AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು
ಮದುವೆ Image Credit source: Tv9 Marathi
ರಶ್ಮಿ ಕಲ್ಲಕಟ್ಟ
|

Updated on: Aug 23, 2023 | 5:02 PM

Share

ಅಹಮದ್‌ನಗರ ಆಗಸ್ಟ್ 23: ಅಹಮದ್‌ನಗರದಲ್ಲಿರುವ (Ahmednagar) ಕುಟುಂಬವೊಂದು ಮದುವೆಯ (Wedding) ಎಲ್ಲ ಸಿದ್ಧತೆ ನಡೆಸಿತ್ತು. ಕಲ್ಯಾಣ ಮಂಟಪ ಸಿಂಗಾರಗೊಂಡಿದ್ದ ವಧು-ವರರು ಇನ್ನೇನು ಹಾರ ಹಾಕಿಕೊಳ್ಳಲು ಮುಂದಾದಾಗ ಏಕಾಏಕಿ ಮದುಮಗನ ಮೊದಲ ಪತ್ನಿ ಮಂಟಪದಲ್ಲಿ ಕಾಣಿಸಿಕೊಂಡಿದ್ದಾಳೆ. ಇದಾದ ಬಳಿಕ ವರ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ಸಂಬಂಧ ವರನ ವಿರುದ್ಧ ತೋಫಖಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವರನ ಹೆಸರು ವಿಶಾಲ್ ಪವಾರ್. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ.

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು. ಹೆಂಡತಿ ತಕ್ಷಣ ತನ್ನ ತಂದೆ ತಾಯಿ ಮತ್ತು ಇತರ ಸಂಬಂಧಿಕರೊಂದಿಗೆ ಮದುವೆ ಮಂಟಪಕ್ಕೆ ತಲುಪಿದ್ದಾರೆ.

ಮದುವೆ ನಡೆಯುವ ಸ್ಥಳ ಪತ್ತೆ ಮಾಡಿದ ಮೊದಲ ಪತ್ನಿ, ಅಲ್ಲಿಗೆ ಬಂದು ಜಗಳವಾಡಿದ್ದಾಳೆ. ಈ ದಿಢೀರ್ ಘಟನೆಯಿಂದ ವಧುವಿನ ಸಂಬಂಧಿಕರೂ ಗೊಂದಲಕ್ಕೀಡಾಗಿದ್ದರು. ಮದುಮಗನಿಂದ ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲ್ಲಿಗೆ ಬಂದು ವರನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಮೊದಲ ಪತ್ನಿ ದೂರಿನ ಮೇರೆಗೆ ತೋಫ್ಖಾನಾ ಪೊಲೀಸ್ ಠಾಣೆಯಲ್ಲಿ ವಿಶಾಲ್ ಪವಾರ್ ವಿರುದ್ಧ ಸೆಕ್ಷನ್ 494 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಶಾಲ್ ಜಲ್ನಾ ಜಿಲ್ಲೆಯ ನಿವಾಸಿಯಾಗಿದ್ದು, ಆತನ ಮದುವೆಯಾಗಲಿದ್ದ ವಧು ಛತ್ರಪತಿ ಸಂಭಾಜಿ ನಗರದ ನಿವಾಸಿಯಾಗಿದ್ದಾರೆ. ಆದರೆ ಎರಡನೇ ಮದುವೆಯನ್ನು ಮೊದಲ ಪತ್ನಿಯಿಂದ ಮರೆಮಾಚಲು ಎರಡೂ ಕುಟುಂಬದವರು ನಗರದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಅಂತಿಮವಾಗಿ ಅವರ ಯೋಜನೆ ವಿಫಲವಾಯಿತು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್