AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು *** ಸಹಕರಿಸುವಂತೆ ಸಂದೇಶ ಕಳಿಸಿದ್ದ ಕಾಮುಕನ ವಿರುದ್ಧ ದೂರು

ಬಾಲಕಿಗೆ ಅಶ್ಲೀಲ ಆಡಿಯೋ ಕಳಿಸ್ತಿದ್ದ ವ್ಯಕ್ತಿ ವಿರುದ್ಧ ಬಾಲಕಿಯ ಪೋಷಕರಿಂದ ಇ-ಮೇಲ್ ಮೂಲಕ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು *** ಸಹಕರಿಸುವಂತೆ ಸಂದೇಶ ಕಳಿಸಿದ್ದ ಕಾಮುಕನ ವಿರುದ್ಧ ದೂರು
ಇನ್‌ಸ್ಟಾಗ್ರಾಂ
ಆಯೇಷಾ ಬಾನು
| Edited By: |

Updated on:Dec 21, 2020 | 12:12 PM

Share

ಬೆಂಗಳೂರು: ಅನುಕೂಲ ಎಲ್ಲಿರುತ್ತೋ ಅಲ್ಲಿ ಅನಾನುಕೂಲ ಸಹ ಇದ್ದೇ ಇರುತ್ತೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಎಲ್ಲೇ ಮೀರಿ ಹೋಗುತ್ತಿವೆ. ಇನ್‌ಸ್ಟಾಗ್ರಾಂನಲ್ಲಿ ಬಾಲಕಿಗೆ ಅಶ್ಲೀಲ ಆಡಿಯೋ ಕಳಿಸ್ತಿದ್ದ ವ್ಯಕ್ತಿ ವಿರುದ್ಧ ಬಾಲಕಿಯ ಪೋಷಕರು ಇ-ಮೇಲ್ ಮೂಲಕ ದೂರು‌ ಸಲ್ಲಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಘಟನೆ ವಿವರ: ಆನ್‌ಲೈನ್ ಕ್ಲಾಸ್ ವೇಳೆ ಇನ್‌ಸ್ಟಾಗ್ರಾಂನಲ್ಲಿ ಖಾತೆ ಓಪನ್ ಮಾಡಿದ್ದ 13 ವರ್ಷದ ಸಂತ್ರಸ್ತೆಗೆ ಅಪರಿಚಿತ ವ್ಯಕ್ತಿಯ ಪರಿಚಯವಾಗುತ್ತೆ. ಇನ್‌ಸ್ಟಾಗ್ರಾಂನಲ್ಲಿ ಬಾಲಕಿಗೆ ಪ್ರತಿ ದಿನ ಚಾಟಿಂಗ್ ಮಾಡುತ್ತ ಆ ಅಪರಿಚಿತ ವ್ಯಕ್ತಿ ಆಪ್ತನಾಗಿದ್ದ. ಹೀಗೆ ಪರಿಚಯ ಮಾಡಿಕೊಂಡು ತನ್ನ ಅಶ್ಲೀಲ ಫೋಟೋ ಹಾಗೂ ವಿಡಿಯೋ ಕಳಿಸಿ ವಿಕೃತಿ ಮೆರೆಯಲು ಶುರು ಮಾಡಿದ್ದ.

ಅಷ್ಟಕ್ಕೆ ಸುಮ್ಮನಾಗದೆ ಬಾಲಕಿಗೂ ಅಶ್ಲೀಲ ಫೋಟೋ ಕಳಿಸುವಂತೆ ಒತ್ತಡ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ವ್ಯಕ್ತಿ ಕಳಿಸಿದ್ದ ಅಶ್ಲೀಲ ಫೋಟೋ ಡಿಲೀಟ್ ಮಾಡಿದ್ದಳು. ಇದಾದ ಬಳಿಕವೂ ನಿರಂತರವಾಗಿ ಆ ಅಪರಿಚಿತ ವ್ಯಕ್ತಿ ಸಂದೇಶ ಕಳುಹಿಸಿ ನಗ್ನ ಫೋಟೋ ಕಳಿಸುವಂತೆ ಬೆದರಿಕೆ ಹಾಕಿದ್ದಾನೆ.

ಬಳಿಕ ಬಾಲಕಿ ಆರೋಪಿಯ ಇನ್‌ಸ್ಟಾಗ್ರಾಂ ಖಾತೆ ಬಗ್ಗೆ ರಿಪೋರ್ಟ್ ಮಾಡಿ ಸುಮ್ಮನಾಗಿದ್ದಳು. ಇಷ್ಟೆಲ್ಲಾ ಆದ ಬಳಿಕವೂ ಅಪರಿಚಿತ ವ್ಯಕ್ತಿ ನಕಲಿ ಖಾತೆ ಸೃಷ್ಟಿಸಿ ಮತ್ತೆ ಮೆಸೇಜ್ ಮಾಡಲು ಶುರು ಮಾಡಿದ್ದ. ಲೈಂಗಿಕವಾಗಿ ಸಹಕರಿಸುವಂತೆ ಬಾಲಕಿಗೆ ಆಡಿಯೋ ಸಂದೇಶಗಳನ್ನು ಕಳುಹಿಸಿದ್ದ.

ಹೀಗಾಗಿ ಇ-ಮೇಲ್ ಮೂಲಕ ಬಾಲಕಿ ಪೋಷಕರು ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ (Cyber Crime, Economic Offences & Narcotics –CEN) ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ರೀತಿ ವಿಕೃತಿ ಮೆರೆಯುವವರಿಗೆ ಕಠಿಣ ಶಿಕ್ಷೆ ನೀಡಬೇಕಿದೆ.

Dating Appನಲ್ಲಿ ಟೈಂ ಪಾಸ್ ಮಾಡೊ ಯುವಕರೇ ಹುಷಾರ್! ಇಲ್ಲ ಅಂದ್ರೆ ಮಾನ ಮರ್ಯಾದೆ ಹರಾಜ್..

Published On - 11:32 am, Mon, 21 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ