AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲು

ಗರ್ಭಪಾತವೇ ಅಪರಾಧ. ಆಸ್ಪತ್ರೆಗಳಲ್ಲಿ ಕೂಡ ಗರ್ಭಪಾತ ಮಾಡುವಂತಿಲ್ಲ. ಮೆಡಿಕಲ್ ಟರ್ಮಿನೇಶನ್​ ಆಫ್​ ಪ್ರೆಗ್ನೆನ್ಸಿ ಕಾಯ್ದೆ 2002 ಮತ್ತು 2003 ರ ನಿಯಮಗಳ ಅನುಸಾರ, ಗರ್ಭಪಾತದ ಮಾತ್ರೆಗಳು ಕೇವಲ ಆಸ್ಪತ್ರೆಗಳಲ್ಲಿ ಮಾತ್ರ ಇರಬೇಕು.

ಅಕ್ರಮವಾಗಿ ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: May 02, 2022 | 6:19 PM

Share

ಯಾವುದೇ ಮಾನ್ಯ ದಾಖಲೆಗಳು ಇಲ್ಲದೆ, ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.  ಇ-ಕಾಮರ್ಸ್​ ಸಂಸ್ಥೆ ಹೀಗೆ ಅಕ್ರಮವಾಗಿ ಅಬಾರ್ಶನ್​ ಕಿಟ್​​ನ್ನು ಮಾರಾಟ ಮಾಡುತ್ತಿದೆ ಎಂಬ ಮಾಹಿತಿ ಬೇರೆ ಮೂಲದಿಂದ ಸಿಕ್ಕಿತ್ತು. ಅದು ಸತ್ಯವೋ, ಕಂಪನಿ ಮಾರಾಟ ಮಾಡುತ್ತಿರುವುದು ನಿಜವಾ ಎಂದು ಪರಿಶೀಲನೆ ನಡೆಸಲು ನಾವೇ ಖುದ್ದಾಗಿ ಒಂದು ಕಿಟ್​ಗೆ ಆರ್ಡರ್ ಮಾಡಿದ್ದೆವು.  ಇದರಿಂದಾಗಿ ಗರ್ಭಪಾತ ಮಾತ್ರೆಗಳನ್ನು ಮಾರಾಟ ಮಾಡುತ್ತಿರುವುದು ದೃಢಪಟ್ಟಿದೆ ಎಂದು ಎಫ್​ಡಿಎ ಸಹಾಯಕ ಆಯುಕ್ತ ಗಣೇಶ್ ರೋಕಡೆ ತಿಳಿಸಿದ್ದಾರೆ.  

ಅಂದಹಾಗೇ, ಈ ಗರ್ಭಪಾತಕ್ಕೆ ಸಂಬಂಧಪಟ್ಟು ಸಂಸ್ಥೆ ಮಾರಾಟ ಮಾಡುವ ಕಿಟ್​​ಗೆ ಹಣ ಪಡೆಯುತ್ತದೆಯೇ ಹೊರತು ಅದಕ್ಕೆ ಬಿಲ್ ಮಾಡುವುದಿಲ್ಲ. ಅಂದರೆ ಈ ಇ ಕಾಮರ್ಸ್​ ವೇದಿಕೆಯಲ್ಲಿ ನೋಂದಣಿ ಮಾಡಿಕೊಂಡಿರುವ ನಿರ್ಧಿಷ್ಟ ಮಾರಾಟಗಾರರು ಒಡಿಶಾದ ಔಷಧಿ ಅಂಗಡಿಯೊಂದರ ದಾಖಲೆಯನ್ನು ಬಳಸುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಗಣೇಶ್ ಹೇಳಿದ್ದಾರೆ.

ಗರ್ಭಪಾತವೇ ಅಪರಾಧ. ಆಸ್ಪತ್ರೆಗಳಲ್ಲಿ ಕೂಡ ಗರ್ಭಪಾತ ಮಾಡುವಂತಿಲ್ಲ. ಮೆಡಿಕಲ್ ಟರ್ಮಿನೇಶನ್​ ಆಫ್​ ಪ್ರೆಗ್ನೆನ್ಸಿ ಕಾಯ್ದೆ 2002 ಮತ್ತು 2003 ರ ನಿಯಮಗಳ ಅನುಸಾರ, ಗರ್ಭಪಾತದ ಮಾತ್ರೆಗಳು ಕೇವಲ ಆಸ್ಪತ್ರೆಗಳಲ್ಲಿ ಮಾತ್ರ ಇರಬೇಕು. ಅದೂ ಕೂಡ ತರಬೇತಿ ಪಡೆದ ತಜ್ಞರು ಮಾತ್ರ ಅದರ ಮೇಲ್ವಿಚಾರಣೆ ವಹಿಸಿಕೊಳ್ಳಬೇಕು. ಸದ್ಯ ಇ -ಕಾಮರ್ಸ್ ಸಂಸ್ಥೆ ಮತ್ತು ಅಬಾರ್ಶನ್​ ಕಿಟ್​ ಮಾರುತ್ತಿದ್ದ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Parashuram Jayanti 2022: ಪರಶುರಾಮನ ಬಗ್ಗೆ 10 ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ..!

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ