ಗಾಳಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳವು: ಇರುಮುಡಿ ಹಣವನ್ನೂ ಬಿಡದ ಖದೀಮರು

ಬೆಂಗಳೂರು: ಬ್ಯಾಟರಾಯನಪುರದ ಮೈಸೂರು ರಸ್ತೆಯಲ್ಲಿರುವ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 15 ರಂದು ದೇಗುಲದ ಕೌಂಟರ್‌ನ ಲಾಕರ್‌ನಲ್ಲಿದ್ದ 48 ಸಾವಿರ ಕಳುವಾಗಿದೆ ಎಂದು ಪೊಲೀಸ್ ಠಾಣೆಗೆ ದೇಗುಲದ ಟ್ರಸ್ಟಿ ದೂರು ನೀಡಿದ್ದಾರೆ. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಗೋಡೆಯ ಮೇಲಿಂದ ಒಳ ನುಗ್ಗಿದ ಖತರ್ನಾಕ್ ಕಳ್ಳರು ಕೌಂಟರ್​ನ ಲಾಕರ್​ನಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. ಆ ಹಣವು ಧನುರ್ಮಾಸದ ಪ್ರಯುಕ್ತ ಭಕ್ತರ ಇರುಮುಡಿಯಿಂದ ಬಂದಿದೆ ಎಂದು ದೇವಸ್ಥಾನದ ಟ್ರಸ್ಟಿ […]

ಗಾಳಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳವು: ಇರುಮುಡಿ ಹಣವನ್ನೂ ಬಿಡದ ಖದೀಮರು
ಸಾಧು ಶ್ರೀನಾಥ್​

Updated on: Jan 27, 2020 | 10:29 AM

ಬೆಂಗಳೂರು: ಬ್ಯಾಟರಾಯನಪುರದ ಮೈಸೂರು ರಸ್ತೆಯಲ್ಲಿರುವ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 15 ರಂದು ದೇಗುಲದ ಕೌಂಟರ್‌ನ ಲಾಕರ್‌ನಲ್ಲಿದ್ದ 48 ಸಾವಿರ ಕಳುವಾಗಿದೆ ಎಂದು ಪೊಲೀಸ್ ಠಾಣೆಗೆ ದೇಗುಲದ ಟ್ರಸ್ಟಿ ದೂರು ನೀಡಿದ್ದಾರೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಗೋಡೆಯ ಮೇಲಿಂದ ಒಳ ನುಗ್ಗಿದ ಖತರ್ನಾಕ್ ಕಳ್ಳರು ಕೌಂಟರ್​ನ ಲಾಕರ್​ನಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. ಆ ಹಣವು ಧನುರ್ಮಾಸದ ಪ್ರಯುಕ್ತ ಭಕ್ತರ ಇರುಮುಡಿಯಿಂದ ಬಂದಿದೆ ಎಂದು ದೇವಸ್ಥಾನದ ಟ್ರಸ್ಟಿ ಮಂಜುನಾಥ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us