AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆ CCB ಬಲೆಗೆ ಬಿದ್ದ ಧೂರ್ತ ಶ್ರೀ.. ಮನೆಯಲ್ಲೇ ಗಾಂಜಾ ಗಿಡಗಳನ್ನ ಬೆಳೆದಿದ್ದ!

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಈ ನಡುವೆ ಮನೆಯಲ್ಲಿ ತಾರಸಿ ತೋಟಗಳನ್ನ ನಿರ್ಮಿಸಿ ಸ್ವಯಂಕೃಷಿ ನಡೆಸುವ ಹವ್ಯಾಸ ಹೆಚ್ಚಾಗಿದೆ. ದೈನಂದಿನ ಅಡುಗೆಗೆ ಬಳಸುವ ಸೊಪ್ಪು, ತರಕಾರಿ ಹಾಗೂ ಇತರೆ ಔಷಧಿ ಗುಣಗಳುಳ್ಳ ಬಳ್ಳಿಗಳನ್ನು ಬೆಳೆಸುವುದು ರೂಢಿಯಲ್ಲಿದೆ. ಆದರೆ, ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ‌‌ಕ್ಕೆ ಸಂಬಂಧಿಸಿ ಮೊನ್ನೆ CCB ಅಧಿಕಾರಿಗಳ ಕೈಗೆ ತಗಲಾಕೊಂಡ ಆರೋಪಿಯೊಬ್ಬ ಕೊಂಚ ಬೇರೆಯೇ ರೀತಿಯಲ್ಲಿ ಸ್ವಯಂಕೃಷಿಗೆ ಇಳಿದಿದ್ದಾನೆ! ಹೌದು, ಮೊನ್ನೆ ಬಂಧಿತನಾದ ಆರೋಪಿ ಶ್ರೀ ಅಲಿಯಾಸ್ ಶ್ರೀನಿವಾಸ ಸುಬ್ರಮಣ್ಯನ್ ಮನೆ ಮೇಲೆ ದಾಳಿ ಮಾಡಿದ್ದ […]

ಮೊನ್ನೆ CCB ಬಲೆಗೆ ಬಿದ್ದ ಧೂರ್ತ ಶ್ರೀ.. ಮನೆಯಲ್ಲೇ ಗಾಂಜಾ ಗಿಡಗಳನ್ನ ಬೆಳೆದಿದ್ದ!
KUSHAL V
| Updated By: ಸಾಧು ಶ್ರೀನಾಥ್​|

Updated on: Sep 21, 2020 | 12:40 PM

Share

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಈ ನಡುವೆ ಮನೆಯಲ್ಲಿ ತಾರಸಿ ತೋಟಗಳನ್ನ ನಿರ್ಮಿಸಿ ಸ್ವಯಂಕೃಷಿ ನಡೆಸುವ ಹವ್ಯಾಸ ಹೆಚ್ಚಾಗಿದೆ. ದೈನಂದಿನ ಅಡುಗೆಗೆ ಬಳಸುವ ಸೊಪ್ಪು, ತರಕಾರಿ ಹಾಗೂ ಇತರೆ ಔಷಧಿ ಗುಣಗಳುಳ್ಳ ಬಳ್ಳಿಗಳನ್ನು ಬೆಳೆಸುವುದು ರೂಢಿಯಲ್ಲಿದೆ. ಆದರೆ, ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ‌‌ಕ್ಕೆ ಸಂಬಂಧಿಸಿ ಮೊನ್ನೆ CCB ಅಧಿಕಾರಿಗಳ ಕೈಗೆ ತಗಲಾಕೊಂಡ ಆರೋಪಿಯೊಬ್ಬ ಕೊಂಚ ಬೇರೆಯೇ ರೀತಿಯಲ್ಲಿ ಸ್ವಯಂಕೃಷಿಗೆ ಇಳಿದಿದ್ದಾನೆ!

ಹೌದು, ಮೊನ್ನೆ ಬಂಧಿತನಾದ ಆರೋಪಿ ಶ್ರೀ ಅಲಿಯಾಸ್ ಶ್ರೀನಿವಾಸ ಸುಬ್ರಮಣ್ಯನ್ ಮನೆ ಮೇಲೆ ದಾಳಿ ಮಾಡಿದ್ದ CCB ಅಧಿಕಾರಿಗಳಿಗೆ ಆತನ ಮನೆಯಲ್ಲಿ ಗಾಂಜಾ ಗಿಡಗಳು ಸಿಕ್ಕಿದೆ. ದಾಳಿ ವೇಳೆ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಮನೆಯಲ್ಲಿ ಎರಡು ಗಾಂಜಾ ಗಿಡಗಳು ಪತ್ತೆಯಾಗಿವೆ.

ವೈಯಕ್ತಿಕ ಬಳಕೆಗಾಗಿ ಗಾಂಜಾ ಗಿಡಗಳನ್ನು ನೆಟ್ಟಿದ್ದೆ ಈ ಬಗ್ಗೆ ಶ್ರೀ ಅಲಿಯಾಸ್​ ಶ್ರೀನಿವಾಸ ಸುಬ್ರಮಣ್ಯನ್​ನ ಪ್ರಶ್ನಿಸಿದ್ದಕ್ಕೆ ತನ್ನ ವೈಯಕ್ತಿಕ ಬಳಕೆಗಾಗಿ ಗಾಂಜಾ ಗಿಡಗಳನ್ನು ನೆಟ್ಟಿದ್ದೆ ಎಂಬ ಸಬೂಬು ಹೇಳಿದ್ದಾನಂತೆ ಆಸಾಮಿ.

ಅಂದ ಹಾಗೆ, ಶ್ರೀ ಕಷ್ಟಪಟ್ಟು ಬೆಳೆಸಿರುವ ಈ ಗಿಡಗಳು ಆರೋಪಿಯ ಪರಿಶ್ರಮದಿಂದ ಸುಮಾರು ಅರ್ಧ ಅಡಿಯಷ್ಟು ಎತ್ತರ ಬೆಳೆದುನಿಂತಿದೆ. ಶ್ರೀನಿವಾಸನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸದೆ ಇದ್ದಿದ್ದರೇ ಮುಂಬರುವ ದಿನಗಳಲ್ಲಿ ಇದನ್ನು ಹೆಮ್ಮರವಾಗಿ ಬೆಳೆಸುತ್ತಿದ್ದನೇನೋ!

ಇದಲ್ಲದೆ, ಈತನ ನಿವಾಸಲ್ಲಿ ಹಲವು ಮಾದರಿಯ ಮಾದಕ ವಸ್ತುಗಳು ಸಹ ಪತ್ತೆಯಾಗಿತ್ತು. 13 ಎಕ್ಸಟಸಿ ಮಾತ್ರೆಗಳು, 100 ಗ್ರಾಂ ಗಾಂಜಾ, 1.1 ಗ್ರಾಂ MDMA ಮತ್ತು 0.5 ಗ್ರಾಂ ಹಶೀಷ್​ ಸಹ ಸಿಕ್ಕಿತ್ತು.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ