AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ.ಸಾಲ ಪಡೆದು ವಂಚಿಸಿದ ಉದ್ಯಮಿಗಳಿಗೆ ಬಲೆ ಬೀಸಿದ ಸಿಬಿಐ; ಎಫ್​ಐಆರ್ ದಾಖಲು

ದೊಡ್ಡಬಳ್ಳಾಪುರ, ಶ್ರೀರಂಗಪಟ್ಟಣ, ಬೇಲೂರಿನಲ್ಲಿ ಒಟ್ಟು 65 ಎಕರೆ ವಿಸ್ತೀರ್ಣದಲ್ಲಿ ಔಷಧೀಯ ಸಸ್ಯ ಬೆಳೆದು ನಮ್ಮ ಕಂಪನಿಯಿಂದಲೇ ವಿದೇಶಕ್ಕೆ ರಫ್ತು ಮಾಡುತ್ತೇವೆ. ಹಾಗಾಗಿ ಸಾಲ ಬೇಕು ಎಂದು ಹೇಳಿ 2009ರಲ್ಲಿ ಬ್ಯಾಂಕ್​ನ ಕೃಷಿಸಾಲ ವಿಭಾಗದ ಅಧಿಕಾರಿಯನ್ನು ಸಂಪರ್ಕ ಮಾಡಿದ್ದರು.

ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ.ಸಾಲ ಪಡೆದು ವಂಚಿಸಿದ ಉದ್ಯಮಿಗಳಿಗೆ ಬಲೆ ಬೀಸಿದ ಸಿಬಿಐ; ಎಫ್​ಐಆರ್ ದಾಖಲು
ಸಿಬಿಐ ಕಚೇರಿ
Lakshmi Hegde
|

Updated on: Dec 05, 2020 | 6:44 PM

Share

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ, ಐಡಿಬಿಐ ಬ್ಯಾಂಕ್​ನಿಂದ 65.33ಕೋಟಿ ರೂ. ಸಾಲ ಪಡೆದು ವಂಚಿಸಿದ ಉದ್ಯಮಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

ಗ್ರೀನ್​ ಆರ್ಗ್ಯಾನಿಕ್ ಪ್ರೈವೇಟ್ ಲಿಮಿಟೆಡ್​ನ ನಿರ್ದೇಶಕರಾದ ರಮೇಶ್​ ಬಿ.ಗೌಡ, ಜೆ.ಸಿ ರಮ್ಯಾ, ಚಂದ್ರಶೇಖರ್​ ಬಾಲಸುಬ್ರಹ್ಮಣ್ಯ ವಿರುದ್ಧ ಸಂಚು, ನಂಬಿಕೆ ದ್ರೋಹ, ವಂಚನೆ ಪ್ರಕರಣದಡಿ ಎಫ್​ಐಆರ್ ದಾಖಲಾಗಿದೆ. ಇವರಲ್ಲಿ ರಮೇಶ್ ಮತ್ತು ರಮ್ಯಾ ದಂಪತಿ. ಈ ಎಲ್ಲರ ವಿರುದ್ಧ ಐಡಿಬಿಐ ಬ್ಯಾಂಕ್​ನ ಉಪಪ್ರಬಂಧಕ ಜಿ.ಬಸಂತ್ ಚಕ್ರವರ್ತಿ ದೂರು ನೀಡಿದ್ದರು.

ದೊಡ್ಡಬಳ್ಳಾಪುರ, ಶ್ರೀರಂಗಪಟ್ಟಣ, ಬೇಲೂರಿನಲ್ಲಿ ಒಟ್ಟು 65 ಎಕರೆ ವಿಸ್ತೀರ್ಣದಲ್ಲಿ ಔಷಧೀಯ ಸಸ್ಯ ಬೆಳೆದು ನಮ್ಮ ಕಂಪನಿಯಿಂದಲೇ ವಿದೇಶಕ್ಕೆ ರಫ್ತು ಮಾಡುತ್ತೇವೆ. ಹಾಗಾಗಿ ಸಾಲ ಬೇಕು ಎಂದು ಹೇಳಿ 2009ರಲ್ಲಿ ಬ್ಯಾಂಕ್​ನ ಕೃಷಿಸಾಲ ವಿಭಾಗದ ಅಧಿಕಾರಿಯನ್ನು ಸಂಪರ್ಕ ಮಾಡಿದ್ದರು. ಕೆನರಾ ಬ್ಯಾಂಕ್​ನಲ್ಲಿ 41.07 ಕೋಟಿ ರೂ. ಸಾಲ ವರ್ಗಾಯಿಸಿಕೊಂಡು, ಹೆಚ್ಚುವರಿ ಸಾಲ ನೀಡುವಂತೆ ರಮೇಶ್​ ಮತ್ತು ಟೀಂ ಮನವಿ ಮಾಡಿತ್ತು. 2015ರಲ್ಲಿ ವಿವಿಧ ಹಂತದಲ್ಲಿ ಐಡಿಬಿಐ ಬ್ಯಾಂಕ್​ನಿಂದ 65.33 ಕೋಟಿ ರೂ.ಸಾಲ ಪಡೆದಿದ್ದರು. ಆದರೆ ಹಣ ಪಾವತಿಸಿರಲಿಲ್ಲ..125.63 ಕೋಟಿ ರೂ. ಬಾಕಿ ನೀಡದ ಹಿನ್ನೆಲೆಯಲ್ಲಿ ತನಿಖೆಯೂ ಪ್ರಾರಂಭವಾಗಿತ್ತು.

ಬೇರೆ ಬೇರೆ ಕಂಪನಿಗಳ ಮೇಲಿದ್ದ ಸಾಲವನ್ನು ಜಿಒಐಪಿಎಲ್ ಸಾಲ ಎಂದು ಸುಳ್ಳು ದಾಖಲೆ‌ ಸೃಷ್ಟಿಸಿ ಐಡಿಬಿಐ ಬ್ಯಾಂಕ್​​ಗೆ ಹಣ ರ್ಗಾವಣೆ ಮಾಡಲಾಗಿತ್ತು. ಅಲ್ಲದೆ ಬ್ಯಾಂಕ್‌ ನೀಡಿದ ಸಾಲದ ಪೈಕಿ 15 ಕೋಟಿ ರೂ.ವೈಯಕ್ತಿಕ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಮತ್ತೆ ಇದೇ ಕಂಪನಿಯ ಹೆಸರಿನಲ್ಲಿ ಕೆನರಾಬ್ಯಾಂಕ್ ಸೇರಿ, ವಿವಿಧ ಬ್ಯಾಂಕ್​ಗಳಲ್ಲಿ ಸಾಲ ಪಡೆದು, ವಂಚನೆ ಮಾಡಿದ್ದು ಬೆಳಕಿಗೆ ಬಂದಿದೆ.

ಕೇಂದ್ರ ಸಚಿವರ ಜೊತೆ ರೈತರ 5ನೇ ಸುತ್ತಿನ ಮಾತುಕತೆ ಆರಂಭ: ಬಸ್​ನಲ್ಲೇ ಸಭೆಗೆ ಆಗಮಿಸಿದ ಕೃಷಿಕರು

ಮಗಳ ಮೇಲೆ ಅಪ್ಪ-ಅಣ್ಣನಿಂದ ತೀವ್ರ ಹಲ್ಲೆ.. ಯುವತಿಯ ಕೈ ಬೆರಳು ಕಟ್!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!