AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ

ಯುವಕನಮೊಬ್ಬ ರೋಷಾವೇಶದಿಂದ ಯುವತಿಗೆ ಚಪ್ಪಲಿಯಿಂದ ಥಳಿಸುವ ದೃಶ್ಯಗಳು ಸಿಸಿ‌ ಕೆಮೆರಾ ವಿಡಿಯೋದಲ್ಲಿ ಸೆರೆಯಾಗಿತ್ತು. ಈ ಘಟನೆ ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿತ್ತು. ಈ ಪ್ರಕರಣ ಹಲ್ಲೆಗೊಳಗಾದ ಯುವತಿ ಹಾಗೂ ಆಕೆಯ ಕುಟುಂಬಸ್ಥರು ವಿಜಯಪುರ ಗ್ರಾಮೀಣ ಠಾಣೆಗೆ ಆಗಮಿಸಿದ್ದಾರೆ. ಇದೇ ವೇಳೆ ಮಾತನಾಡಿದ ಯುವತಿ, ನನಗೆ ಆರೋಪಿ ಶ್ರೀಶೈಲ್ ಮಸಳಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿದ್ದಾಳೆ.

ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ
ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 13, 2024 | 9:22 PM

Share

ವಿಜಯಪುರ, ಫೆ.13: ತಾಲೂಕಿನ ನಾಗಠಾಣ ಗ್ರಾಮದಲ್ಲಿ ಅನ್ಯಕೋಮಿನ ಯುವತಿಗೆ ಯುವಕ ಶ್ರೀಶೈಲ್ ಮಸಳಿ ಚಪ್ಪಲಿಯಿಂದ ಹಲ್ಲೆ (Assault) ಮಾಡಿದ್ದ ಪ್ರಕರಣ ಸಂಬಂಧ ಹಲ್ಲೆಗೊಳಗಾದ ಯುವತಿ ಮತ್ತು ಆಕೆಯ ಕುಟುಂಬಸ್ಥರು ವಿಜಯಪುರ (Vijayapura) ಗ್ರಾಮೀಣ ಠಾಣೆಗೆ ಆಗಮಿಸಿದ್ದಾರೆ. ಹಲ್ಲೆ ಮಾಡಿದ ಶ್ರೀಶೈಲ್ ಮಸಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಠಾಣೆ ಆವರಣದಲ್ಲಿ ಯುವತಿ ಆಗ್ರಹಿಸಿದ್ದಾಳೆ.

ಮಾಧ್ಯಮಗಳ ಜೊತೆ ಮಾತನಾಡಿದ ಯುವತಿ, ನನಗೆ ಶ್ರೀಶೈಲ್ ಮಸಳಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ನಿನ್ನೆ ನಾನು ನಮ್ಮೂರಿನಿಂದ ನಾಗಠಾಣ ಗ್ರಾಮಕ್ಕೆ ಬಂದು ಕಂಪ್ಯೂಟರ್ ಸೆಂಟರ್​ನಲ್ಲಿ ಕೆಲಸಕ್ಕೆ ಬಂದಿದ್ದೆ. ಬಸ್ ನಿಲ್ದಾಣದ ಬಳಿ ನನಗೆ ಆತ ಚುಡಾಯಿಸಿದ್ದ. ಈ ವೇಳೆ ಆತನಿಗೆ ಎಚ್ಚರಿಕೆ ನೀಡಿ ಕೆಲಸಕ್ಕೆ ಹೋಗಿದ್ದೆ ಎಂದಳು.

ಇದನ್ನೂ ಓದಿ; ಅನ್ಯಕೋಮಿನ ಯುವತಿಗೆ ಚಪ್ಪಲಿಯಿಂದ ಥಳಿಸಿದ ನಾಗಠಾಣಾ ಯುವಕ, ಪರಾರಿ

ಅಲ್ಲದೆ, ನಾನು ಕೆಲಸ ಮಾಡುತ್ತಿದ್ದ ಕಚೇರಿಗೆ ಬಂದು ಹೊರಗೆಳೆದು ಚಪ್ಪಲಿಯಿಂದ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಹಲವು ದಿನಗಳಿಂದ ನನಗೆ ಚುಡಾಯಿಸುತ್ತಿದ್ದ, ಆದರೂ ನಾನು ಮನೆಯಲ್ಲಿ ಈ ವಿಚಾರ ತಿಳಿಸಿದಿಲ್ಲ. ನಿನ್ನೆ ಏಕಾಏಕಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದಳು.

ನನ್ನ ಮಗಳಿಗೆ ಆಗಿರುವ ಅನ್ಯಾಯ ಬೇರೆ ಮಕ್ಕಳಿಗೆ ಆಗಬಾರದು ಎಂದು ಯುವತಿ ತಾಯಿ ರೇಷ್ಮಾ ಮನವಿ ಮಾಡಿದ್ದಾರೆ. ಕೆಲಸಕ್ಕೆ ಬಂದ ಯುವತಿ ಮೇಲೆ ಈ ರೀತಿ ಹಲ್ಲೆ ಮಾಡುವುದು ಸರಿಯಲ್ಲ. ಹಲ್ಲೆ ಮಾಡಿದ ಶ್ರೀಶೈಲ್ ಮಸಳಿ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಏನಿದು ಪ್ರಕರಣ?

ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಶ್ರೀಶೈಲ ಕಂಪ್ಯೂಟರ್ ತರಬೇತಿ ಕೇಂದ್ರದ ಒಳ ಹೋಗಿ ಯುವತಿಯನ್ನು ಹೊರ ತಂದು ಚಪ್ಪಲಿಯಿಂದ ಥಳಿಸಿದ್ದನು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ