AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಟ್​ಕೇಸ್​ನಲ್ಲಿ ಮಗುವಿನ ಶವ ಸಾಗಾಟ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಹತ್ಯೆಯ ಭೀಕರತೆ

ಸ್ಟಾರ್ಟ್ ಅಪ್ ಕಂಪನಿಯ ಸಿಇಓ ಸುಚನಾ ಸೇಠ್ ತನ್ನ ಮಗುವನ್ನು ಕೊಲೆ ಮಾಡಿದ್ದರ ಹಿಂದಿನ ಕಾರಣ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಪತಿ ತನ್ನ ಮಗನನ್ನು ಭೇಟಿಯಾಗಬಾರದು ಎಂದು ತನ್ನ ಮಗುವನ್ನೇ ಸುಚನಾ ಹತ್ಯೆ ಮಾಡಿ ಸೂಟ್​ಕೇಸ್​ನಲ್ಲಿ ಹಾಕಿ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಚಿತ್ರದುರ್ಗದಲ್ಲಿ ಸಿಕ್ಕಿಬಿದ್ದಿದ್ದಳು. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಬಹಿರಂಗಪಡಿಸಿದ್ದಾರೆ.

ಸೂಟ್​ಕೇಸ್​ನಲ್ಲಿ ಮಗುವಿನ ಶವ ಸಾಗಾಟ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಹತ್ಯೆಯ ಭೀಕರತೆ
ಸೂಟ್​ಕೇಸ್​ನಲ್ಲಿ ಮಗುವಿನ ಶವ ಸಾಗಾಟ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಹತ್ಯೆಯ ಭೀಕರತೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: Rakesh Nayak Manchi|

Updated on: Jan 09, 2024 | 10:01 PM

Share

ಚಿತ್ರದುರ್ಗ, ಜ.9: ಪತಿ ವೆಂಕಟರಮಣ ತನ್ನ ನಾಲ್ಕು ವರ್ಷದ ಮಗನನ್ನು ಭೇಟಿಯಾಗಬಾರದು ಎಂದು ಮಗನನ್ನೇ ಹತ್ಯೆ (Child Murder) ಮಾಡಿ ಶವವನ್ನು ಸೂಟ್​ಕೇಸ್​ನಲ್ಲಿ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಆರೋಪಿ ಮಹಿಳೆ ಸುಚನಾ ಸೇಠ್ ಚಿತ್ರದುರ್ಗದಲ್ಲಿ (Chitradurga) ಸಿಕ್ಕಿಬಿದ್ದಿದ್ದಳು. ಪ್ರಕರಣ ಸಂಬಂಧ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿಕೊಂಡಿದ್ದಾರೆ.

ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಅವರು ಮೃತ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಕುಮಾರ ನಾಯ್ಕ್, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದರು.

ಇದನ್ನೂ ಓದಿ: ಪತಿ ಮೇಲಿನ ಕೋಪಕ್ಕೆ ತನ್ನ ಮಗನನ್ನು ಕೊಂದ ಉದ್ಯಮಿ ಸುಚನಾ ಸೇಠ್ ಯಾರು?

ಪ್ರಕರಣದ ಬಗ್ಗೆ ನಮಗೇನೂ ಗೊತ್ತಿಲ್ಲ: ಮೃತ ಬಾಲಕನ ಸಂಬಂಧಿ

ಪ್ರಕರಣ ಸಂಬಂಧ ಮಾತನಾಡಿದ ಕೊಲೆಗೀಡಾಗಿರುವ ಬಾಲಕನ ತಂದೆ ವೆಂಕಟರಮಣ ಸಂಬಂಧಿ, ವೆಂಕಟರಮಣ ತುಂಬಾ ನೋವಿನಲ್ಲಿದ್ದಾರೆ, ಒಂಟಿಯಾಗಿರಲು ಬಿಟ್ಟುಬಿಡಿ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ನಮಗೇನು ಗೊತ್ತಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More