AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದಲ್ಲಿ ತಾಯಿ ಹಾಗೂ 12 ವರ್ಷದ ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಉತ್ತರ ಪ್ರದೇಶದ ಆಗ್ರಾದ ಮನೆಯೊಂದರಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹೇಳಿಕೆಗಳ ಪ್ರಕಾರ, ಕೆಲಸದಾಕೆ ಬೆಳಗ್ಗೆ ಮನೆಗೆ ಬಂದಾಗ, ತರುಣ್ ಚೌಹಾನ್ ಎಂಬ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ, ಮತ್ತು ಅವನ ತಾಯಿ ಮತ್ತು ಮಗನ ಶವಗಳು ಹಾಸಿಗೆಯ ಮೇಲೆ ಪತ್ತೆಯಾಗಿದೆ. ವ್ಯಕ್ತಿ ತನ್ನ ತಾಯಿ ಮತ್ತು 12 ವರ್ಷದ ಮಗನಿಗೆ ವಿಷವುಣಿಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಆಗ್ರಾದಲ್ಲಿ ತಾಯಿ ಹಾಗೂ 12 ವರ್ಷದ ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಪೊಲೀಸ್​Image Credit source: India TV
ನಯನಾ ರಾಜೀವ್
|

Updated on:Feb 12, 2024 | 9:22 AM

Share

ಉದ್ಯಮಿ(Businessman)ಯೊಬ್ಬ ತನ್ನ ತಾಯಿ ಹಾಗೂ 12 ವರ್ಷ ವಯಸ್ಸಿನ ಮಗನನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವ್ಯಕ್ತಿ ತನ್ನ ತಾಯಿ ಮತ್ತು 12 ವರ್ಷದ ಮಗನಿಗೆ ವಿಷವುಣಿಸಿ ನಂತರ ನ್ಯೂ ಆಗ್ರಾ ಪೊಲೀಸ್ ಠಾಣೆಯ ಲಾಯರ್ಸ್ ಕಾಲೋನಿಯಲ್ಲಿರುವ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಕ್ತಿಯನ್ನು ತರುಣ್ ಚೌಹಾಣ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಬಹುಬೇಗ ಹರಡಿತು, ಪ್ರದೇಶದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಪೊಲೀಸರ ಪ್ರಕಾರ, ಮನೆ ಕೆಲಸದವರು ನಿತ್ಯ ಕೆಲಸಕ್ಕೆ ಬರುವಂತೆ ಬಂದಿದ್ದರು. ಆಕೆ ಮನೆಗೆ ಬಂದಾಗ ತರುಣ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಅವರ ತಾಯಿ ಮತ್ತು 12 ವರ್ಷದ ಮಗನ ಶವಗಳು ಹಾಸಿಗೆಯ ಮೇಲೆ ಬಿದ್ದಿರುವುದು ಕಂಡುಬಂದಿದೆ.

ಆಕೆ ಕೂಡಲೇ ಅಕ್ಕಪಕ್ಕದ ಮನೆಯವರು ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ತರುಣ್ ಚೌಹಾಣ್ ಅವರ ಶವವನ್ನು ಕುಣಿಕೆಯಿಂದ ಹೊರತೆಗೆದರು. ಘಟನೆಯ ಬಗ್ಗೆ ತರುಣ್ ಚೌಹಾಣ್ ಅವರ ಪತ್ನಿ ಮತ್ತು ಸಂಬಂಧಿಕರಿಗೆ ಸೂಚನೆ ನೀಡಲಾಗಿದೆ. ಉಪ ಪೊಲೀಸ್ ಆಯುಕ್ತ ಸೂರಜ್ ರೈ ಪ್ರಕಾರ, ತರುಣ್ ಚೌಹಾಣ್ ಅವರ ಪತ್ನಿ ರಾಜಸ್ಥಾನದ ಸಿಕಾರ್‌ನಲ್ಲಿರುವ ಖತು ಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು.

ಮತ್ತಷ್ಟು ಓದಿ: ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ

ಘಟನಾ ಸ್ಥಳದಲ್ಲಿ ಕ್ಷೇತ್ರ ದಳವು ಪುರಾವೆಗಳನ್ನು ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತರುಣ್ ಚೌಹಾಣ್ ಅವರ ಪತ್ನಿಗೆ ಪರಿಸ್ಥಿತಿಯನ್ನು ತಿಳಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:22 am, Mon, 12 February 24

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!