AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿಯನ್ನು ಬಂಧಿಸಿದ ಸಿಬಿಐ

ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪದ ಮೇಲೆ ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಚಂದಾ ಕೊಚ್ಚರ್ ಹಾಗೂ ಅವರ ಗಂಡನನ್ನು ಸಿಬಿಐ ಅರೆಸ್ಟ್ ಮಾಡಿದೆ.

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿಯನ್ನು ಬಂಧಿಸಿದ ಸಿಬಿಐ
ಚಂದಾ ಕೊಚ್ಚರ್
TV9 Web
| Edited By: |

Updated on: Dec 23, 2022 | 11:11 PM

Share

ನವದೆಹಲಿ: ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ (Chanda Kochha) ಹಾಗೂ ಅವರ ಗಂಡ ದೀಪಕ್ ಕೊಚ್ಚರ್​ ಅವರನ್ನು ಸಿಬಿಐ ಬಂಧಿಸಿದೆ. ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ದಂಪತಿಯನ್ನು ಇಂದು(ಡಿಸೆಂಬರ್ 23) ಸಿಬಿಐ (CBI)ಅರೆಸ್ಟ್ ಮಾಡಿದೆ.

ಚಂದಾ ಕೊಚ್ಚರ್ ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪದ ಮೇಲೆ ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿ ಮಾಡಿದ್ದಾರೆ ಎನ್ನುವ ಆರೋಪ ಚಂದಾ ಕೊಚ್ಚರ್ ದಂಪತಿ ಮೇಲಿದೆ.

2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ತನಿಖೆ ಪ್ರಾರಂಭವಾದ ನಂತರ 2018ರಲ್ಲಿ ಚಂದಾ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ