ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಕಪಾಲಿ ಮೋಹನ್ ಆಪ್ತ ಸಿಸಿಬಿ ಬಲೆಗೆ

ಅಕ್ರಮ ಹಣ ವರ್ಗಾವಣೆ ಮತ್ತು ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಶೆಟ್ಟಿ ಬಂಧಿತ ಆರೋಪಿ.

ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಕಪಾಲಿ ಮೋಹನ್ ಆಪ್ತ ಸಿಸಿಬಿ ಬಲೆಗೆ
ನಾಗರಾಜ ಶೆಟ್ಟಿ
Follow us
|

Updated on:Dec 06, 2020 | 11:13 AM

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಶೆಟ್ಟಿ ಬಂಧಿತ ಆರೋಪಿ.

ಅಧಿಕ ಬಡ್ಡಿಗಾಗಿ ಕಿರುಕುಳ ನೀಡುತ್ತಿರುವುದಾಗಿ ನಾಗರಾಜ ಶೆಟ್ಟಿ ವಿರುದ್ಧ ಸಿಸಿಬಿಗೆ ಹಲವು ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವೈಯಾಲಿಕಾವಲ್‌ನ ನಾಗರಾಜ ಶೆಟ್ಟಿಯನ್ನು ಬಂಧಿಸಿದ್ದಾರೆ. ಹಾಗೂ ಸಾಲ ಪಡೆದವರಿಂದ ಪಡೆದಿದ್ದ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ. 22 ಲಕ್ಷ ನಗದು, 164 ಚೆಕ್, 84 ಪ್ರಾಮಿಸರಿ ನೋಟ್ ಸೇರಿದಂತೆ ಆಸ್ತಿ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಪಾಲಿ ಮೋಹನ್ ಆಪ್ತ ನಾಗರಾಜ ಶೆಟ್ಟಿ: ಮೂಲತಃ ಶಿವಮೊಗ್ಗದ ನಾಗರಾಜ ಶೆಟ್ಟಿ ವೈಯಾಲಿಕಾವಲ್​ನಲ್ಲಿ ಬಾಲಾಜಿ ಫೈನಾನ್ಸ್ ನಡೆಸುತಿದ್ದ. ಈತ ಮೃತ ಕಪಾಲಿ ಮೋಹನ್ ಆಪ್ತ. ವೈಯಾಲಿಕಾವಲ್, ಮಲ್ಲೇಶ್ವರಂ ಸುತ್ತಮುತ್ತಲಿನ ಉದ್ಯಮಿಗಳು ಮತ್ತು ವ್ಯಾಪಾರಸ್ಥರಿಗೆ ಸಾಲ ನೀಡಿದ್ದ. ದಿನದ ಲೆಕ್ಕದಲ್ಲಿ ಹೆಚ್ಚು ಬಡ್ಡಿ ವಸೂಲಿ ಮಾಡುತಿದ್ದ. ಒಂದು ವರ್ಷಕ್ಕೆ ಪಡೆದ ಸಾಲಕ್ಕೆ ಸುಮಾರು 60% ರಷ್ಟು ಬಡ್ಡಿ ಪಡೆಯುತಿದ್ದ. ಅಲ್ಲದೆ ಕನ್ನಡದ ಕೆಲ ಸಿನಿಮಾದಲ್ಲೂ ನಾಗರಾಜದ ಶೆಟ್ಟಿ ನಟಿಸಿದ್ದಾನೆ. ಇನ್ನು ಬಡ್ಡಿ ದಂಧೆಕೋರರ ವಿರುದ್ಧ ಸಿಸಿಬಿ ಕಾರ್ಯಾಚರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದೆ. ಈತನ ಬಗ್ಗೆ ಮತ್ತಷ್ಟು ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.

Published On - 9:07 am, Sun, 6 December 20

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ