AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಯನ್ನು ನೋಡಲು ಬೆಂಗಳೂರಿಗೆ ಬಂದಿದ್ದ ಹರಿಯಾಣದ ನಕ್ಸಲ್​​ ಅರೆಸ್ಟ್​

ಗೆಳತಿಯನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಹರಿಯಾಣ ಮೂಲದ ನಕ್ಸಲ್ ಅನಿರುದ್ದ್​​ನನ್ನು ಕೇಂದ್ರ ಅಪರಾಧ ವಿಭಾಗದ ಎಟಿಸಿ ತಂಡ ಬಂಧಿಸಿದೆ. ಆರೋಪಿಯ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಬಂಧಿತ ನಕ್ಸಲ್ ಅನಿರುದ್ದ್​ನನ್ನು ಕಸ್ಟಡಿಗೆ ಪಡೆದು ಎಟಿಸಿ ತಂಡ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.

ಗೆಳತಿಯನ್ನು ನೋಡಲು ಬೆಂಗಳೂರಿಗೆ ಬಂದಿದ್ದ ಹರಿಯಾಣದ ನಕ್ಸಲ್​​ ಅರೆಸ್ಟ್​
ಸಿಸಿಬಿ, ಅನಿರುದ್ದ್
ವಿವೇಕ ಬಿರಾದಾರ
|

Updated on:Sep 06, 2024 | 2:27 PM

Share

ಬೆಂಗಳೂರು, ಸೆಪ್ಟೆಂಬರ್​ 06: ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ (Bengaluru) ಬಂದಿದ್ದ ನಕ್ಸಲ್​ನನ್ನು (Naxal) ಕೇಂದ್ರ ಅಪರಾಧ ವಿಭಾಗ (CCB)ದ ಎಟಿಸಿ ತಂಡ ಬಂಧಿಸಿದೆ. ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್. ಅನಿರುದ್ದ್ ನಿಷೇಧಿತ ಸಿಪಿಐ(ಎಂ) ನಕ್ಸಲ್ ಸಂಘಟನೆಯಲ್ಲಿ ಇದ್ದನು. ಅನಿರುದ್ದ್ ನಿಷೇಧಿತ ಬರಹಗಳನ್ನ ಬರೆದು ಪೋಸ್ಟ್​ ಮಾಡುತ್ತಿದ್ದನು. ಈತನಿಗಾಗಿ ಪೊಲೀಸ್​ ಮತ್ತು ನಕ್ಸಲ್ ನಿಗ್ರಹ ತಂಡ ಬಲೆ ಬೀಸಿತ್ತು. ಆದರೆ, ಅನಿರುದ್ದ್​ ಬಲೆಗೆ ಬಿದ್ದಿರಲಿಲ್ಲ. ಘಟನೆ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನಿರುದ್ದ್ ರಾಜನ್ ಗೆಳತಿಯನ್ನು ನೋಡಲು 3-4 ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದನು. ಅನಿರುದ್ದ್ ರಾಜನ್ ಗುರುವಾರ ಬೆಳಗ್ಗೆ 8 ಗಂಟೆಗೆ ಚೆನ್ನೈಗೆ ಹೋಗಲು ಕೆಎಸ್ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದನು. ಈ ವೇಳೆ ಆತನ ಮೇಲೆ ನಿಗಾ ಇಟ್ಟಿದ್ದ ಎಟಿಸಿ ತಂಡ ಬಂಧಿಸಿದೆ. ತನಿಖೆ ವೇಳೆ, ಅನಿರುದ್ದ್ ರಾಜನ್ ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸಿರುವುದು ಪತ್ತೆಯಾಗಿದೆ. ನಕ್ಸಲ್ ಅನಿರುದ್ದ್,  ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಹೊಂದಿದ್ದಾನೆ.

ಇದನ್ನೂ ಓದಿ: ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ: ತನಿಖೆಗೆ ಆದೇಶ

ಆರೋಪಿ ಅನಿರುದ್ದ್ ರಾಜನ್​ನಿಂದ 2 ಬ್ಯಾಗ್​, ಪೆನ್​ಡ್ರೈವ್​ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. ಅನಿರುದ್ದ ರಾಜನ್​ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

​ಎಡಪಂಥಿಯ ಸಂಘಟನೆಗೆ ಸೇರಿದ ಅನಿರುದ್ದ್ ಬಂಧನ: ದಯಾನಂದ್​

ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ಹರಿಯಾಣ ಮೂಲದ ಅನಿರುದ್ದ ರಾಜನ್​ ಖಾಸಗಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದನು. ಈತ ನಿಷೇಧಿತ ಎಡಪಂಥಿಯ ಸಂಘಟನೆಯ ಸಂಪರ್ಕ ಹೊಂದಿದ್ದಾನೆ. ಆ ಸಂಘಟನೆಗಳ ಜೊತೆಗೆ ಈತ ಕಾರ್ಯ ನಿರ್ವಹಿಸುತ್ತಿದ್ದನು. ಸದ್ಯ ಆತನನ್ನ ಬಂಧಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನ 15 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದೇವೆ.‌ ಸದ್ಯ ಆತನ ಕಾರ್ಯ ಚಟುವಟಿಕೆ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Fri, 6 September 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್