AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು
ಬಂಧನ (ಸಾಂದರ್ಭಿಕ ಚಿತ್ರ)
Jagadisha B
| Edited By: |

Updated on: Jan 12, 2024 | 2:56 PM

Share

ಬೆಂಗಳೂರು, ಜನವರಿ 12: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನು (Drug Peddler) ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಗಿರಿನಗರ, ಮಡಿವಾಳ, ಚಿಕ್ಕಜಾಲ, ಆರ್.ಟಿ.ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಬಂಧಿತರ ವಿರುದ್ಧ ಒಟ್ಟು ಐದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರಿಂದ 18.5 ಕೆಜಿ ಗಾಂಜಾ, 203 ಗ್ರಾಂ ಎಂಡಿಎಂಎ, 410 ಎಕ್ಸ್ ಟಸಿ ಪಿಲ್ಸ್, 7 ಮೊಬೈಲ್, 2 ದ್ವಿಚಕ್ರವಾಹ, 1 ಕಾರ್ ವಶಕ್ಕೆ ಪಡೆದುಕೊಂಡಿದ್ದಾರೆ.

ಡ್ರಗ್ ಪೆಡ್ಲರ್​ನಿಂದ 12 ಲಕ್ಷ ರೂ. ಜಪ್ತಿ

ಬೆಂಗಳೂರು ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಎಂಬುವನಿಂದ 12 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ. ಬಳಿ ಇದ್ದ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. NDPS ಕಾಯ್ದೆಯ ಕಲಂ 5(A) ಹಾಗೂ 68 (E) ಹಾಗೂ 68 (F) ರಲ್ಲಿನ ಅಧಿಕಾರ ಚಲಾಯಿಸಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ವಿದ್ಯಾರಣ್ಯ ಪೊಲೀಸರು 2023ರಲ್ಲಿ ಈತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರಿಂದ ಡ್ರಗ್ಸ್ ವಿರುದ್ದ ಜಾಗೃತಿ; ನೋ ಡ್ರಗ್ಸ್ ಎಂದ ನಟ ಗಣೇಶ್

ಪೀಟರ್​​ ಹೆಂಡತಿಯ ಅಕೌಂಟ್ ಸೇರಿ ಒಟ್ಟು 7 ಅಕೌಂಟಗಳ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪೀಟರ್​ 2018ರಲ್ಲಿ ವೈದ್ಯಕೀಯ ವೀಸಾದ ಮೂಲಕ ಭಾರತಕ್ಕೆ ಬಂದು ನೆಲೆಸಿದ್ದಾನೆ. ಪೀಟರ್ 2022 ರಲ್ಲಿ ಮಣಿಪುರ ಮೂಲದ ಯುವಯಿಯನ್ನು ಮದುವೆಯಾಗಿದ್ದಾನೆ. ಪೀಟರ್​ ಹೆಂಡತಿಯ ಹೆಸರಲ್ಲಿ ನಗರದಲ್ಲಿ ಎರೆಡು ಬ್ಯಾಂಕ್ ಖಾತೆ ಹೊಂದಿದ್ದಾನೆ. ಆರೋಪಿ ಪೀಟರ್​​ ಯುಪಿಐ ಪೇಮೆಂಟ್ ಮೂಲಕ ವಹಿವಾಟು ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ