ಯೋಗೀಶ್ ಗೌಡ ಹತ್ಯೆ: ವಿನಯ್ ಕುಲಕರ್ಣಿ ಸಹೋದರನ ವಿಚಾರಣೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳೆದುರು ಇಂದು ವಿಚಾರಣೆಗೆ ಹಾಜರಾದರು ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿಯಲ್ಲಿ ನಡೆದ ವಿಚಾರಣೆಯ ನಂತರ ಮಾಧ್ಯಮದವರೊಂದಿಗೆ ಮಾತಾಡಿದ ವಿಜಯ್ ಕುಲಕರ್ಣಿ, ‘‘ಸದರಿ ಪ್ರಕರಣ ಸಂಬಂಧ ಸಿಬಿಐ ಇದುವರೆಗೆ 537 ಜನರನ್ನು ವಿಚಾರಣೆ ನಡೆಸಿದೆ, ಅವರಲ್ಲಿ ನಾನೂ ಒಬ್ಬ, ಇಂದು ವಿಚಾರಣೆಗೆ ಕರೆದಿದ್ದರು, ಅದಕ್ಕಾಗಿ ಬಂದಿದ್ದೆ,’’ ಎಂದು […]

ಯೋಗೀಶ್ ಗೌಡ ಹತ್ಯೆ: ವಿನಯ್ ಕುಲಕರ್ಣಿ ಸಹೋದರನ ವಿಚಾರಣೆ
ಅರುಣ್​ ಕುಮಾರ್​ ಬೆಳ್ಳಿ

Updated on: Sep 14, 2020 | 8:29 PM

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳೆದುರು ಇಂದು ವಿಚಾರಣೆಗೆ ಹಾಜರಾದರು

ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿಯಲ್ಲಿ ನಡೆದ ವಿಚಾರಣೆಯ ನಂತರ ಮಾಧ್ಯಮದವರೊಂದಿಗೆ ಮಾತಾಡಿದ ವಿಜಯ್ ಕುಲಕರ್ಣಿ, ‘‘ಸದರಿ ಪ್ರಕರಣ ಸಂಬಂಧ ಸಿಬಿಐ ಇದುವರೆಗೆ 537 ಜನರನ್ನು ವಿಚಾರಣೆ ನಡೆಸಿದೆ, ಅವರಲ್ಲಿ ನಾನೂ ಒಬ್ಬ, ಇಂದು ವಿಚಾರಣೆಗೆ ಕರೆದಿದ್ದರು, ಅದಕ್ಕಾಗಿ ಬಂದಿದ್ದೆ,’’ ಎಂದು ಹೇಳಿದರು.

ತಮಗೆ ಕೇಳಲಾದ ಪ್ರಶ್ನೆಗಳ ಕುರಿತು ವಿವರಣೆ ನೀಡಲು ನಿರಾಕರಿಸಿದ ವಿಜಯ್, ಈ ಹಂತದಲ್ಲಿ ಅದನ್ನೆಲ್ಲ ಹೇಳುವುದು ತಪ್ಪಾಗುತ್ತದೆ, ಅಧಿಕಾರಿಗಳು ಮತ್ತೊಮ್ಮೆ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು.

ಸ್ಥಳೀಯ ಬಿಜೆಪಿ ನಾಯಕ ಮತ್ತು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರನ್ನು ಜೂನ್ 15, 2016 ರಂದು ಅವರ ಜಿಮ್ ಮುಂಭಾಗದಲ್ಲೇ ಕಣ್ಣಿನಲ್ಲಿ ಮೆಣಸಿನಕಾಯಿ ಪುಡಿ ಎಸೆದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us