AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು *** ಸಹಕರಿಸುವಂತೆ ಸಂದೇಶ ಕಳಿಸಿದ್ದ ಕಾಮುಕನ ವಿರುದ್ಧ ದೂರು

ಬಾಲಕಿಗೆ ಅಶ್ಲೀಲ ಆಡಿಯೋ ಕಳಿಸ್ತಿದ್ದ ವ್ಯಕ್ತಿ ವಿರುದ್ಧ ಬಾಲಕಿಯ ಪೋಷಕರಿಂದ ಇ-ಮೇಲ್ ಮೂಲಕ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು *** ಸಹಕರಿಸುವಂತೆ ಸಂದೇಶ ಕಳಿಸಿದ್ದ ಕಾಮುಕನ ವಿರುದ್ಧ ದೂರು
ಇನ್‌ಸ್ಟಾಗ್ರಾಂ
ಆಯೇಷಾ ಬಾನು
| Edited By: |

Updated on:Dec 21, 2020 | 12:12 PM

Share

ಬೆಂಗಳೂರು: ಅನುಕೂಲ ಎಲ್ಲಿರುತ್ತೋ ಅಲ್ಲಿ ಅನಾನುಕೂಲ ಸಹ ಇದ್ದೇ ಇರುತ್ತೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಎಲ್ಲೇ ಮೀರಿ ಹೋಗುತ್ತಿವೆ. ಇನ್‌ಸ್ಟಾಗ್ರಾಂನಲ್ಲಿ ಬಾಲಕಿಗೆ ಅಶ್ಲೀಲ ಆಡಿಯೋ ಕಳಿಸ್ತಿದ್ದ ವ್ಯಕ್ತಿ ವಿರುದ್ಧ ಬಾಲಕಿಯ ಪೋಷಕರು ಇ-ಮೇಲ್ ಮೂಲಕ ದೂರು‌ ಸಲ್ಲಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಘಟನೆ ವಿವರ: ಆನ್‌ಲೈನ್ ಕ್ಲಾಸ್ ವೇಳೆ ಇನ್‌ಸ್ಟಾಗ್ರಾಂನಲ್ಲಿ ಖಾತೆ ಓಪನ್ ಮಾಡಿದ್ದ 13 ವರ್ಷದ ಸಂತ್ರಸ್ತೆಗೆ ಅಪರಿಚಿತ ವ್ಯಕ್ತಿಯ ಪರಿಚಯವಾಗುತ್ತೆ. ಇನ್‌ಸ್ಟಾಗ್ರಾಂನಲ್ಲಿ ಬಾಲಕಿಗೆ ಪ್ರತಿ ದಿನ ಚಾಟಿಂಗ್ ಮಾಡುತ್ತ ಆ ಅಪರಿಚಿತ ವ್ಯಕ್ತಿ ಆಪ್ತನಾಗಿದ್ದ. ಹೀಗೆ ಪರಿಚಯ ಮಾಡಿಕೊಂಡು ತನ್ನ ಅಶ್ಲೀಲ ಫೋಟೋ ಹಾಗೂ ವಿಡಿಯೋ ಕಳಿಸಿ ವಿಕೃತಿ ಮೆರೆಯಲು ಶುರು ಮಾಡಿದ್ದ.

ಅಷ್ಟಕ್ಕೆ ಸುಮ್ಮನಾಗದೆ ಬಾಲಕಿಗೂ ಅಶ್ಲೀಲ ಫೋಟೋ ಕಳಿಸುವಂತೆ ಒತ್ತಡ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ವ್ಯಕ್ತಿ ಕಳಿಸಿದ್ದ ಅಶ್ಲೀಲ ಫೋಟೋ ಡಿಲೀಟ್ ಮಾಡಿದ್ದಳು. ಇದಾದ ಬಳಿಕವೂ ನಿರಂತರವಾಗಿ ಆ ಅಪರಿಚಿತ ವ್ಯಕ್ತಿ ಸಂದೇಶ ಕಳುಹಿಸಿ ನಗ್ನ ಫೋಟೋ ಕಳಿಸುವಂತೆ ಬೆದರಿಕೆ ಹಾಕಿದ್ದಾನೆ.

ಬಳಿಕ ಬಾಲಕಿ ಆರೋಪಿಯ ಇನ್‌ಸ್ಟಾಗ್ರಾಂ ಖಾತೆ ಬಗ್ಗೆ ರಿಪೋರ್ಟ್ ಮಾಡಿ ಸುಮ್ಮನಾಗಿದ್ದಳು. ಇಷ್ಟೆಲ್ಲಾ ಆದ ಬಳಿಕವೂ ಅಪರಿಚಿತ ವ್ಯಕ್ತಿ ನಕಲಿ ಖಾತೆ ಸೃಷ್ಟಿಸಿ ಮತ್ತೆ ಮೆಸೇಜ್ ಮಾಡಲು ಶುರು ಮಾಡಿದ್ದ. ಲೈಂಗಿಕವಾಗಿ ಸಹಕರಿಸುವಂತೆ ಬಾಲಕಿಗೆ ಆಡಿಯೋ ಸಂದೇಶಗಳನ್ನು ಕಳುಹಿಸಿದ್ದ.

ಹೀಗಾಗಿ ಇ-ಮೇಲ್ ಮೂಲಕ ಬಾಲಕಿ ಪೋಷಕರು ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ (Cyber Crime, Economic Offences & Narcotics –CEN) ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ರೀತಿ ವಿಕೃತಿ ಮೆರೆಯುವವರಿಗೆ ಕಠಿಣ ಶಿಕ್ಷೆ ನೀಡಬೇಕಿದೆ.

Dating Appನಲ್ಲಿ ಟೈಂ ಪಾಸ್ ಮಾಡೊ ಯುವಕರೇ ಹುಷಾರ್! ಇಲ್ಲ ಅಂದ್ರೆ ಮಾನ ಮರ್ಯಾದೆ ಹರಾಜ್..

Published On - 11:32 am, Mon, 21 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ