AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು
ಮದುವೆ Image Credit source: Tv9 Marathi
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 23, 2023 | 5:02 PM

Share

ಅಹಮದ್‌ನಗರ ಆಗಸ್ಟ್ 23: ಅಹಮದ್‌ನಗರದಲ್ಲಿರುವ (Ahmednagar) ಕುಟುಂಬವೊಂದು ಮದುವೆಯ (Wedding) ಎಲ್ಲ ಸಿದ್ಧತೆ ನಡೆಸಿತ್ತು. ಕಲ್ಯಾಣ ಮಂಟಪ ಸಿಂಗಾರಗೊಂಡಿದ್ದ ವಧು-ವರರು ಇನ್ನೇನು ಹಾರ ಹಾಕಿಕೊಳ್ಳಲು ಮುಂದಾದಾಗ ಏಕಾಏಕಿ ಮದುಮಗನ ಮೊದಲ ಪತ್ನಿ ಮಂಟಪದಲ್ಲಿ ಕಾಣಿಸಿಕೊಂಡಿದ್ದಾಳೆ. ಇದಾದ ಬಳಿಕ ವರ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ಸಂಬಂಧ ವರನ ವಿರುದ್ಧ ತೋಫಖಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವರನ ಹೆಸರು ವಿಶಾಲ್ ಪವಾರ್. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ.

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು. ಹೆಂಡತಿ ತಕ್ಷಣ ತನ್ನ ತಂದೆ ತಾಯಿ ಮತ್ತು ಇತರ ಸಂಬಂಧಿಕರೊಂದಿಗೆ ಮದುವೆ ಮಂಟಪಕ್ಕೆ ತಲುಪಿದ್ದಾರೆ.

ಮದುವೆ ನಡೆಯುವ ಸ್ಥಳ ಪತ್ತೆ ಮಾಡಿದ ಮೊದಲ ಪತ್ನಿ, ಅಲ್ಲಿಗೆ ಬಂದು ಜಗಳವಾಡಿದ್ದಾಳೆ. ಈ ದಿಢೀರ್ ಘಟನೆಯಿಂದ ವಧುವಿನ ಸಂಬಂಧಿಕರೂ ಗೊಂದಲಕ್ಕೀಡಾಗಿದ್ದರು. ಮದುಮಗನಿಂದ ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲ್ಲಿಗೆ ಬಂದು ವರನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಮೊದಲ ಪತ್ನಿ ದೂರಿನ ಮೇರೆಗೆ ತೋಫ್ಖಾನಾ ಪೊಲೀಸ್ ಠಾಣೆಯಲ್ಲಿ ವಿಶಾಲ್ ಪವಾರ್ ವಿರುದ್ಧ ಸೆಕ್ಷನ್ 494 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಶಾಲ್ ಜಲ್ನಾ ಜಿಲ್ಲೆಯ ನಿವಾಸಿಯಾಗಿದ್ದು, ಆತನ ಮದುವೆಯಾಗಲಿದ್ದ ವಧು ಛತ್ರಪತಿ ಸಂಭಾಜಿ ನಗರದ ನಿವಾಸಿಯಾಗಿದ್ದಾರೆ. ಆದರೆ ಎರಡನೇ ಮದುವೆಯನ್ನು ಮೊದಲ ಪತ್ನಿಯಿಂದ ಮರೆಮಾಚಲು ಎರಡೂ ಕುಟುಂಬದವರು ನಗರದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಅಂತಿಮವಾಗಿ ಅವರ ಯೋಜನೆ ವಿಫಲವಾಯಿತು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!