AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಾದಕ ವಸ್ತು ಮಾರುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರ ಬಂಧನ

ಓರಿಸ್ಸಾ ಮೂಲದ ಇಬ್ಬರು ಆರೋಪಿಗಳು ಕಳೆದ ಆರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಆರೋಪಿಗಳು ಮಾರತ್ತಹಳ್ಳಿ ಮತ್ತು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ತಳ್ಳುವ ಗಾಡಿಯಲ್ಲಿ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಈ ನಡುವೆ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಆರಂಭಿಸಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಬೆಂಗಳೂರು: ಮಾದಕ ವಸ್ತು ಮಾರುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರ ಬಂಧನ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Nov 30, 2023 | 12:57 PM

Share

ಬೆಂಗಳೂರು ನ.30: ನಗರದಲ್ಲಿ ಮಾದಕ ವಸ್ತುಗಳನ್ನು (Narcotics) ಮಾರುತ್ತಿದ್ದ ಓರ್ವ ವಿದೇಶಿ ಹಾಗೂ ಓರಿಸ್ಸಾ (Odisha) ಮೂಲದ ಇಬ್ಬರನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರಿಂದ 50 ಲಕ್ಷ ಮೌಲ್ಯದ ಡ್ರಗ್ (Drugs) ಜಪ್ತಿ ಮಾಡಿಕೊಳ್ಳಲಾಗಿದೆ. ಓರಿಸ್ಸಾ ಮೂಲದ ಇಬ್ಬರು ಆರೋಪಿಗಳು ಕಳೆದ ಆರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಆರೋಪಿಗಳು ಮಾರತ್ತಹಳ್ಳಿ ಮತ್ತು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ತಳ್ಳುವ ಗಾಡಿಯಲ್ಲಿ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು.

ಈ ನಡುವೆ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಆರಂಭಿಸಿದ್ದರು. ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಆರೋಪಿಯನ್ನ ಬಂಧಿಸಿ 15ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಾದಕ ವಸ್ತು ಸಾಗಾಣಿಕೆ ಶಂಕೆ: ಬೆಂಗಳೂರಿಗೆ ಬರುವ ಅಂತರಾಜ್ಯ ಬಸ್​ಗಳ ತಪಾಸಣೆ ನಡೆಸಿದ ಸಿಸಿಬಿ

ಇನ್ನು ವಿದೇಶಿ ಪ್ರಜೆ 2005ರಲ್ಲಿ ಬ್ಯುಸಿನೆಸ್ ವಿಸಾದಿಂದ ಬೆಂಗಳೂರಿಗೆ ಬಂದಿದ್ದನು. ಪಾಸ್ ಪೋರ್ಟ್ ಅವಧಿ ಮುಗಿದರೂ ಬೆಂಗಳೂರಿನಲ್ಲಿ ವಾಸವಾಗಿದ್ದನು. ಈತ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡಲು ಆರಂಭಿಸಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 180 ಗ್ರಾಂ ಎಮ್​ಡಿಎಮ್​ಎ, 58 ಗ್ರಾಮ್​150 ಎಕ್ಸಟಸಿ ಪಿಲ್ಸ್ ಜಪ್ತಿ ಮಾಡಲಾಗಿದೆ. ಎನ್​ಡಿಪಿಎಸ್ ಜೊತೆಗೆ ವಿದೇಶಿಯರ ಕಾಯ್ದೆ ಅಡಿಯಲ್ಲಿ ಹೆಣ್ಣೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏಕ ಕಾಲದಲ್ಲಿ 3 ಅಂಗಡಿಗಳಲ್ಲಿನ ಲಕ್ಷಾಂತರ ರೂಪಾಯಿ ಕಳ್ಳತನ

ಉತ್ತರ ಕನ್ನಡ: ಮೂರು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿರುವ ಘಟನೆ ಹಳಿಯಾಳ ಪಟ್ಟಣದ ಕೆಎಸ್​​​ಆರ್​​ಟಿಸಿ ಬಸ್​​ ನಿಲ್ದಾಣದ ಬಳಿ ನಡೆದಿದೆ. ಜ್ಯೋತಿ ಮೆಡಿಕಲ್​​​, ಎ.ಕೆ. ಪ್ಯಾಷನ್​​ ಬಟ್ಟೆ ಅಂಗಡಿ ಹಾಗೂ ಸ್ಟಾರ್​​ ಪಾನ್​ ಶಾಪ್​​​​ನಲ್ಲಿ ಕಳ್ಳತನವಾಗಿದೆ. ಹಳಿಯಾಳ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:57 pm, Thu, 30 November 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?