುತ್ತಿದ್ದನು. ಸದ್ಯ ದಂಪತಿ ಸಹಿತ ನಾಲ್ವರನ್ನು ಸಿಸಿಬಿ ಬಂಧಿಸಿದೆ.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ
ಉದ್ಯಮಿಯನ್ನು ಹನಿಟ್ರ್ಯಾಪ್​ ಮಾಡಲು ಹೋಗಿ ಸಿಸಿಬಿ ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Dec 16, 2023 | 9:57 AM

ಬೆಂಗಳೂರು, ಡಿ.16: ನಗರದಲ್ಲಿ (Bengaluru) ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ (Honeytrap) ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಮಾಡಿತ್ತು.

ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ, ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ

ಅದರಂತೆ, ಆರ್​ಅರ್​ ನಗರಕ್ಕೆ ಬಂದಿದ್ದ ಅತೀವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸೀನ್ ಕ್ರಿಯೇಟ್ ಮಾಡಿದ್ದ ಆರೋಪಿಗಳು, ಆರು ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕುತ್ತಾರೆ.

ಅಷ್ಟರಲ್ಲೇ ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೇ ರೀತಿ ಹಲವರಿಗೆ ಸುಲಿಗೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Sat, 16 December 23

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್