AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

ಕಾನ್ಸ್​ಟೇಬಲ್ ಪ್ರಿಯಕರನಿಗೆ ಪ್ರಿಯತಮೆಯೇ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪುಟ್ಟೇನಹಳ್ಳಿ ಪೊಲೀಸರು (Puttenahalli Police Station) ಆರೋಪಿ ರಾಣಿ ಎಂಬುವವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಸಂಜಯ್​ಗೆ ಬೆಂಕಿ ಹಚ್ಚಿಲ್ಲವೆಂದು ಹೇಳಿಕೆ ನೀಡಿದ್ದಾಳೆ. ಸದ್ಯ ಎಫ್​ಎಸ್​ಎಲ್​ನಿಂದ ರಿಪೋರ್ಟ್ ಬಂದ ಬಳಿಕ ಘಟನೆಗೆ ಸ್ಪಷ್ಟ ಕಾರಣ ಸಿಗಲಿದೆ.

ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ
ಆರೋಪಿ ಅರೆಸ್ಟ್​
Shivaprasad B
| Edited By: |

Updated on: Dec 24, 2023 | 5:12 PM

Share

ಬೆಂಗಳೂರು, ಡಿ.24: ಕಾನ್ಸ್​ಟೇಬಲ್ ಪ್ರಿಯಕರನಿಗೆ ಪ್ರಿಯತಮೆಯೇ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪುಟ್ಟೇನಹಳ್ಳಿ ಪೊಲೀಸರು (Puttenahalli Police Station) ಆರೋಪಿ ರಾಣಿ ಎಂಬುವವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಸಂಜಯ್​ಗೆ ಬೆಂಕಿ ಹಚ್ಚಿಲ್ಲವೆಂದು ಹೇಳಿಕೆ ನೀಡಿದ್ದು, ಮೃತ ಸಂಜಯ್​ ಹಾಗೂ ನನ್ನ ಮಧ್ಯೆ ಜಗಳವಾಗಿತ್ತು. ಈ ವೇಳೆ ನಿನ್ನ ಸಾಯಿಸುತ್ತೇನೆ ಎಂದು ಸಂಜಯ್ ಬೆದರಿಕೆ ಹಾಕಿದ್ದ. ಈ ನಡುವೆ ಆತನೇ ಹೋಗಿ ಬಾಟಲ್​ನಲ್ಲಿ ಒಂದು ಲೀಟರ್ ಪೆಟ್ರೋಲ್ ತಂದು ಆತನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಕಡ್ಡಿ ಗೀಚಿ ಬೆದರಿಕೆ ಹಾಕಿದ್ದ. ಆ ವೇಳೆ ಬೆಂಕಿ ಆಕಸ್ಮಿಕವಾಗಿ ಸಂಜಯ್ ಗೆ ತಗಲಿತ್ತು ಎಂದು ರಾಣಿ ಹೇಳಿದ್ದಾರೆ.

ಸದ್ಯ FSL ನಿಂದ ರಿಪೋರ್ಟ್ ಬಂದ ಬಳಿಕ ಘಟನೆಗೆ ಸ್ಪಷ್ಟ ಕಾರಣ ಸಿಗಲಿದೆ

ಇನ್ನು ಈ ಘಟನೆಯ ಕುರಿತು ಬಂಧಿತ ಆರೋಪಿಯನ್ನು ವಿಚಾರಣೆ ಮಾಡಿದ ಪೊಲೀಸರು, ಸದ್ಯ ಎಫ್​ಎಸ್​ಎಲ್​ನಿಂದ ರಿಪೋರ್ಟ್ ಬಂದ ಬಳಿಕ ಘಟನೆಗೆ ಸ್ಪಷ್ಟ ಕಾರಣ ಸಿಗಲಿದೆ ಎಂದಿದ್ದಾರೆ. ಇನ್ನು ಹೋಮ್ ಗಾರ್ಡ್ ಆಗಿದ್ದ ರಾಣಿಗೆ ಸಂಜಯ್ ಮಾತ್ರವಲ್ಲದೆ ಬೇರೊಬ್ಬನ ಜೊತೆ ಸಲುಗೆ ಇದ್ದಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾನ್​ಸ್ಟೇಬಲ್ ಸಾವು

ಘಟನೆ ವಿವರ

ಪೇದೆಯಾಗಿರುವ ಸಂಜಯ್ ಮತ್ತು ಹೋಂಗಾರ್ಡ್ ಆಗಿರುವ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರ ಬೆಳೆದಿದೆ. ಮದುವೆಯಾಗಿದ್ದರೂ ಕೂಡ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ 2 ದಿನಗಳ ಹಿಂದೆ ಆಕೆ ಮನೆಗೆ ಸಂಜಯ್ ಹೋಗಿದ್ದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು ಎನ್ನಲಾಗಿತ್ತು. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ