ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕಾರು ಚಾಲಕನ ಹತ್ಯೆ

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಂದಿನಿ ಲೇಔಟ್ ಬಳಿಯ ರಾಜೀವ್‌ ಗಾಂಧಿ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿರುವ ಲಗ್ಗೆರೆ ನಿವಾಸಿ ರಘು ತಡರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದು ರಾಜೀವ್ ಗಾಂಧಿ ನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಎಂಟ್ರಿ ಕೊಟ್ಟ ಗ್ಯಾಂಗ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕಾರು ಚಾಲಕನ ಹತ್ಯೆ
ಸಾಧು ಶ್ರೀನಾಥ್​

Updated on: Dec 12, 2019 | 11:57 AM

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಂದಿನಿ ಲೇಔಟ್ ಬಳಿಯ ರಾಜೀವ್‌ ಗಾಂಧಿ ನಗರದಲ್ಲಿ ನಡೆದಿದೆ.

ವೃತ್ತಿಯಲ್ಲಿ ಚಾಲಕನಾಗಿರುವ ಲಗ್ಗೆರೆ ನಿವಾಸಿ ರಘು ತಡರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದು ರಾಜೀವ್ ಗಾಂಧಿ ನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಎಂಟ್ರಿ ಕೊಟ್ಟ ಗ್ಯಾಂಗ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಘುನನ್ನು ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us