AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ

ಯುವಕನಮೊಬ್ಬ ರೋಷಾವೇಶದಿಂದ ಯುವತಿಗೆ ಚಪ್ಪಲಿಯಿಂದ ಥಳಿಸುವ ದೃಶ್ಯಗಳು ಸಿಸಿ‌ ಕೆಮೆರಾ ವಿಡಿಯೋದಲ್ಲಿ ಸೆರೆಯಾಗಿತ್ತು. ಈ ಘಟನೆ ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿತ್ತು. ಈ ಪ್ರಕರಣ ಹಲ್ಲೆಗೊಳಗಾದ ಯುವತಿ ಹಾಗೂ ಆಕೆಯ ಕುಟುಂಬಸ್ಥರು ವಿಜಯಪುರ ಗ್ರಾಮೀಣ ಠಾಣೆಗೆ ಆಗಮಿಸಿದ್ದಾರೆ. ಇದೇ ವೇಳೆ ಮಾತನಾಡಿದ ಯುವತಿ, ನನಗೆ ಆರೋಪಿ ಶ್ರೀಶೈಲ್ ಮಸಳಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿದ್ದಾಳೆ.

ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ
ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ
ಅಶೋಕ ಯಡಳ್ಳಿ, ವಿಜಯಪುರ
| Updated By: Rakesh Nayak Manchi|

Updated on: Feb 13, 2024 | 9:22 PM

Share

ವಿಜಯಪುರ, ಫೆ.13: ತಾಲೂಕಿನ ನಾಗಠಾಣ ಗ್ರಾಮದಲ್ಲಿ ಅನ್ಯಕೋಮಿನ ಯುವತಿಗೆ ಯುವಕ ಶ್ರೀಶೈಲ್ ಮಸಳಿ ಚಪ್ಪಲಿಯಿಂದ ಹಲ್ಲೆ (Assault) ಮಾಡಿದ್ದ ಪ್ರಕರಣ ಸಂಬಂಧ ಹಲ್ಲೆಗೊಳಗಾದ ಯುವತಿ ಮತ್ತು ಆಕೆಯ ಕುಟುಂಬಸ್ಥರು ವಿಜಯಪುರ (Vijayapura) ಗ್ರಾಮೀಣ ಠಾಣೆಗೆ ಆಗಮಿಸಿದ್ದಾರೆ. ಹಲ್ಲೆ ಮಾಡಿದ ಶ್ರೀಶೈಲ್ ಮಸಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಠಾಣೆ ಆವರಣದಲ್ಲಿ ಯುವತಿ ಆಗ್ರಹಿಸಿದ್ದಾಳೆ.

ಮಾಧ್ಯಮಗಳ ಜೊತೆ ಮಾತನಾಡಿದ ಯುವತಿ, ನನಗೆ ಶ್ರೀಶೈಲ್ ಮಸಳಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ನಿನ್ನೆ ನಾನು ನಮ್ಮೂರಿನಿಂದ ನಾಗಠಾಣ ಗ್ರಾಮಕ್ಕೆ ಬಂದು ಕಂಪ್ಯೂಟರ್ ಸೆಂಟರ್​ನಲ್ಲಿ ಕೆಲಸಕ್ಕೆ ಬಂದಿದ್ದೆ. ಬಸ್ ನಿಲ್ದಾಣದ ಬಳಿ ನನಗೆ ಆತ ಚುಡಾಯಿಸಿದ್ದ. ಈ ವೇಳೆ ಆತನಿಗೆ ಎಚ್ಚರಿಕೆ ನೀಡಿ ಕೆಲಸಕ್ಕೆ ಹೋಗಿದ್ದೆ ಎಂದಳು.

ಇದನ್ನೂ ಓದಿ; ಅನ್ಯಕೋಮಿನ ಯುವತಿಗೆ ಚಪ್ಪಲಿಯಿಂದ ಥಳಿಸಿದ ನಾಗಠಾಣಾ ಯುವಕ, ಪರಾರಿ

ಅಲ್ಲದೆ, ನಾನು ಕೆಲಸ ಮಾಡುತ್ತಿದ್ದ ಕಚೇರಿಗೆ ಬಂದು ಹೊರಗೆಳೆದು ಚಪ್ಪಲಿಯಿಂದ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಹಲವು ದಿನಗಳಿಂದ ನನಗೆ ಚುಡಾಯಿಸುತ್ತಿದ್ದ, ಆದರೂ ನಾನು ಮನೆಯಲ್ಲಿ ಈ ವಿಚಾರ ತಿಳಿಸಿದಿಲ್ಲ. ನಿನ್ನೆ ಏಕಾಏಕಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದಳು.

ನನ್ನ ಮಗಳಿಗೆ ಆಗಿರುವ ಅನ್ಯಾಯ ಬೇರೆ ಮಕ್ಕಳಿಗೆ ಆಗಬಾರದು ಎಂದು ಯುವತಿ ತಾಯಿ ರೇಷ್ಮಾ ಮನವಿ ಮಾಡಿದ್ದಾರೆ. ಕೆಲಸಕ್ಕೆ ಬಂದ ಯುವತಿ ಮೇಲೆ ಈ ರೀತಿ ಹಲ್ಲೆ ಮಾಡುವುದು ಸರಿಯಲ್ಲ. ಹಲ್ಲೆ ಮಾಡಿದ ಶ್ರೀಶೈಲ್ ಮಸಳಿ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಏನಿದು ಪ್ರಕರಣ?

ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಶ್ರೀಶೈಲ ಕಂಪ್ಯೂಟರ್ ತರಬೇತಿ ಕೇಂದ್ರದ ಒಳ ಹೋಗಿ ಯುವತಿಯನ್ನು ಹೊರ ತಂದು ಚಪ್ಪಲಿಯಿಂದ ಥಳಿಸಿದ್ದನು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ